Latest Updates
-
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು!
ಬ್ರೇಕ್ಫಾಸ್ಟ್ಗೆ ಮಸಾಲೆ ವಾಂಗೀಬಾತ್ ಮಾಡಿ: ಇಲ್ಲಿದೆ ಸುಲಭದ ವಿಧಾನ
ಬೆಳಗ್ಗೆ ತಿಂಡಿಯ ಸಮಯದಲ್ಲಿ ಸುಲಭವಾಗಿ ನೀವು ಯಾವುದಾದರು ಖಾದ್ಯ ಮಾಡಿ ಸವಿಯುವ ಬಯಕೆ ಹೊಂದಿರಬಹುದು. ಅದ್ರಲ್ಲೂ ರೈಸ್ನಿಂದ ಮಾಡುವ ಖಾದ್ಯಗಳು ಹಲವರಿಗೆ ಇಷ್ಟವಾಗುತ್ತೆ. ಬಹುತೇಕರು ಅನ್ನದಿಂದ ಮಾಡುವ ಪಲಾವ್, ರೈಸ್ ಬಾತ್, ಪುಳಿಯೋಗರೆ ಸೇರಿದಂತೆ ಹಲವು ರೀತಿಯ ಖಾದ್ಯಗಳು ಅಂದ್ರೆ ಬಾಯಲ್ಲಿ ನೀರುಬರಬಹುದು. ಇನ್ನು ಸುಲಭವಾಗಿ ಮಾಡುವ ಚಿತ್ರಾನ್ನ, ಹುಳಿ ಅನ್ನ, ವಾಂಗೀಬಾತ್ ಸಹ ಬಹುತೇಕರ ಇಷ್ಟದ ಖಾದ್ಯ.
ಹಾಗೆ ನಾವಿಂದು ಮಸಾಲೆ ಭರಿತ ಸುಲಭವಾಗಿ ಮಾಡುವಂತಹ ವಾಂಗೀಬಾತ್ ಮಾಡುವ ಕುರಿತು ತಿಳಿಯೋಣ. ಅದ್ರಲ್ಲೂ ಈ ಬದನೆಕಾಯಿ ಹಾಕಿ ಮಾಡುವಂತಹ ವಾಂಗೀಬಾತ್ ಅಂದ್ರೆ ಎಲ್ಲರಿಗೂ ಇಷ್ಟವಾಗುತ್ತೆ. ಹೋಟೆಲ್ಗಳಲ್ಲಿ ನೀಡುವಂತಹ ಈ ವಾಂಗೀಬಾತ್ ವಿಶೇಷ ರುಚಿಯಲ್ಲಿ ಕೂಡಿರಲಿದೆ. ಹಾಗಾದ್ರೆ ನಾವಿಂದು ಮನೆಯಲ್ಲೇ ಈ ಮಸಾಲೆ ಭರಿತ ವಾಂಗೀಬಾತ್ ಮಾಡುವ ಕುರಿತಾಗಿ ತಿಳಿದುಕೊಳ್ಳೋಣ.
ಮಸಾಲೆ ವಾಂಗೀಬಾತ್ ಮಾಡಲು ಯಾವೆಲ್ಲಾ ವಸ್ತುಗಳು ಬೇಕು? ಮಾಡುವ ವಿಧಾನವೇನು? ಎಷ್ಟು ಸಮಯ ಹಿಡಿಯಲಿದೆ ಎಂಬೆಲ್ಲಾ ಕುರಿತಾದ ಮಾಹಿತಿಯನ್ನು ನಾವಿಲ್ಲಿ ತಿಳಿದುಕೊಳ್ಳೋಣ.
ಮಸಾಲೆ ವಾಂಗೀಬಾತ್ ಮಾಡಲು ಅಗತ್ಯ ವಸ್ತುಗಳು
- ಅಕ್ಕಿ
- ಬದನೆಕಾಯಿ - 3
- ಈರುಳ್ಳಿ - 3
- ಹುಣಸೆಹಣ್ಣು
- ಟೊಮೆಟೋ - 1
- ಜೀರಿಗೆ
- ಕರಿಬೇವು
- ಸಾಸಿವೆ
- ಹಸಿರು ಮೆಣಸಿನಕಾಯಿ
- ಶುಂಠಿ ಬೆಳ್ಳುಳ್ಳಿ ಪೇಸ್ಟ್
- ಕೆಂಪು ಮೆಣಸಿನ ಪುಡಿ
- ಅರಿಶಿನ ಪುಡಿ
- ವಾಂಗಿ ಬಾತ್ ಪೌಡರ್
- ಕೊತ್ತಂಬರಿ ಸೊಪ್ಪು
- ಅಡುಗೆ ಎಣ್ಣೆ
- ರುಚಿಗೆ ತಕ್ಕಷ್ಟು ಉಪ್ಪು
ಮಸಾಲೆ ವಾಂಗೀಬಾತ್ ಮಾಡುವ ವಿಧಾನವೇನು?
