Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಬೆಳಗ್ಗೆ ತಿಂಡಿಗೆ ವಾಂಗಿಬಾತ್ ಮಾಡಿ..! ಸಿಕ್ಕಾಪಟ್ಟೆ ರುಚಿ..!
ಬದನೆಕಾಯಿಯ ಜೊತೆ ಅನ್ನ ಹಾಗೂ ಉತ್ತಮ ಮಸಾಲೆಗಳ ಮಿಶ್ರಣದಿಂದ ತಯಾರಾಗುವ ಈ ಖಾದ್ಯವೇ ವಾಂಗಿಬಾತ್. ಬೆಳಗ್ಗೆಯ ತಿಂಡಿಗೆ ವಾಂಗಿಬಾತ್ ಮಾಡಿದ್ರೆ ತಿನ್ನಲು ಸಹ ರುಚಿಕರವಾಗಿರುತ್ತೆ ಮಾಡಲು ಸುಲಭವಾಗಿದೆ. ಹೀಗಾಗಿ ಬೆಳಗ್ಗೆ ಇದನ್ನು ಗಡಿಬಿಡಿಯ ನಡುವೆಯೂ ಮಾಡಬಹುದು.
ಒಮ್ಮೆ ಸವಿದರೆ ಮತ್ತೆ ಮತ್ತೆ ಸವಿಯಬೇಕು ಎನ್ನುವಂತೆ ಮಾಡುತ್ತೆ. ಇದು ಪರಿಪೂರ್ಣವಾದ ಪೌಷ್ಟಿಕಾಂಶ ಹಾಗೂ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದ ಕೂಡಿದೆ. ಈ ಪಾಕವಿಧಾನವನ್ನು ಮುಂಜಾನೆಯ ಉಪಹಾರ, ಮಧ್ಯಾಹ್ನದ ಊಟ ಅಥವಾ ರಾತ್ರಿಯ ಊಟವನ್ನಾಗಿಯೂ ಸಹ ಸೇವಿಸಬಹುದು.

ಲವಂಗ, ಏಲಕ್ಕಿ, ದಾಲ್ಚಿನ್ನಿ, ಮೇಥಿ ಬೀಜ, ಸೇರಿದಂತೆ ಇನ್ನಿತರ ಆರೋಗ್ಯಕರವಾದ ಮಸಾಲ ಪದಾರ್ಥಗಳು ಇದರಲ್ಲಿ ಸೇರಿರುವುದರಿಂದ ದೇಹದ ಆರೋಗ್ಯದ ಸುಧಾರಣೆಗೂ ಸಹಾಯ ಮಾಡುವುದು. ಬದನೆಕಾಯಿ ಮತ್ತು ತೆಂಗಿನ ತುರಿ ಬಹುಮುಖ್ಯ ಪಾತ್ರವನ್ನು ವಹಿಸುತ್ತವೆ. ಬಹಳ ಸುಲಭ ಹಾಗೂ ಸರಳ ವಿಧಾನದಲ್ಲಿ ತಯಾರಿಸಬಹುದು.
ಹಾಗಾದ್ರೆ ವಾಂಗಿಬಾತ್ ಮಾಡಲು ಬೇಕಾಗುವ ಪದಾರ್ಥಗಳೇನು? ವಾಂಗಿಬಾತ್ ಮಾಡುವ ಪಾಕವಿಧಾನವೇನು ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ.
ವಾಂಗಿಬಾತ್ ಮಾಡಲು ಬೇಕಾಗುವ ಪದಾರ್ಥಗಳು
- ಬದನೆಕಾಯಿ
- ಅನ್ನ
- ಸಾಸಿವೆ - 1 ಟೀಸ್ಪೂನ್
- ಉದ್ದಿನ ಬೇಳೆ - 1 tbs (ಟೇಬಲ್ ಸ್ಪೂನ್)
- ನೆಲ ಕಡಲೆ - 2 ಟೀಸ್ಪೂನ್
- ಮೆಣಸಿನಕಾಯಿ - 4
- ಈರುಳ್ಳಿ- 1
- ಕರಿಬೇವಿನ ಎಲೆಗಳು - 2 tbs
- ಹುಣಸೆಹಣ್ಣು - 1 tbs
- ಅರಿಶಿನ ಪುಡಿ - 1/4 ಟೀಸ್ಪೂನ್
- ಕೊತ್ತಂಬರಿ ಪುಡಿ - 1 ಟೀಸ್ಪೂನ್
- ಮೆಣಸಿನ ಪುಡಿ - 1/2 ಟೀಸ್ಪೂನ್
- ಗರಂ ಮಸಾಲಾ ಪುಡಿ - 1/4 ಟೀಸ್ಪೂನ್
- ಸಾಂಬಾರ್ ಪುಡಿ - 1 tbs
- ಕೊತ್ತಂಬರಿ ಸೊಪ್ಪು - 2 tbs
- ಎಣ್ಣೆ
- ಉಪ್ಪು
ವಾಂಗಿಬಾತ್ ಮಾಡುವ ವಿಧಾನ
ಬದನೆಕಾಯಿಯನ್ನು ತೆಗೆದುಕೊಂಡು ತೆಳುವಾಗಿ ಹೆಚ್ಚಿಕೊಳ್ಳಿ. ಎಲ್ಲಾ ಬದನೆಕಾಯಿ ಹೋಳನ್ನು ಒಂದು ಬೌಲ್ನಲ್ಲಿ ಹಾಕಿ ನೀರಿನಲ್ಲಿ ನೆನೆಯಿಡಿ.
