Latest Updates
-
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ!
ರಸಗುಲ್ಲಾವನ್ನು ಮೀರಿಸೋ ಜೈನರಿ ಸಿಹಿ
ಸಿಹಿತಿನಿಸು ಅಂದಾಕ್ಷಣ ಬಾಯಲ್ಲಿ ನೀರು ಬರುತ್ತೆ. ಸ್ವೀಟ್ ತಿನ್ನೋಣ ಅಂದರೆ ಈ ಲಾಕ್ ಡೌನ್ ಸಮಯದಲ್ಲಿ ಎಲ್ಲಾ ಬೇಕರಿ ಅಂಗಡಿಗಳು ಬಾಗಿಲು ಮುಚ್ಚಿವೆ. ಮಕ್ಕಳೋ ಆಗಾಗ ಏನಾದ್ರು ಕೊಡಮ್ಮ ಅಂತ ದುಂಬಾಲು ಬೀಳುತ್ತವೆ. ಹೀಗಿರುವಾಗ ರುಚಿರುಚಿ ಸಿಹಿತಿನಿಸು ಮಾಡೋದಕ್ಕೆ ನಿಮಗೆ ಐಡಿಯಾ ಹೊಳೆಯುತ್ತಿಲ್ಲವೇ? ಚಿಂತಿಸಬೇಡಿ. ನಿಮ್ಮ ಸಹಾಯಕ್ಕೆ ನಾವಿದ್ದೇವೆ.

ಇಲ್ಲೊಂದು ರುಚಿರುಚಿಯಾದ ಫಟಾಫಟ್ ಸಿಹಿತಿಂಡಿಯನ್ನು ಮಾಡುವ ವಿಧಾನ ತಿಳಿಸಿಕೊಡುತ್ತಿದ್ದೇವೆ. ಅದುವೇ ಜೈನರಿ. ನೋಡುವುದಕ್ಕೆ ರಸಗುಲ್ಲಾದಂತೆ ಕಂಡರೂ ಇದು ರಸಗುಲ್ಲಾ ಅಲ್ಲ. ಸಕ್ಕರೆ ಪಾಕವಿದ್ದರೂ ಜಾಮೂನಲ್ಲ. ಹಾಗಾದ್ರೆ ಹೇಗೆ ಮಾಡುವುದು ಈ ಜೈನರಿ ಎಂಬುದನ್ನು ತಿಳಿದುಕೊಳ್ಳಬೇಕೇ? ಮುಂದೆ ಓದಿ.
Recipe By: Sushma
Recipe Type: Sweet
Serves: 4
-
ಬೇಕಾಗುವ ಸಾಮಗ್ರಿಗಳು
. ಉದ್ದಿನ ಬೇಳೆ - ಒಂದುವರೆ ಕಪ್
. ಅಕ್ಕಿ- ಮುಕ್ಕಾಲುಕಪ್
. ಸಕ್ಕರೆ - ನಾಲ್ಕು ಕಪ್
. ಕೇಸರಿ - 10 ದಳಗಳು
. ಏಲಕ್ಕಿ - ನಾಲ್ಕು
. ಉಪ್ಪು- ರುಚಿಗೆ ತಕ್ಕಷ್ಟು
. ಅಡುಗೆ ಎಣ್ಣೆ- ನಾಲ್ಕರಿಂದ ಐದು ಕಪ್
-
ಮಾಡುವ ವಿಧಾನ -
ಉದ್ದಿನ ಬೇಳೆ ಮತ್ತು ಅಕ್ಕಿಯನ್ನು ಸುಮಾರು ಎರಡು ಘಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ.
