Latest Updates
-
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: 999 ರೂ. ಒಳಗಿನ ಬೆಸ್ಟ್ ಡೀಲ್ಗಳು ಮತ್ತು ಶಾಪಿಂಗ್ ಟಿಪ್ಸ್! -
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ!
ಮಹಾಶಿವರಾತ್ರಿಗೆ ಮಾಡಿ ಕಡ್ಲೆ ತಂಬಿಟ್ಟು: ಬಹಳ ಸುಲಭದ ಸಿಹಿ ತಿಂಡಿ ಇದು!
ಶಿವರಾತ್ರಿ ಹಬ್ಬ ಆಗಮಿಸಿದೆ. ಶಿವನ ಆಶೀರ್ವಾದ ಪಡೆಯಲು ಈ ಸಮಯದಲ್ಲಿ ದೇವಾಲಯ ಭೇಟಿ ಮಾಡುವುದು, ಮನೆಯಲ್ಲಿ ಶಿವನ ಪೂಜೆ ಮಾಡುವುದು ಸಾಮಾನ್ಯ. ಈ ವಿಶೇಷ ಸಂದರ್ಭದಲ್ಲಿ ಶಿವನಿಗೆ ವಿಶೇಷ ಪೂಜೆಯಿಂದ ನಿಮಗೆ ಅದೃಷ್ಟ ಒಲಿಯಲಿದೆ. ಹಾಗೆ ನಿಮ್ಮ ಹಲವು ಸಮಸ್ಯೆಗಳಿಗೆ ಪರಿಹಾರ ಪಡೆಯುವ ಸಮಯವೂ ಇದಾಗುತ್ತದೆ. ಹಾಗೆ ಈ ಹಬ್ಬದ ಸಮಯದಲ್ಲಿ ನಾವು ವಿಶೇಷ ರೀತಿಯಲ್ಲಿ ಮಾಡುವಂತಹ ತಂಬಿಟ್ಟು ಮಾಡುವ ಕುರಿತು ತಿಳಿಯೋಣ. ಅದ್ರಲ್ಲೂ ಹಬ್ಬಕ್ಕೆ ಮಾಡುವ ವಿಭಿನ್ನ ರುಚಿಯ ಕಡ್ಲೆ ತಂಬಿಟ್ಟು ಮಾಡೋದು ಹೇಗೆ ಅನ್ನೋದು ನಿಮಗೆ ಗೊತ್ತಾ?
ನೀವು ಸಹ ಅಂಗಡಿಗಳಲ್ಲಿ ಸಿಗುವ ವಿವಿಧ ಬಗೆಯ ತಂಬಿಟ್ಟು ಉಂಡೆಯನ್ನು ಸವಿದಿರುತ್ತೀರಿ. ಅದ್ರಲ್ಲೂ ಹಬ್ಬಗಳಲ್ಲಿ ನೀವು ಮನೆಯಲ್ಲೂ ಮಾಡಿ ಸವಿದಿರುತ್ತೀರಿ. ಉತ್ತರ ಕರ್ನಾಟಕ ಭಾಗದಲ್ಲಿ ಈ ತಂಬಿಟ್ಟು ಉಂಡೆ ಬಹಳ ಫೇಮಸ್ ಖಾದ್ಯಗಳಲ್ಲಿ ಒಂದು. ಯಾವುದೇ ಹಬ್ಬವಾಗಿದ್ದರೂ ಈ ತಂಬಿಟ್ಟು ಉಂಡೆ ಮಾಡಿ ಸವಿದಿರುತ್ತಾರೆ. ಹಾಗೆ ಬಗೆ ಬಗೆಯ ತಂಬಿಟ್ಟು ಸವಿಯೋದು ಸಹ ಇದೆ.
ಈ ತಂಬಿಟ್ಟನ್ನು ನೀವು ಬಹಳ ಸಮಯ ಇಟ್ಟು ಸವಿಯಬಹುದು, ಬಹುಬೇಗ ಹಾಳಾಗುವುದೂ ಇಲ್ಲ. ಹೀಗಾಗಿ ಮನೆಯಲ್ಲಿ ಒಮ್ಮೆ ಮಾಡಿಟ್ಟು ಹಲವು ದಿನಗಳ ಕಾಲ ಸವಿಯೋದು ನೋಡಬಹುದು. ಮಕ್ಕಳಿಗೂ ಇದು ಬಹಳ ಇಷ್ಟವಾಗುವ ತಿಂಡಿ. ಇದಲ್ಲದೆ ಮಾಡುವುದು ಕೂಡ ಬಹಳ ಸುಲಭ. ಹೀಗಾಗಿ ನಾವಿಂದು ಈ ಹಬ್ಬದ ಸಮಯದಲ್ಲಿ ಕೂಡ ಈ ಕಡಲೆ ತಂಬಿಟ್ಟು ಮಾಡುವ ಕುರಿತಾಗಿ ತಿಳಿದುಕೊಳ್ಳೋಣ.
ಕಡ್ಲೆ ತುಂಬಿಟ್ಟು ಮಾಡಲು ಯಾವೆಲ್ಲಾ ವಸ್ತುಗಳು ಬೇಕು?