ಮೊದಲು ಒಲೆ ಮೇಲೆ ಕುಕ್ಕರ್ ಇಟ್ಟು ಎಣ್ಣೆ ಹಾಕಿಕೊಂಡು ಬಳಿಕ ಜೀರಿಗೆ, ಸಾಸಿವೆ, ಈರುಳ್ಳಿ, ಕಡಲೆ ಬೇಳೆ, ಕರಿಬೇವು, ಹಸಿ ಮೆಣಸು ಹಾಕಿ ಫ್ರೈ ಮಾಡಿಕೊಳ್ಳಿ. ಇದಕ್ಕೆ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಟೊಮೆಟೋ ಹಾಕಿ ಚೆನ್ನಾಗಿ ಫ್ರೈ ಮಾಡಿಕೊಳ್ಳಿ. ಈ ರೆಸಿಪಿ ಆರಂಭಿಸುವ ಮುನ್ನವೆ ಅಳತೆ ಕಪ್ನಲ್ಲಿ ಅಕ್ಕಿಯನ್ನು ತೊಳೆದು ನೆನೆಸಿಟ್ಟುಕೊಳ್ಳಿ. ಹಾಗೆ ಮೈಸೂರು ಬದನೆಯನ್ನು ಕತ್ತರಿಸಿಕೊಂಡು ನೀರಿನಲ್ಲ ಹಾಕಿಟ್ಟುಕೊಳ್ಳಿ.
ಈಗ ಕುಕ್ಕರ್ಗೆ ಹೆಚ್ಚಿಕೊಂಡಿರುವ ಬದನೆಕಾಯಿಯನ್ನು ಹಾಕಿಕೊಳ್ಳಿ. ಹಾಗೆ ಇದಕ್ಕೆ ಅರಶಿಣ ಪುಡಿ, ಖಾರದ ಪುಡಿ ಸಹ ಹಾಕಿಕೊಳ್ಳಿ. ಉಪ್ಪು ಕೂಡ ಹಾಕಿಕೊಂಡು ಚೆನ್ನಾಗಿ ಮಿಕ್ಸ್ ಮಾಡಿ. ಈಗ ವಾಂಗೀಬಾತ್ ಪುಡಿ ಸಹ ಹಾಕಿ ಮಿಶ್ರಣ ಮಾಡುತ್ತಾ ಇರಿ. ಇದು ಗೊಜ್ಜು ರೀತಿ ಬರಬೇಕು. ಈಗ ಇದಕ್ಕೆ ಒಂದು ಸಣ್ಣ ಉಂಡೆಯ ಹುಣಸೆ ಹುಳಿಯ ನೀರನ್ನು ಸಹ ಹಾಕಿಕೊಳ್ಳಬೇಕು.
ಈಗ ಅಳತೆ ಕಪ್ನಲ್ಲಿಯೇ ನೀರು ಹಾಕಿಕೊಳ್ಳಿ. ಅಕ್ಕಿಯ ಅಳತೆಯ ಪ್ರಕಾರ ಎರಡರಷ್ಟು ನೀರನ್ನು ಇದಕ್ಕೆ ಹಾಕಿಕೊಳ್ಳಿ. ಕುದಿಬರಲು ಬಿಟ್ಟು ನಂತರ ನೆನೆಸಿಟ್ಟಿರುವ ಅಕ್ಕಿಯನ್ನು ಹಾಕಿ ಮಿಶ್ರಣ ಮಾಡಿ, ನಿಧಾನಕ್ಕೆ ಕುದಿಬರಲು ಬಿಡಿ. ಇದು ಕುದಿಬರಲು ಆರಂಭಿಸಿದಾಗ ಕುಕ್ಕರ್ ಮುಚ್ಚಳ ಮುಚ್ಚಿ 2 ಸೀಟಿ ಹೊಡೆಯಲು ಬಿಡಿ. ಕೊನಯೆಲ್ಲಿ ಮುಚ್ಚಳ ತೆಗೆದು ಒಮ್ಮೆ ಮಿಕ್ಸ್ ಮಾಡಿಕೊಂಡರೆ ನಿಮ್ಮ ಮುಂದೆ ರುಚಿ ರುಚಿಯಾದ ಮಸಾಲೆ ವಾಂಗೀಬಾತ್ ಸಿದ್ದವಾಗುತ್ತೆ. ನೀವು ಸಹ ಮಾಡಿ ಸವಿದು ನೋಡಿ.



Click it and Unblock the Notifications
