Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಬೆಳಗ್ಗೆ ತಿಂಡಿಗೆ ವಾಂಗಿಬಾತ್ ಮಾಡಿ..! ಸಿಕ್ಕಾಪಟ್ಟೆ ರುಚಿ..!
ಬದನೆಕಾಯಿಯ ಜೊತೆ ಅನ್ನ ಹಾಗೂ ಉತ್ತಮ ಮಸಾಲೆಗಳ ಮಿಶ್ರಣದಿಂದ ತಯಾರಾಗುವ ಈ ಖಾದ್ಯವೇ ವಾಂಗಿಬಾತ್. ಬೆಳಗ್ಗೆಯ ತಿಂಡಿಗೆ ವಾಂಗಿಬಾತ್ ಮಾಡಿದ್ರೆ ತಿನ್ನಲು ಸಹ ರುಚಿಕರವಾಗಿರುತ್ತೆ ಮಾಡಲು ಸುಲಭವಾಗಿದೆ. ಹೀಗಾಗಿ ಬೆಳಗ್ಗೆ ಇದನ್ನು ಗಡಿಬಿಡಿಯ ನಡುವೆಯೂ ಮಾಡಬಹುದು.
ಒಮ್ಮೆ ಸವಿದರೆ ಮತ್ತೆ ಮತ್ತೆ ಸವಿಯಬೇಕು ಎನ್ನುವಂತೆ ಮಾಡುತ್ತೆ. ಇದು ಪರಿಪೂರ್ಣವಾದ ಪೌಷ್ಟಿಕಾಂಶ ಹಾಗೂ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದ ಕೂಡಿದೆ. ಈ ಪಾಕವಿಧಾನವನ್ನು ಮುಂಜಾನೆಯ ಉಪಹಾರ, ಮಧ್ಯಾಹ್ನದ ಊಟ ಅಥವಾ ರಾತ್ರಿಯ ಊಟವನ್ನಾಗಿಯೂ ಸಹ ಸೇವಿಸಬಹುದು.

ಲವಂಗ, ಏಲಕ್ಕಿ, ದಾಲ್ಚಿನ್ನಿ, ಮೇಥಿ ಬೀಜ, ಸೇರಿದಂತೆ ಇನ್ನಿತರ ಆರೋಗ್ಯಕರವಾದ ಮಸಾಲ ಪದಾರ್ಥಗಳು ಇದರಲ್ಲಿ ಸೇರಿರುವುದರಿಂದ ದೇಹದ ಆರೋಗ್ಯದ ಸುಧಾರಣೆಗೂ ಸಹಾಯ ಮಾಡುವುದು. ಬದನೆಕಾಯಿ ಮತ್ತು ತೆಂಗಿನ ತುರಿ ಬಹುಮುಖ್ಯ ಪಾತ್ರವನ್ನು ವಹಿಸುತ್ತವೆ. ಬಹಳ ಸುಲಭ ಹಾಗೂ ಸರಳ ವಿಧಾನದಲ್ಲಿ ತಯಾರಿಸಬಹುದು.
ಹಾಗಾದ್ರೆ ವಾಂಗಿಬಾತ್ ಮಾಡಲು ಬೇಕಾಗುವ ಪದಾರ್ಥಗಳೇನು? ವಾಂಗಿಬಾತ್ ಮಾಡುವ ಪಾಕವಿಧಾನವೇನು ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ.
ವಾಂಗಿಬಾತ್ ಮಾಡಲು ಬೇಕಾಗುವ ಪದಾರ್ಥಗಳು
- ಬದನೆಕಾಯಿ
- ಅನ್ನ
- ಸಾಸಿವೆ - 1 ಟೀಸ್ಪೂನ್
- ಉದ್ದಿನ ಬೇಳೆ - 1 tbs (ಟೇಬಲ್ ಸ್ಪೂನ್)
- ನೆಲ ಕಡಲೆ - 2 ಟೀಸ್ಪೂನ್
- ಮೆಣಸಿನಕಾಯಿ - 4
- ಈರುಳ್ಳಿ- 1
- ಕರಿಬೇವಿನ ಎಲೆಗಳು - 2 tbs
- ಹುಣಸೆಹಣ್ಣು - 1 tbs
- ಅರಿಶಿನ ಪುಡಿ - 1/4 ಟೀಸ್ಪೂನ್
- ಕೊತ್ತಂಬರಿ ಪುಡಿ - 1 ಟೀಸ್ಪೂನ್
- ಮೆಣಸಿನ ಪುಡಿ - 1/2 ಟೀಸ್ಪೂನ್
- ಗರಂ ಮಸಾಲಾ ಪುಡಿ - 1/4 ಟೀಸ್ಪೂನ್
- ಸಾಂಬಾರ್ ಪುಡಿ - 1 tbs
- ಕೊತ್ತಂಬರಿ ಸೊಪ್ಪು - 2 tbs
- ಎಣ್ಣೆ
- ಉಪ್ಪು
ವಾಂಗಿಬಾತ್ ಮಾಡುವ ವಿಧಾನ
ಬದನೆಕಾಯಿಯನ್ನು ತೆಗೆದುಕೊಂಡು ತೆಳುವಾಗಿ ಹೆಚ್ಚಿಕೊಳ್ಳಿ. ಎಲ್ಲಾ ಬದನೆಕಾಯಿ ಹೋಳನ್ನು ಒಂದು ಬೌಲ್ನಲ್ಲಿ ಹಾಕಿ ನೀರಿನಲ್ಲಿ ನೆನೆಯಿಡಿ.
