Latest Updates
-
ಗಣೇಶೋತ್ಸವದ ಸೌಂಡ್ ಕಿರಿಕಿರಿ: ನೆರೆಹೊರೆಯವರ ಜೊತೆ ಜಗಳವಿಲ್ಲದೆ ನೆಮ್ಮದಿಯ ನಿದ್ರೆ ಪಡೆಯುವುದು ಹೇಗೆ? -
ದೆಹಲಿ ಮಳೆ: ನಿಮ್ಮ ಮನೆಯಲ್ಲಿ ಬೂಷ್ಟು ಮತ್ತು ತೇವಾಂಶ ತಡೆಯಲು 45 ನಿಮಿಷದ ಸಿಂಪಲ್ ಪ್ಲಾನ್! -
ಗಣೇಶ ಹಬ್ಬದ ಮೋದಕ: ಶುಗರ್ ಏರಿಕೆಯಾಗದಂತೆ ಸವಿಯಲು ಇಲ್ಲಿವೆ 5 ಆರೋಗ್ಯಕರ ಟಿಪ್ಸ್ -
ಐಫೋನ್ 18 ಪ್ರೋ ಪ್ರೀ-ಆರ್ಡರ್: ₹7,000 ಕ್ಯಾಶ್ಬ್ಯಾಕ್ ಪಡೆಯುವುದು ಹೇಗೆ? ನಕಲಿ ಆಫರ್ಗಳಿಂದ ಎಚ್ಚರ! -
ದೆಹಲಿ ಮಳೆ: ಜಾರಿ ಬೀಳದಂತೆ ಎಚ್ಚರ, ಬೆನ್ನುನೋವಿನಿಂದ ಮುಕ್ತಿ ಪಡೆಯಲು 12 ನಿಮಿಷದ ವರ್ಕೌಟ್ ರೂಟಿನ್! -
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್! -
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್!
ಬ್ರೇಕ್ಫಾಸ್ಟ್ಗೆ ಮಸಾಲೆ ವಾಂಗೀಬಾತ್ ಮಾಡಿ: ಇಲ್ಲಿದೆ ಸುಲಭದ ವಿಧಾನ
ಬೆಳಗ್ಗೆ ತಿಂಡಿಯ ಸಮಯದಲ್ಲಿ ಸುಲಭವಾಗಿ ನೀವು ಯಾವುದಾದರು ಖಾದ್ಯ ಮಾಡಿ ಸವಿಯುವ ಬಯಕೆ ಹೊಂದಿರಬಹುದು. ಅದ್ರಲ್ಲೂ ರೈಸ್ನಿಂದ ಮಾಡುವ ಖಾದ್ಯಗಳು ಹಲವರಿಗೆ ಇಷ್ಟವಾಗುತ್ತೆ. ಬಹುತೇಕರು ಅನ್ನದಿಂದ ಮಾಡುವ ಪಲಾವ್, ರೈಸ್ ಬಾತ್, ಪುಳಿಯೋಗರೆ ಸೇರಿದಂತೆ ಹಲವು ರೀತಿಯ ಖಾದ್ಯಗಳು ಅಂದ್ರೆ ಬಾಯಲ್ಲಿ ನೀರುಬರಬಹುದು. ಇನ್ನು ಸುಲಭವಾಗಿ ಮಾಡುವ ಚಿತ್ರಾನ್ನ, ಹುಳಿ ಅನ್ನ, ವಾಂಗೀಬಾತ್ ಸಹ ಬಹುತೇಕರ ಇಷ್ಟದ ಖಾದ್ಯ.
ಹಾಗೆ ನಾವಿಂದು ಮಸಾಲೆ ಭರಿತ ಸುಲಭವಾಗಿ ಮಾಡುವಂತಹ ವಾಂಗೀಬಾತ್ ಮಾಡುವ ಕುರಿತು ತಿಳಿಯೋಣ. ಅದ್ರಲ್ಲೂ ಈ ಬದನೆಕಾಯಿ ಹಾಕಿ ಮಾಡುವಂತಹ ವಾಂಗೀಬಾತ್ ಅಂದ್ರೆ ಎಲ್ಲರಿಗೂ ಇಷ್ಟವಾಗುತ್ತೆ. ಹೋಟೆಲ್ಗಳಲ್ಲಿ ನೀಡುವಂತಹ ಈ ವಾಂಗೀಬಾತ್ ವಿಶೇಷ ರುಚಿಯಲ್ಲಿ ಕೂಡಿರಲಿದೆ. ಹಾಗಾದ್ರೆ ನಾವಿಂದು ಮನೆಯಲ್ಲೇ ಈ ಮಸಾಲೆ ಭರಿತ ವಾಂಗೀಬಾತ್ ಮಾಡುವ ಕುರಿತಾಗಿ ತಿಳಿದುಕೊಳ್ಳೋಣ.
ಮಸಾಲೆ ವಾಂಗೀಬಾತ್ ಮಾಡಲು ಯಾವೆಲ್ಲಾ ವಸ್ತುಗಳು ಬೇಕು? ಮಾಡುವ ವಿಧಾನವೇನು? ಎಷ್ಟು ಸಮಯ ಹಿಡಿಯಲಿದೆ ಎಂಬೆಲ್ಲಾ ಕುರಿತಾದ ಮಾಹಿತಿಯನ್ನು ನಾವಿಲ್ಲಿ ತಿಳಿದುಕೊಳ್ಳೋಣ.
