Latest Updates
-
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು!
ಮಳೆಗಾಲದಲ್ಲಿ ಆಗಾಗ ಕಾಡುವ ಕೆಮ್ಮು-ಶೀತ ತಡೆಗಟ್ಟಲು ಬೆಸ್ಟ್ ಈ ಕಷಾಯ
ಮಳೆಗಾಲದಲ್ಲಿ ಶೀತ, ಕೆಮ್ಮು ಈ ಬಗೆಯ ಸಮಸ್ಯೆ ಸಾಮಾನ್ಯ, ಅದರಲ್ಲಿಯೂ ಶಾಲೆಗೆ ಹೋಗುವ ಮಕ್ಕಳಿದ್ದರೆ ವಾರದಲ್ಲಿ ಒಂದು ಬಾರಿಯಾದರೂ ಈ ಬಗೆಯ ಸಮಸ್ಯೆ ಕಾಡುವುದು, ನೀವು ಈ ಸಮಯದಲ್ಲಿ ಮನೆಯಲ್ಲಿ ಕಷಾಯ ಮಾಡಿಡುವುದು ಒಳ್ಳೆಯದು. ಈ ಕಷಾಯ ಪುಡಿಯನ್ನು ಹಾಲಿನಲ್ಲಿ ಹಾಕಿ ಕೊಡುವುದರಿಂದ ಶೀತ, ಕೆಮ್ಮು, ಗಂಟಲು ಕೆರೆತ ಈ ಬಗೆಯ ಸಮಸ್ಯೆಗಳನ್ನು ತಡೆಗಟ್ಟಬಹುದು.

ಬೇಕಾಗುವ ಸಾಮಗ್ರಿ
1/2 ಕಪ್ ಕೊತ್ತಂಬರಿ ಬೀಜ
1/4 ಕಪ್ ಜೀರಿಗೆ
2 ಚಮಚ ಕಾಳು ಮೆಣಸು
1 ಚಮಚ ಸೋಂಪು
5-6 ಏಲಕ್ಕಿ
10 ಲವಂಗ
1/2 ಚಮಚ ಅರಿಶಿಣ ಪುಡಿ
1/2 ಚಮಚ ಶುಂಠಿ ಪುಡಿ
ಸರ್ವ್ ಮಾಡುವಾಗ
ಎರಡೂವರೆ ಕಪ್ ನೀರು
2 ಚಮಚ ಬೆಲ್ಲದ ಪುಡಿ
1/4 ಕಪ್ ಹಾಲು
ಮಾಡುವ ವಿಧಾನ
ಒಂದು ಪ್ಯಾನ್ ತೆಗೆದು 1/2 ಕಪ್ ಕೊತ್ತಂಬರಿ ಬೀಜ, 1/4 ಕಪ್ ಜೀರಿಗೆ, 2 ಚಮಚ
ಕಾಳು ಮೆಣಸು, 1 ಚಮಚ ಸೋಂಪು , ಏಲಕ್ಕಿ, ಲವಂಗ ಸೇರಿಸಿ ಕಡಿಮೆ ಉರಿಯಲ್ಲಿ
ಹುರಿಯಿರಿ.
ಈ ಮಸಾಲೆ ಸಾಮಗ್ರಿಯನ್ನು ಉರಿದಾಗ ತುಂಬಾ ಒಳ್ಳೆಯ ಸುವಾಸನೆ ಬರುತ್ತದೆ, ರೋಸ್ಟ್
ಮಾಡಿ ಆದರೆ ಅದು ಮಸಿಯಾಗುವಂತೆ ರೋಸ್ಟ್ ಮಾಡಬೇಡಿ.
ನಂತರ ಅವುಗಳನ್ನು ಒಂದು ತಟ್ಟೆಗೆ ಹಾಕಿ
ಸ್ವಲ್ಪ ತಣ್ಣಗಾದ ಮೇ ಅರಿಶಿಣ ಪುಡಿ, ಸ್ವಲ್ಪ ಶುಂಠಿ ಪುಡಿ ಸೇರಿಸಿ ಪುಡಿ ಮಾಡಿ,
ಯಾವುದೇ ನೀರು ಸೇರಿಸಬಾರದು, ಅಲ್ಲದೆ ಬ್ಲೆಂಡರ್ಗೆ ಹಾಕುವಾಗ ಅದರಲ್ಲಿ ಸ್ವಲ್ಪವೂ
ನೀರಿನಂಶ ಇರಬಾರದು, ಬ್ಲೆಂಡರ್ ಒರೆಸಿ ನಂತರ ರೋಸ್ಟ್ ಮಾಡಿದ ಸಾಮಗ್ರಿ ಹಾಕಿ
ಪುಡಿ ಮಾಡಿ.
ಈ ಪುಡಿಯನ್ನು ಗಾಜಿನ ಡಬ್ಬದಲ್ಲಿ ಹಾಕಿ ಗಾಳಿಯಾಡದಂತೆ ಮುಚ್ಚಳ ಹಾಕಿಡಿ.
ಕಷಾಯ ಮಾಡುವಾಗ
ನೀವು ನೀರು, ಹಾಲು, ಬೆಲ್ಲ ಹಾಕಿ ಕುದಿಸಿ, ನಂತರ ಈ ಮಿಶ್ರಣ ಕುದಿ ಬರುವಾಗ
ಒಂದೂವರೆ ಚಮಚ ಕಷಾಯ ಪುಡಿ ಹಾಕಿ ಮಿಕ್ಸ್ ಮಾಡಿ, ಮತ್ತೆ ಎರಡು ನಿಮಿಷ ಕುದಿಸಿ,
ಉರಿಯಿಂದ ಇಳಿಸಿ ಸ್ವಲ್ಪ ತಣ್ಣಗಾದ ಮೇಲೆ ಕುಡಿಯಿರಿ.
ಮಳೆಗಾಲ ಮತ್ತು ಚಳಿಗಾಲದಲ್ಲಿ ನೀವು ಇದನ್ನು ಟೀ, ಕಾಫಿ ಬದಲಿಗೆ ಒಂದು ಹೊತ್ತು ಕುಡಿಯುವುದರಿಂದ ಸಾಮಾನ್ಯ ಶೀತ, ಕೆಮ್ಮು ಈ ಬಗೆಯ ಸಮಸ್ಯೆಗಳನ್ನು ತಡೆಗಟ್ಟಬಹುದು.



Click it and Unblock the Notifications