Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ರಸಗುಲ್ಲಾವನ್ನು ಮೀರಿಸೋ ಜೈನರಿ ಸಿಹಿ
ಸಿಹಿತಿನಿಸು ಅಂದಾಕ್ಷಣ ಬಾಯಲ್ಲಿ ನೀರು ಬರುತ್ತೆ. ಸ್ವೀಟ್ ತಿನ್ನೋಣ ಅಂದರೆ ಈ ಲಾಕ್ ಡೌನ್ ಸಮಯದಲ್ಲಿ ಎಲ್ಲಾ ಬೇಕರಿ ಅಂಗಡಿಗಳು ಬಾಗಿಲು ಮುಚ್ಚಿವೆ. ಮಕ್ಕಳೋ ಆಗಾಗ ಏನಾದ್ರು ಕೊಡಮ್ಮ ಅಂತ ದುಂಬಾಲು ಬೀಳುತ್ತವೆ. ಹೀಗಿರುವಾಗ ರುಚಿರುಚಿ ಸಿಹಿತಿನಿಸು ಮಾಡೋದಕ್ಕೆ ನಿಮಗೆ ಐಡಿಯಾ ಹೊಳೆಯುತ್ತಿಲ್ಲವೇ? ಚಿಂತಿಸಬೇಡಿ. ನಿಮ್ಮ ಸಹಾಯಕ್ಕೆ ನಾವಿದ್ದೇವೆ.

ಇಲ್ಲೊಂದು ರುಚಿರುಚಿಯಾದ ಫಟಾಫಟ್ ಸಿಹಿತಿಂಡಿಯನ್ನು ಮಾಡುವ ವಿಧಾನ ತಿಳಿಸಿಕೊಡುತ್ತಿದ್ದೇವೆ. ಅದುವೇ ಜೈನರಿ. ನೋಡುವುದಕ್ಕೆ ರಸಗುಲ್ಲಾದಂತೆ ಕಂಡರೂ ಇದು ರಸಗುಲ್ಲಾ ಅಲ್ಲ. ಸಕ್ಕರೆ ಪಾಕವಿದ್ದರೂ ಜಾಮೂನಲ್ಲ. ಹಾಗಾದ್ರೆ ಹೇಗೆ ಮಾಡುವುದು ಈ ಜೈನರಿ ಎಂಬುದನ್ನು ತಿಳಿದುಕೊಳ್ಳಬೇಕೇ? ಮುಂದೆ ಓದಿ.
Recipe By: Sushma
Recipe Type: Sweet
Serves: 4
-
ಬೇಕಾಗುವ ಸಾಮಗ್ರಿಗಳು
. ಉದ್ದಿನ ಬೇಳೆ - ಒಂದುವರೆ ಕಪ್
. ಅಕ್ಕಿ- ಮುಕ್ಕಾಲುಕಪ್
. ಸಕ್ಕರೆ - ನಾಲ್ಕು ಕಪ್
. ಕೇಸರಿ - 10 ದಳಗಳು
. ಏಲಕ್ಕಿ - ನಾಲ್ಕು
. ಉಪ್ಪು- ರುಚಿಗೆ ತಕ್ಕಷ್ಟು
. ಅಡುಗೆ ಎಣ್ಣೆ- ನಾಲ್ಕರಿಂದ ಐದು ಕಪ್
-
ಮಾಡುವ ವಿಧಾನ -
ಉದ್ದಿನ ಬೇಳೆ ಮತ್ತು ಅಕ್ಕಿಯನ್ನು ಸುಮಾರು ಎರಡು ಘಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ.
