Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಈ ಹವಾಮಾನದಿಂದಾಗಿ ಕಾಡುವ ಶೀತ-ಗಂಟಲು ನೋವಿಗೆ ರಾಮಬಾಣ ಈ ಕಷಾಯ
ಚಳಿಗಾಲದಲ್ಲಿ ಚಂಡಾಮಾರುತ ಪ್ರಭಾವದಿಂದಾಗಿ ಮಳೆಗಾಲದಲ್ಲಿ ಸುರಿಯುವಂತೆ ಮಳೆ ಬೀಳಲಾರಂಭಿಸಿದೆ, ರಾಜ್ಯದ ಹಲವು ಜಿಲ್ಲೆಗಳ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ವಾತಾವರಣದಲ್ಲಿನ ಬದಲಾವಣೆ ನಮ್ಮನ್ನು ಬೇಗನೆ ಕಾಯಿಲೆ ಬೀಳಿಸುತ್ತದೆ, ಶೀತ,ಕೆಮ್ಮು, ಜ್ವರ ಈ ಬಗೆಯ ಸಮಸ್ಯೆ ಕಾಡುವುದು ಹಾಗಾಗಿ ಈ ಸಮಯದಲ್ಲಿ ಆರೋಗ್ಯದ ಕಡೆಗೆ ಗಮನಹರಿಸಬೇಕು. ಕಷಾಯ ಈ ಬಗೆಯ ಸಾಮಾನ್ಯ ಆರೋಗ್ಯ ಸಮಸ್ಯೆ ತಡೆಗಟ್ಟಲು ಸಹಕಾರಿಯಾಗಿದೆ.
ಇದು ಚಳಿಗಾಲ ಕೂಡ ಹೌದು, ಈ ಕಷಾಯ ಚಳಿಯಿಂದಲೂ ನಿಮ್ಮ ಆರೋಗ್ಯ ರಕ್ಷಣೆ ಮಾಡುತ್ತದೆ, ಬನ್ನಿ ಆ ಕಷಾಯ ಮಾಡುವುದು ಹೇಗೆ ಎಂದು ನೋಡೋಣ:

2 ಚಮಚ ಕೊತ್ತಂಬರಿ ಬೀಜ
1/4 ಚಮಚ ಜೀರಿಗೆ
8-10 ಕಾಳು ಮೆಣಸು
1/ 2 ಚಮಚ ಸೋಂಪು
5-6 ಎಸಳು ಬೆಳ್ಳುಳ್ಳಿ
ಸ್ವಲ್ಪ ಶುಂಠಿ 1/ 2 ಚಮಚ ಅರಿಶಿಣ
ತುಳಸಿ ಎಲೆ 3-4
ಸ್ವಲ್ಪ ಬೆಲ್ಲ
1 ಲೋಟ ಹಾಲು ಅಥವಾ ನೀರು
ಮಾಡುವ ವಿಧಾನ
ನೀವು ಮೊದಲಿಗೆ ಕಷಾಯ ಪುಡಿ ರೆಡಿ ಮಾಡಿ
ಸೋಂಪು, ಜೀರಿಗೆ , ಕಾಳು ಮೆಣಸು, ಕೊತ್ತಂಬರಿ ಬೀಜ ಎಲ್ಲವನ್ನು ರೋಸ್ಟ್ ಮಾಡಿ
ಈಗ ಅವುಗಳನ್ನು ಪುಡಿ ಮಾಡಿ
ಬಳಿಕ ಇದನ್ನು ಹಾಲು ಅಥವಾ ನೀರಿಗೆ ಸೇರಿಸಿ, ಹಾಲಾದಾದರೆ 1 ಲೋಟ ಹಾಲು,
ಒಂದೂವರೆಲೋಟ ನೀರು ಸೇರಿಸಿ, ಇಲ್ಲದಿದ್ದರೆ 2-3 ಲೋಟ ನೀರು ಹಾಕಬಹುದು
ಈಗ ತುಳಸಿ, ಬೆಳ್ಳುಳ್ಳ, ಶುಂಠಿ, ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಿ.
ನೀವು ಹಾಲು ಸೇರಿಸುವುದಾದರೆ ಕಡಿಮೆ ಉರಿಯಲ್ಲಿ ಕುದಿಸಿ
ನಂತರ ಕಷಾಯವನ್ನು ಬಿಸಿ ಬಿಸಿಯಾಗಿ ಸವಿಯಿರಿ
ಈಕಷಾಯ ಕೆಮ್ಮು, ಶೀತ, ಜ್ವರ ಈ ಬಗೆಯ ಸಮಸ್ಯೆ ತಡೆಗಟ್ಟುತ್ತದೆ. ಇದನ್ನು
ದಿನದಲ್ಲಿ ಎರಡು ಹೊತ್ತು ಸೇವಿಸಬಹುದು. '
ಚಳಿಗಾಲದಲ್ಲಿ ಆಗಾಗ ಮಾಡಿ ಕುಡಿಯುವುದು ಒಳ್ಳೆಯದು.
ಈ ಕಷಾಯ ಕೂಡ ಟ್ರೈ ಮಾಡಬಹುದು
ಬೇಕಾಗುವ ಸಾಮಗ್ರಿ
1/2ಕಪ್ ಕೊತ್ತಂಬರಿ ಬೀಜ
1/4 ಕಪ್ ಜೀರಿಗೆ
1 ಚಮಚ ಮೆಂತೆ
2 ಚಮಚ ಕಾಳುಮೆಣಸು
1 ನಟ್ಮಗ್
ಸ್ವಲ್ಪ ಶುಂಠಿ (ಒಣ ಶುಂಠಿ)
3-4 ಏಲಕ್ಕಿ
2 ಲವಂಗ
ಮಾಡುವ ವಿಧಾನ
- ನೀವು ಕೊತ್ತಂಬರಿ ಬೀಜವನ್ನು ರೋಸ್ಟ್ ಮಾಡಿ
- ಅದೇ ರೀತಿ ಜೀರಿಗೆ , ಕಾಳು ಮೆಣಸು, ಸೋಂಪು
- ಏಲಕ್ಕಿ, ಲವಂಗ, ಚಕ್ಕೆ ಇವುಗಳನ್ನು ಸ್ವಲ್ಪ ರೋಸ್ಟ್ ಮಾಡಿ
- ಈಗ ಈ ಮಿಶ್ರಣವನ್ನು ಮಿಕ್ಸಿಯಲ್ಲಿ ಹಾಕಿ ರುಬ್ಬಿಡಿ
- ಈಗ ಈ ಕಷಾಯ ಪುಡಿಯನ್ನು 1/ 2 ಚಮಚ ತೆಗೆದು ಬಿಸಿ ನೀರು ಅಥವಾ ಹಾಲಿನ ಜೊತೆ ಮಿಕ್ಸ್ ಮಾಡಿ ಸವಿಯಿರಿ
ಕಷಾಯವನ್ನು ನೀವು ಮಲಗುವ ಅರ್ಧ ಗಂಟೆಯ ಮುನ್ನ ತೆಗೆದುಕೊಳ್ಳಿ
ಬೆಳಗ್ಗೆ ಟೀ ಬದಲಿಗೆ ಇದನ್ನು ಸೇವಿಸಬಹುದು.
ಸೂಚನೆ: ಕಷಾಯವನ್ನು ಹೆಚ್ಚು ಬಳಸಬೇಡಿ, ದಿನದಲ್ಲಿ ಒಂದು ಅಥವಾ ಎರಡು ಲೋಟ ಸೇವಿಸಿ.



Click it and Unblock the Notifications