ಒಂದು ಪಾತ್ರೆ ತೆಗೆದುಕೊಂಡು ಎಣ್ಣೆ ಹಾಕಿ ಒಲೆ ಮೇಲೆ ಇಡಿ. ಅದಕ್ಕೆ ಈರುಳ್ಳಿ, ಉದ್ದಿಮ ಬೇಳೆ, ಜೀರಿಗೆ, ಕಡ್ಲೇ ಬೇಳೆ, ಎಳ್ಳು, ಮೇಥಿ, ಲವಂಗ, ಧನಿಯಾವನ್ನು ಸೇರಿಸಿ. ಎಲ್ಲವನ್ನು ಚೆನ್ನಾಗಿ ಹುರಿಯಿರಿ. ಮೆಣಸು ಮತ್ತು ತೆಂಗಿನ ತುರಿಯನ್ನು ಸೇರಿಸಿ ಹುರಿಯಿರಿ. ಬಳಿಕ 3 ನಿಮಿಷ ತಣ್ಣಗಾಗಲು ಇಡಿ.
ರಿದುಕೊಂಡ ಎಲ್ಲಾ ಸಾಮಾಗ್ರಿಗಳನ್ನು ಮಿಕ್ಸರ್ ಜಾರ್ಗೆ ಹಾಜಿ ರುಬ್ಬಿಕೊಳ್ಳಿ. ನುಣ್ಣನೆಯ ಪುಡಿಯಂತೆ ರುಬ್ಬಿಕೊಳ್ಳಿ. ಇನ್ನೊಂದು ಪಾತ್ರೆಯನ್ನು ತೆಗೆದುಕೊಳ್ಳಿ. ಅದಕ್ಕೆ ಎಣ್ಣೆ, ಸಾಸಿವೆ, ಉದ್ದಿನ ಬೇಳೆ, ಕಡ್ಲೇ ಬೇಳೆ, ಕರಿಬೇವಿನ ಎಲೆ, ಅರಿಶಿನ, ಬದನೆಕಾಯಿ ಎಲ್ಲವನ್ನೂ ಸೇರಿಸಿ ಒಂದು ನಿಮಿಷಗಳ ಕಾಲ ಚೆನ್ನಾಗಿ ಹುರಿಯಿರಿ.
ಹುಣಸೆ ಹುಳಿ ಮತ್ತು ಬೆಲ್ಲವನ್ನು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಅದಕ್ಕೆ ಉಪ್ಪು ಸೇರಿಸಿ 2 ನಿಮಿಷ ಕಾಯಲು ಬಿಡಿ. ನಂತರ ಇದಕ್ಕೆ ರುಬ್ಬಿಕೊಂಡ ಮಸಾಲೆಯನ್ನು ಸೇರಿಸಿ. ಮುಚ್ಚಳವನ್ನು ಮುಚ್ಚಿ, ಎಲ್ಲವೂ ಚೆನ್ನಾಗಿ ಹೀರಿಕೊಳ್ಳುವಂತೆ 2-3 ನಿಮಿಷಗಳ ಕಾಲ ಬೇಯಿಸಿ. ಮುಚ್ಚಳವನ್ನು ತೆರೆದು ಬದನೆಕಾಯಿಯನ್ನು ತಿರುವಿ. ಅನ್ನವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ಇಷ್ಟಾದರೆ ವಾಂಗಿಬಾತ್ ರೆಡಿ. ಕೊನೆಯಲ್ಲಿ ಬೇಕಾದರೆ ಅಲಂಕಾರಕ್ಕೆ ಕೊತ್ತಂಬರಿ ಸೊಪ್ಪು ಹಾಕಿಕೊಳ್ಳಿ.



Click it and Unblock the Notifications