Latest Updates
-
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು?
ಚಳಿಗಾಲದಲ್ಲಿ ಈ ರೀತಿ ರಸಂ ಮಾಡಿ..! ನೆಗಡಿ, ಕೆಮ್ಮು, ಶೀತ ಮಾಯವಾಗುತ್ತೆ..!!
ರಾಜ್ಯದ ಬಹುತೇಕ ಕಡೆಗಳಲ್ಲಿ ತಾಪಮಾನ ಇಳಿಕೆಯಾಗಿದೆ. ಅತ್ಯಂತ ಚಳಿ ಕಾಡುತ್ತಿದೆ. ಇನ್ನೊಂದು ಕಡೆ ಈ ಶೀತ ತಾಪಮಾನದ ಕಾರಣದಿಂದಾಗಿ ಸಣ್ಣ ಪುಟ್ಟ ಅನಾರೋಗ್ಯ ಸಮಸ್ಯೆ ಕೂಡ ಕಾಡಲು ಆರಂಭಿಸಿದೆ. ಅದರಲ್ಲೂ ಶೀತ, ಕೆಮ್ಮು, ಜ್ವರದಂತಹ ಸಮಸ್ಯೆಗಳು ಕಾಡುತ್ತಿದೆ. ಮತ್ತೆ ಕೆಲವರಲ್ಲಿ ರಾತ್ರಿ ಸಮಯದಲ್ಲಿ ಮೂಗು ಕಟ್ಟುವುದು, ಗಂಟಲು ನೋವು ಹೀಗೆ ಹವಾಮಾನ ಸಂಬಂಧಿ ಸಮಸ್ಯೆ ಕಾಡಲು ಆರಂಭಿಸಿದೆ.
ಇಂತಹ ಸಣ್ಣ ಪುಟ್ಟ ಸಮಸ್ಯೆಗಳಿಗೆ ವೈದ್ಯರ ಬಳಿ ಅಥವಾ ಔಷಧಿ ಸೇವಿಸುವ ಬದಲಾಗಿ ಮನೆಯಲ್ಲೇ ಮದ್ದು ಮಾಡಿಕೊಳ್ಳುವುದು ಉತ್ತಮ. ಅದರಲ್ಲೂ ನೀವು ಹೆಚ್ಚಾಗಿ ಕಷಾಯ, ಶುಂಠಿ ಟೀ ಅಂತಹ ಪರಿಹಾರಕ್ಕೆ ಮುಂದಾಗಿರಬಹುದು. ಆದ್ರೆ ನಾವಿಂದು ಊಟದ ಜೊತೆಗೆ ರುಚಿ ನೀಡುವಂತಹ ತಿಳಿಸಾರಿನ ಮೂಲಕ ಈ ಸಣ್ಣ ಪುಟ್ಟ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ ಅನ್ನೋದನ್ನು ತಿಳಿದುಕೊಳ್ಳೋಣ.

ಅದರಲ್ಲೂ ಮಸಾಲೆಗಳ ಹಾಕಿ ಮಾಡುವ ತಿಳಿಸಾರು ನಿಮ್ಮ ಆರೋಗ್ಯಕ್ಕೆ ಅತ್ಯುತ್ತಮ. ದೇಹ ತಂಪಾಗಿದ್ದರೆ ಈ ಮಸಾಲೆ ಪದಾರ್ಥಗಳ ನೆರವಿನಿಂದ ಪರಹಾರ ಮಾಡಬಹುದು. ಹಾಗಾದ್ರೆ ಮನೆಯಲ್ಲೇ ಪುಡಿಯನ್ನು ಸಿದ್ದ ಮಾಡಿ ಆರೋಗ್ಯಕ್ಕೆ ಅತ್ಯುತ್ತಮ ರೀತಿಯಲ್ಲಿ ನೆರವಾಗುವಂತಹ ತಿಳಿಸಾರು ಮಾಡಿ ಸವಿಯುವುದು ಹೇಗೆ ಅನ್ನೋದನ್ನು ನಾವಿಂದು ತಿಳಿದುಕೊಳ್ಳೋಣ.