ಮಸಾಲೆ ವಾಂಗೀಬಾತ್ ಮಾಡಲು ಅಗತ್ಯ ವಸ್ತುಗಳು
- ಅಕ್ಕಿ
- ಬದನೆಕಾಯಿ - 3
- ಈರುಳ್ಳಿ - 3
- ಹುಣಸೆಹಣ್ಣು
- ಟೊಮೆಟೋ - 1
- ಜೀರಿಗೆ
- ಕರಿಬೇವು
- ಸಾಸಿವೆ
- ಹಸಿರು ಮೆಣಸಿನಕಾಯಿ
- ಶುಂಠಿ ಬೆಳ್ಳುಳ್ಳಿ ಪೇಸ್ಟ್
- ಕೆಂಪು ಮೆಣಸಿನ ಪುಡಿ
- ಅರಿಶಿನ ಪುಡಿ
- ವಾಂಗಿ ಬಾತ್ ಪೌಡರ್
- ಕೊತ್ತಂಬರಿ ಸೊಪ್ಪು
- ಅಡುಗೆ ಎಣ್ಣೆ
- ರುಚಿಗೆ ತಕ್ಕಷ್ಟು ಉಪ್ಪು
ಮಸಾಲೆ ವಾಂಗೀಬಾತ್ ಮಾಡುವ ವಿಧಾನವೇನು?
ಮೊದಲು ಒಲೆ ಮೇಲೆ ಕುಕ್ಕರ್ ಇಟ್ಟು ಎಣ್ಣೆ ಹಾಕಿಕೊಂಡು ಬಳಿಕ ಜೀರಿಗೆ, ಸಾಸಿವೆ, ಈರುಳ್ಳಿ, ಕಡಲೆ ಬೇಳೆ, ಕರಿಬೇವು, ಹಸಿ ಮೆಣಸು ಹಾಕಿ ಫ್ರೈ ಮಾಡಿಕೊಳ್ಳಿ. ಇದಕ್ಕೆ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಟೊಮೆಟೋ ಹಾಕಿ ಚೆನ್ನಾಗಿ ಫ್ರೈ ಮಾಡಿಕೊಳ್ಳಿ. ಈ ರೆಸಿಪಿ ಆರಂಭಿಸುವ ಮುನ್ನವೆ ಅಳತೆ ಕಪ್ನಲ್ಲಿ ಅಕ್ಕಿಯನ್ನು ತೊಳೆದು ನೆನೆಸಿಟ್ಟುಕೊಳ್ಳಿ. ಹಾಗೆ ಮೈಸೂರು ಬದನೆಯನ್ನು ಕತ್ತರಿಸಿಕೊಂಡು ನೀರಿನಲ್ಲ ಹಾಕಿಟ್ಟುಕೊಳ್ಳಿ.
ಈಗ ಕುಕ್ಕರ್ಗೆ ಹೆಚ್ಚಿಕೊಂಡಿರುವ ಬದನೆಕಾಯಿಯನ್ನು ಹಾಕಿಕೊಳ್ಳಿ. ಹಾಗೆ ಇದಕ್ಕೆ ಅರಶಿಣ ಪುಡಿ, ಖಾರದ ಪುಡಿ ಸಹ ಹಾಕಿಕೊಳ್ಳಿ. ಉಪ್ಪು ಕೂಡ ಹಾಕಿಕೊಂಡು ಚೆನ್ನಾಗಿ ಮಿಕ್ಸ್ ಮಾಡಿ. ಈಗ ವಾಂಗೀಬಾತ್ ಪುಡಿ ಸಹ ಹಾಕಿ ಮಿಶ್ರಣ ಮಾಡುತ್ತಾ ಇರಿ. ಇದು ಗೊಜ್ಜು ರೀತಿ ಬರಬೇಕು. ಈಗ ಇದಕ್ಕೆ ಒಂದು ಸಣ್ಣ ಉಂಡೆಯ ಹುಣಸೆ ಹುಳಿಯ ನೀರನ್ನು ಸಹ ಹಾಕಿಕೊಳ್ಳಬೇಕು.
ಈಗ ಅಳತೆ ಕಪ್ನಲ್ಲಿಯೇ ನೀರು ಹಾಕಿಕೊಳ್ಳಿ. ಅಕ್ಕಿಯ ಅಳತೆಯ ಪ್ರಕಾರ ಎರಡರಷ್ಟು ನೀರನ್ನು ಇದಕ್ಕೆ ಹಾಕಿಕೊಳ್ಳಿ. ಕುದಿಬರಲು ಬಿಟ್ಟು ನಂತರ ನೆನೆಸಿಟ್ಟಿರುವ ಅಕ್ಕಿಯನ್ನು ಹಾಕಿ ಮಿಶ್ರಣ ಮಾಡಿ, ನಿಧಾನಕ್ಕೆ ಕುದಿಬರಲು ಬಿಡಿ. ಇದು ಕುದಿಬರಲು ಆರಂಭಿಸಿದಾಗ ಕುಕ್ಕರ್ ಮುಚ್ಚಳ ಮುಚ್ಚಿ 2 ಸೀಟಿ ಹೊಡೆಯಲು ಬಿಡಿ. ಕೊನಯೆಲ್ಲಿ ಮುಚ್ಚಳ ತೆಗೆದು ಒಮ್ಮೆ ಮಿಕ್ಸ್ ಮಾಡಿಕೊಂಡರೆ ನಿಮ್ಮ ಮುಂದೆ ರುಚಿ ರುಚಿಯಾದ ಮಸಾಲೆ ವಾಂಗೀಬಾತ್ ಸಿದ್ದವಾಗುತ್ತೆ. ನೀವು ಸಹ ಮಾಡಿ ಸವಿದು ನೋಡಿ.



Click it and Unblock the Notifications