- ಹುರಿಗಡಲೆ
- ಕಡಲೆ ಬೀಜ
- ಏಲಕ್ಕಿ
- ಎಣ್ಣೆ
- ಎಳ್ಳು
- ಬೆಲ್ಲ
ಕಡ್ಲೆ ತುಂಬಿಟ್ಟು ಮಾಡುವ ವಿಧಾನವೇನು?
ಒಲೆ ಮೇಲೆ ಬಾಣಲೆ ಇಟ್ಟು ಅದಕ್ಕೆ 2 ಕಪ್ ಹುರಿಗಡಲೆ ಹಾಕಿ 1 ನಿಮಿಷ ಬಿಸಿ ಮಾಡಿಕೊಳ್ಳಿ. ನಂತರ ಒಲೆ ಆಫ್ ಮಾಡಿ ಹುರಿಗಡಲೆಯನ್ನು ಮಿಕ್ಸಿ ಜಾರ್ಗೆ ಹಾಕಿಕೊಳ್ಳಿ. ನಂತರ ಇದಕ್ಕೆ ಕಾಲು ಚಮಚ ಏಲಕ್ಕಿ ಬೀಜ ಸಹ ಹಾಕಿ ನುಣ್ಣಗೆ ಪುಡಿ ಮಾಡಿಕೊಂಡ ಪುಡಿಯನ್ನು ತೆಗೆದು ಬೌಲ್ಗೆ ಹಾಕಿಟ್ಟುಕೊಳ್ಳಿ. ಈಗ ಒಲೆ ಮೇಲೆ ಬಾಣಲೆ ಇಟ್ಟು ಅದಕ್ಕೆ ಒಂದು ಕಪ್ ಕಡಲೆ ಬೀಜ ಹಾಕಿ ಹುರಿದುಕೊಳ್ಳಿ.
ಈಗ ಹುರಿದ ಕಾಳುಗಳಿಂದ ಸಿಪ್ಪೆ ಬೇರ್ಪಡಿಸಬೇಕು ಯಾವ ವಿಧಾನವನ್ನಾದರು ಬಳಸಿ ಚಿಪ್ಪೆ ತೆಗೆದು ಕಾಳನ್ನು ಒಡೆದುಕೊಳ್ಳಿ. ಈಗ ಈ ಕಡಲೆಯನ್ನು ಮಿಕ್ಸಿ ಜಾರ್ಗೆ ಹಾಕಿ ತರಿ ತರಿಯಾಗಿ ಪುಡಿ ಮಾಡಿಕೊಳ್ಳಬೇಕು. ಅನಂತರ ಈ ಪುಡಿಯನ್ನು ಸಹ ಹುರಿಗಡಲೆ ಪುಡಿಯೊಂದಿಗೆ ಸೇರಿಸಿ ಮಿಕ್ಸ್ ಮಾಡಿ. ಈಗ ಮತ್ತೆ ಬಾಣಲೆಗೆ ಅರ್ಧ ಕಪ್ ಬಿಳಿ ಎಳ್ಳು ಹಾಕಿ 2 ನಿಮಿಷ ಹುರಿದು ಇದನ್ನು ಸಹ ಹಿಟ್ಟಿನೊಂದಿಗೆ ಸೇರಿಸಿ ಮಿಶ್ರಣ ಮಾಡಿ.
ಈಗ 1 ಕಪ್ ಕೊಬ್ಬರಿ ತುರಿ ಹಾಕಿ ಮಿಶ್ರಣ ಮಾಡಿ. ಈಗ ಮತ್ತೆ ಬಾಣಲೆಗೆ ಒಂದೂವರೆ ಕಪ್ ಬೆಲ್ಲ ಹಾಕಿ ನೀರು ಹಾಕಿ ಕರಗಲು ಬಿಡಿ. ಬೆಲ್ಲ ಚೆನ್ನಾಗಿ ಕರಗುವರೆಗೂ ತಿರುಗಿಸಿಕೊಂಡು ಬಳಿಕ ಜರಡಿ ಹಿಡಿದು ಹಿಟ್ಟಿಗೆ ಹಾಕಿ ಮಿಕ್ಸ್ ಮಾಡಿ. ಎಷ್ಟು ಅಗತ್ಯವೋ ಅಷ್ಟು ಬೆಲ್ಲದ ನೀರು ಹಾಕಿ ಉಂಡೆ ಕಟ್ಟಿಕೊಳ್ಳಿ. ನಿಮಗೆ ಯಾವ ಗಾತ್ರಕ್ಕೆ ಬೇಕೋ ಆ ಗಾತ್ರಕ್ಕೆ ಉಂಡೆ ಕಟ್ಟಿಕೊಳ್ಳಿ.
ಹಿಟ್ಟು ಗಟ್ಟಿಯಾದರೆ ಮತ್ತೆ ಬೆಲ್ಲದ ನೀರು ಹಾಕಿಕೊಂಡು ಉಂಡೆ ಕಟ್ಟಿಕೊಳ್ಳಿ. ಇಷ್ಟಾದರೆ ನಿಮ್ಮ ಮುಂದೆ ರುಚಿ ರುಚಿಯಾದ ತಂಬಿಟ್ಟು ಉಂಡೆ ಸಿದ್ದವಾಗುತ್ತೆ. ಈ ಹಬ್ಬದಲ್ಲಿ ನೀವು ಸಹ ಮಾಡಿ ಸವಿದು ನೋಡಿ.



Click it and Unblock the Notifications