ಒಂದು ಪಾತ್ರೆ ತೆಗೆದುಕೊಂಡು ಎಣ್ಣೆ ಹಾಕಿ ಒಲೆ ಮೇಲೆ ಇಡಿ. ಅದಕ್ಕೆ ಈರುಳ್ಳಿ, ಉದ್ದಿಮ ಬೇಳೆ, ಜೀರಿಗೆ, ಕಡ್ಲೇ ಬೇಳೆ, ಎಳ್ಳು, ಮೇಥಿ, ಲವಂಗ, ಧನಿಯಾವನ್ನು ಸೇರಿಸಿ. ಎಲ್ಲವನ್ನು ಚೆನ್ನಾಗಿ ಹುರಿಯಿರಿ. ಮೆಣಸು ಮತ್ತು ತೆಂಗಿನ ತುರಿಯನ್ನು ಸೇರಿಸಿ ಹುರಿಯಿರಿ. ಬಳಿಕ 3 ನಿಮಿಷ ತಣ್ಣಗಾಗಲು ಇಡಿ.
ರಿದುಕೊಂಡ ಎಲ್ಲಾ ಸಾಮಾಗ್ರಿಗಳನ್ನು ಮಿಕ್ಸರ್ ಜಾರ್ಗೆ ಹಾಜಿ ರುಬ್ಬಿಕೊಳ್ಳಿ. ನುಣ್ಣನೆಯ ಪುಡಿಯಂತೆ ರುಬ್ಬಿಕೊಳ್ಳಿ. ಇನ್ನೊಂದು ಪಾತ್ರೆಯನ್ನು ತೆಗೆದುಕೊಳ್ಳಿ. ಅದಕ್ಕೆ ಎಣ್ಣೆ, ಸಾಸಿವೆ, ಉದ್ದಿನ ಬೇಳೆ, ಕಡ್ಲೇ ಬೇಳೆ, ಕರಿಬೇವಿನ ಎಲೆ, ಅರಿಶಿನ, ಬದನೆಕಾಯಿ ಎಲ್ಲವನ್ನೂ ಸೇರಿಸಿ ಒಂದು ನಿಮಿಷಗಳ ಕಾಲ ಚೆನ್ನಾಗಿ ಹುರಿಯಿರಿ.
ಹುಣಸೆ ಹುಳಿ ಮತ್ತು ಬೆಲ್ಲವನ್ನು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಅದಕ್ಕೆ ಉಪ್ಪು ಸೇರಿಸಿ 2 ನಿಮಿಷ ಕಾಯಲು ಬಿಡಿ. ನಂತರ ಇದಕ್ಕೆ ರುಬ್ಬಿಕೊಂಡ ಮಸಾಲೆಯನ್ನು ಸೇರಿಸಿ. ಮುಚ್ಚಳವನ್ನು ಮುಚ್ಚಿ, ಎಲ್ಲವೂ ಚೆನ್ನಾಗಿ ಹೀರಿಕೊಳ್ಳುವಂತೆ 2-3 ನಿಮಿಷಗಳ ಕಾಲ ಬೇಯಿಸಿ. ಮುಚ್ಚಳವನ್ನು ತೆರೆದು ಬದನೆಕಾಯಿಯನ್ನು ತಿರುವಿ. ಅನ್ನವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ಇಷ್ಟಾದರೆ ವಾಂಗಿಬಾತ್ ರೆಡಿ. ಕೊನೆಯಲ್ಲಿ ಬೇಕಾದರೆ ಅಲಂಕಾರಕ್ಕೆ ಕೊತ್ತಂಬರಿ ಸೊಪ್ಪು ಹಾಕಿಕೊಳ್ಳಿ.



Click it and Unblock the Notifications