ನಂತರ ಚಿಟಿಕೆ ಉಪ್ಪು ಸೇರಿಸಿ ಉದ್ದಿನ ಬೇಳೆ ಮತ್ತು ಅಕ್ಕಿಯನ್ನು ರುಬ್ಬಿಕೊಳ್ಳಿ.( ನೀರು ಸೇರಿಸುವುದು ಬೇಡ)
. ಒಂದು ಪಾತ್ರೆಯಲ್ಲಿ ಸಕ್ಕರೆಗೆ ನೀರು ಹಾಕಿ, ಕೇಸರಿ ದಳಗಳನ್ನು ಸೇರಿಸಿ ಪಾಕ ಮಾಡಿಕೊಳ್ಳಿ. ಜಾಮೂನು ತಯಾರಿಸುವುದಕ್ಕೆ ಸಕ್ಕರೆ ಪಾಕ ಮಾಡಿದಂತೆಯೇ ಮಾಡಿಕೊಳ್ಳಬೇಕು.
. ಪಾಕ ತಯಾರಾಗುತ್ತಿದ್ದಂತೆ ಏಲಕ್ಕಿ ಪುಡಿಯನ್ನು ಸೇರಿಸಿ ಇನ್ನೊಂದೆರಡು ಬಾರಿ ಕುದಿಸಿ. ಬಿಸಿ ಬಿಸಿ ಸಕ್ಕರೆ ಪಾಕ ತಯಾರಿಸಿಕೊಳ್ಳಿ.
. ಈಗಾಗಲೇ ರುಬ್ಬಿಕೊಂಡಿರುವ ಮಿಶ್ರಣವನ್ನು ಅಡುಗೆ ಎಣ್ಣೆಯಲ್ಲಿ ಸಣ್ಣಸಣ್ಣ ಉಂಡೆಗಾತ್ರ ಬರುವಂತೆ ಬಿಟ್ಟು ಕರಿಯಿರಿ. ಉದ್ದಿನ ವಡೆ ತಯಾರಿಸುವಾಗ ಕರಿಯುವಂತೆಯೇ ಕರಿಯಬೇಕು. ಹೆಚ್ಚು ಕೆಂಬಣ್ಣ ಮಾಡಬೇಡಿ. ಸಣ್ಣ ಉರಿಯಲ್ಲಿ ಕರಿಯುವುದು ಒಳ್ಳೆಯದು.
. ಕರಿದ ಉಂಡೆಯನ್ನು ಬಿಸಿಬಿಸಿ ಸಕ್ಕರೆ ಪಾಕಕ್ಕೆ ಹಾಕಿ.
.ಒಂದರ್ಧ ಘಂಟೆ ನೆನೆಯಲು ಬಿಡಿ.
. ಸಕ್ಕರೆ ಪಾಕದಲ್ಲಿ ನೆನೆದ ಉಂಡೆಗಳನ್ನು ಸಕ್ಕರೆ ಪಾಕದ ಜೊತೆಗೆ ಸರ್ವ್ ಮಾಡಿದರೆ ಜೈನರಿ ಸಿದ್ಧ.
- ಉದ್ದು ಮತ್ತು ಅಕ್ಕಿ ಮಿಶ್ರಿತ ಸಿಹಿಯಾಗಿರುವುದರಿಂದ ಕಾರ್ಬೋಹೈಡ್ರೇಟ್ಸ್ ನಿಮ್ಮ ದೇಹಕ್ಕೆ ಲಭ್ಯವಾಗುತ್ತದೆ . ಕೇಸರಿ ದಳಗಳನ್ನು ಸೇರಿಸಿರುವ ಸಿಹಿಯಾಗಿರುವುದರಿಂದ ಬಸುರಿ ಮಹಿಳೆಯರಿಗೂ ಕೂಡ ಒಳ್ಳೆಯದು. . ರಸಗುಲ್ಲಾದಲ್ಲಿರುವಂತೆ ಇದರಲ್ಲಿ ಕೊಬ್ಬಿನಂಶ ಇರುವುದಿಲ್ಲ. ಕಡಿಮೆ ಕೊಬ್ಬಿನಂಶ ಇರುವ ಸಿಹಿ ತಿನಿಸಾಗಿದೆ.



Click it and Unblock the Notifications