ನಂತರ ಚಿಟಿಕೆ ಉಪ್ಪು ಸೇರಿಸಿ ಉದ್ದಿನ ಬೇಳೆ ಮತ್ತು ಅಕ್ಕಿಯನ್ನು ರುಬ್ಬಿಕೊಳ್ಳಿ.( ನೀರು ಸೇರಿಸುವುದು ಬೇಡ)
. ಒಂದು ಪಾತ್ರೆಯಲ್ಲಿ ಸಕ್ಕರೆಗೆ ನೀರು ಹಾಕಿ, ಕೇಸರಿ ದಳಗಳನ್ನು ಸೇರಿಸಿ ಪಾಕ ಮಾಡಿಕೊಳ್ಳಿ. ಜಾಮೂನು ತಯಾರಿಸುವುದಕ್ಕೆ ಸಕ್ಕರೆ ಪಾಕ ಮಾಡಿದಂತೆಯೇ ಮಾಡಿಕೊಳ್ಳಬೇಕು.
. ಪಾಕ ತಯಾರಾಗುತ್ತಿದ್ದಂತೆ ಏಲಕ್ಕಿ ಪುಡಿಯನ್ನು ಸೇರಿಸಿ ಇನ್ನೊಂದೆರಡು ಬಾರಿ ಕುದಿಸಿ. ಬಿಸಿ ಬಿಸಿ ಸಕ್ಕರೆ ಪಾಕ ತಯಾರಿಸಿಕೊಳ್ಳಿ.
. ಈಗಾಗಲೇ ರುಬ್ಬಿಕೊಂಡಿರುವ ಮಿಶ್ರಣವನ್ನು ಅಡುಗೆ ಎಣ್ಣೆಯಲ್ಲಿ ಸಣ್ಣಸಣ್ಣ ಉಂಡೆಗಾತ್ರ ಬರುವಂತೆ ಬಿಟ್ಟು ಕರಿಯಿರಿ. ಉದ್ದಿನ ವಡೆ ತಯಾರಿಸುವಾಗ ಕರಿಯುವಂತೆಯೇ ಕರಿಯಬೇಕು. ಹೆಚ್ಚು ಕೆಂಬಣ್ಣ ಮಾಡಬೇಡಿ. ಸಣ್ಣ ಉರಿಯಲ್ಲಿ ಕರಿಯುವುದು ಒಳ್ಳೆಯದು.
. ಕರಿದ ಉಂಡೆಯನ್ನು ಬಿಸಿಬಿಸಿ ಸಕ್ಕರೆ ಪಾಕಕ್ಕೆ ಹಾಕಿ.
.ಒಂದರ್ಧ ಘಂಟೆ ನೆನೆಯಲು ಬಿಡಿ.
. ಸಕ್ಕರೆ ಪಾಕದಲ್ಲಿ ನೆನೆದ ಉಂಡೆಗಳನ್ನು ಸಕ್ಕರೆ ಪಾಕದ ಜೊತೆಗೆ ಸರ್ವ್ ಮಾಡಿದರೆ ಜೈನರಿ ಸಿದ್ಧ.
- ಉದ್ದು ಮತ್ತು ಅಕ್ಕಿ ಮಿಶ್ರಿತ ಸಿಹಿಯಾಗಿರುವುದರಿಂದ ಕಾರ್ಬೋಹೈಡ್ರೇಟ್ಸ್ ನಿಮ್ಮ ದೇಹಕ್ಕೆ ಲಭ್ಯವಾಗುತ್ತದೆ . ಕೇಸರಿ ದಳಗಳನ್ನು ಸೇರಿಸಿರುವ ಸಿಹಿಯಾಗಿರುವುದರಿಂದ ಬಸುರಿ ಮಹಿಳೆಯರಿಗೂ ಕೂಡ ಒಳ್ಳೆಯದು. . ರಸಗುಲ್ಲಾದಲ್ಲಿರುವಂತೆ ಇದರಲ್ಲಿ ಕೊಬ್ಬಿನಂಶ ಇರುವುದಿಲ್ಲ. ಕಡಿಮೆ ಕೊಬ್ಬಿನಂಶ ಇರುವ ಸಿಹಿ ತಿನಿಸಾಗಿದೆ.



Click it and Unblock the Notifications