Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಈ ಹವಾಮಾನದಿಂದಾಗಿ ಕಾಡುವ ಶೀತ-ಗಂಟಲು ನೋವಿಗೆ ರಾಮಬಾಣ ಈ ಕಷಾಯ
ಚಳಿಗಾಲದಲ್ಲಿ ಚಂಡಾಮಾರುತ ಪ್ರಭಾವದಿಂದಾಗಿ ಮಳೆಗಾಲದಲ್ಲಿ ಸುರಿಯುವಂತೆ ಮಳೆ ಬೀಳಲಾರಂಭಿಸಿದೆ, ರಾಜ್ಯದ ಹಲವು ಜಿಲ್ಲೆಗಳ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ವಾತಾವರಣದಲ್ಲಿನ ಬದಲಾವಣೆ ನಮ್ಮನ್ನು ಬೇಗನೆ ಕಾಯಿಲೆ ಬೀಳಿಸುತ್ತದೆ, ಶೀತ,ಕೆಮ್ಮು, ಜ್ವರ ಈ ಬಗೆಯ ಸಮಸ್ಯೆ ಕಾಡುವುದು ಹಾಗಾಗಿ ಈ ಸಮಯದಲ್ಲಿ ಆರೋಗ್ಯದ ಕಡೆಗೆ ಗಮನಹರಿಸಬೇಕು. ಕಷಾಯ ಈ ಬಗೆಯ ಸಾಮಾನ್ಯ ಆರೋಗ್ಯ ಸಮಸ್ಯೆ ತಡೆಗಟ್ಟಲು ಸಹಕಾರಿಯಾಗಿದೆ.
ಇದು ಚಳಿಗಾಲ ಕೂಡ ಹೌದು, ಈ ಕಷಾಯ ಚಳಿಯಿಂದಲೂ ನಿಮ್ಮ ಆರೋಗ್ಯ ರಕ್ಷಣೆ ಮಾಡುತ್ತದೆ, ಬನ್ನಿ ಆ ಕಷಾಯ ಮಾಡುವುದು ಹೇಗೆ ಎಂದು ನೋಡೋಣ:

2 ಚಮಚ ಕೊತ್ತಂಬರಿ ಬೀಜ
1/4 ಚಮಚ ಜೀರಿಗೆ
8-10 ಕಾಳು ಮೆಣಸು
1/ 2 ಚಮಚ ಸೋಂಪು
5-6 ಎಸಳು ಬೆಳ್ಳುಳ್ಳಿ
ಸ್ವಲ್ಪ ಶುಂಠಿ 1/ 2 ಚಮಚ ಅರಿಶಿಣ
ತುಳಸಿ ಎಲೆ 3-4
ಸ್ವಲ್ಪ ಬೆಲ್ಲ
1 ಲೋಟ ಹಾಲು ಅಥವಾ ನೀರು
ಮಾಡುವ ವಿಧಾನ
ನೀವು ಮೊದಲಿಗೆ ಕಷಾಯ ಪುಡಿ ರೆಡಿ ಮಾಡಿ
ಸೋಂಪು, ಜೀರಿಗೆ , ಕಾಳು ಮೆಣಸು, ಕೊತ್ತಂಬರಿ ಬೀಜ ಎಲ್ಲವನ್ನು ರೋಸ್ಟ್ ಮಾಡಿ
ಈಗ ಅವುಗಳನ್ನು ಪುಡಿ ಮಾಡಿ
ಬಳಿಕ ಇದನ್ನು ಹಾಲು ಅಥವಾ ನೀರಿಗೆ ಸೇರಿಸಿ, ಹಾಲಾದಾದರೆ 1 ಲೋಟ ಹಾಲು,
ಒಂದೂವರೆಲೋಟ ನೀರು ಸೇರಿಸಿ, ಇಲ್ಲದಿದ್ದರೆ 2-3 ಲೋಟ ನೀರು ಹಾಕಬಹುದು
ಈಗ ತುಳಸಿ, ಬೆಳ್ಳುಳ್ಳ, ಶುಂಠಿ, ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಿ.
ನೀವು ಹಾಲು ಸೇರಿಸುವುದಾದರೆ ಕಡಿಮೆ ಉರಿಯಲ್ಲಿ ಕುದಿಸಿ
ನಂತರ ಕಷಾಯವನ್ನು ಬಿಸಿ ಬಿಸಿಯಾಗಿ ಸವಿಯಿರಿ
ಈಕಷಾಯ ಕೆಮ್ಮು, ಶೀತ, ಜ್ವರ ಈ ಬಗೆಯ ಸಮಸ್ಯೆ ತಡೆಗಟ್ಟುತ್ತದೆ. ಇದನ್ನು
ದಿನದಲ್ಲಿ ಎರಡು ಹೊತ್ತು ಸೇವಿಸಬಹುದು. '
ಚಳಿಗಾಲದಲ್ಲಿ ಆಗಾಗ ಮಾಡಿ ಕುಡಿಯುವುದು ಒಳ್ಳೆಯದು.
ಈ ಕಷಾಯ ಕೂಡ ಟ್ರೈ ಮಾಡಬಹುದು
ಬೇಕಾಗುವ ಸಾಮಗ್ರಿ
1/2ಕಪ್ ಕೊತ್ತಂಬರಿ ಬೀಜ
1/4 ಕಪ್ ಜೀರಿಗೆ
1 ಚಮಚ ಮೆಂತೆ
2 ಚಮಚ ಕಾಳುಮೆಣಸು
1 ನಟ್ಮಗ್
ಸ್ವಲ್ಪ ಶುಂಠಿ (ಒಣ ಶುಂಠಿ)
3-4 ಏಲಕ್ಕಿ
2 ಲವಂಗ
ಮಾಡುವ ವಿಧಾನ
- ನೀವು ಕೊತ್ತಂಬರಿ ಬೀಜವನ್ನು ರೋಸ್ಟ್ ಮಾಡಿ
- ಅದೇ ರೀತಿ ಜೀರಿಗೆ , ಕಾಳು ಮೆಣಸು, ಸೋಂಪು
- ಏಲಕ್ಕಿ, ಲವಂಗ, ಚಕ್ಕೆ ಇವುಗಳನ್ನು ಸ್ವಲ್ಪ ರೋಸ್ಟ್ ಮಾಡಿ
- ಈಗ ಈ ಮಿಶ್ರಣವನ್ನು ಮಿಕ್ಸಿಯಲ್ಲಿ ಹಾಕಿ ರುಬ್ಬಿಡಿ
- ಈಗ ಈ ಕಷಾಯ ಪುಡಿಯನ್ನು 1/ 2 ಚಮಚ ತೆಗೆದು ಬಿಸಿ ನೀರು ಅಥವಾ ಹಾಲಿನ ಜೊತೆ ಮಿಕ್ಸ್ ಮಾಡಿ ಸವಿಯಿರಿ
ಕಷಾಯವನ್ನು ನೀವು ಮಲಗುವ ಅರ್ಧ ಗಂಟೆಯ ಮುನ್ನ ತೆಗೆದುಕೊಳ್ಳಿ
ಬೆಳಗ್ಗೆ ಟೀ ಬದಲಿಗೆ ಇದನ್ನು ಸೇವಿಸಬಹುದು.
ಸೂಚನೆ: ಕಷಾಯವನ್ನು ಹೆಚ್ಚು ಬಳಸಬೇಡಿ, ದಿನದಲ್ಲಿ ಒಂದು ಅಥವಾ ಎರಡು ಲೋಟ ಸೇವಿಸಿ.



Click it and Unblock the Notifications