ಈ ತಿಳಿ ಸಾರು ಮಾಡಲು ಯಾವೆಲ್ಲಾ ಮಸಾಲೆಗಳ ಬಳಸಬೇಕು? ಈ ತಿಳಿಸಾರು ಮಾಡುವ ವಿಧಾನವೇನು?, ಮಾಡಲು ಎಷ್ಟು ಸಮಯ ಹಿಡಿಯಲಿದೆ? ಮಾಡುವ ಸರಿಯಾದ ಕ್ರಮ ಹೇಗೆ ಅನ್ನೋದನ್ನು ಇಲ್ಲಿ ತಿಳಿದುಕೊಳ್ಳೋಣ.
ತಿಳಿಸಾರು ಮಾಡಲು ಬೇಕಾಗುವ ಪದಾರ್ಥಗಳು
- ತೊಗರಿ ಬೇಳೆ- ಕಾಲು ಕಪ್
- ಟೊಮೆಟೋ - 2
- ಹುಣಸೆ ಹಣ್ಣು
- ಕೊತ್ತಂಬರಿ ಸೊಪ್ಪು
- ಕರಿಬೇವಿನ ಸೊಪ್ಪು
- ಬ್ಯಾಡಗಿ ಮೆಣಸಿನಕಾಯಿ- 4
- ಕಡ್ಲೆಬೇಳೆ
- ದನಿಯಾ ಕಾಳು
- ಜೀರಿಗೆ
- ಮೆಣಸು
- ಒಣಕೊಬ್ಬರಿ ತುರಿ
- ಬೆಲ್ಲ
- ಅರಿಶಿನ ಪುಡಿ
- ಸಾಸಿವೆ
- ಇಂಗು
- ಉಪ್ಪು
- ಎಣ್ಣೆ
ಮಸಾಲೆ ಭರಿತ ತಿಳಿಸಾರು ಮಾಡುವ ವಿಧಾನವಿದು
ಮೊದಲು ತೊಗರಿ ಬೇಳೆಯನ್ನು ಚೆನ್ನಾಗಿ ತೊಳೆದು ಕುಕ್ಕರ್ಗೆ ಹಾಕಿ ನೀರು ಹಾಕಿ, ಎಣ್ಣೆ, ಅರಶಿಣ ಹಾಕಿ 2 ಸೀಟಿ ಹೊಡೆಸಿ ಇಟ್ಟುಕೊಳ್ಳಿ. ಒಲೆ ಮೇಲೆ ಒಂದು ಬಾಣಲೆ ಇಟ್ಟು ಅದಕ್ಕೆ ಸ್ವಲ್ಪ ಕಡಲೆ ಬೇಳೆ, ಧನಿಯಾ ಕಾಳು, ಜೀರಿಗೆ, ಕಾಳು ಮೆಣಸು, ಬ್ಯಾಡಗಿ ಮೆಣಸು, ಒಣ ಮೆಣಸು ಹಾಕಿ 2 ನಿಮಿಷ ಸಣ್ಣ ಉರಿಯಲ್ಲಿ ಹುರಿದುಕೊಳ್ಳಿ. ಕಾಳು ಮೆಣಸು ಮತ್ತು ಜೀರಿಗೆ ನಿಮಗೆ ಹೆಚ್ಚಿಗೆ ಬೇಕಿದ್ದರೆ ಬಳಸಿಕೊಳ್ಳಿ. ನಂತರ ಇದಕ್ಕೆ ಕೊಬ್ಬರಿ ಹಾಕಿಕೊಂಡು ಮತ್ತೊಂದು ನಿಮಿಷ ಫ್ರೈ ಮಾಡಿಕೊಳ್ಳಿ. ನಂತರ ಒಲೆ ಆಫ್ ಮಾಡಿ ತಣ್ಣಗಾಗಲು ಬಿಡಿ.
ತಣ್ಣಗಾದ ಈ ಮಸಾಲೆ ಪದಾರ್ಥಗಳನ್ನು ಒಂದು ಮಿಕ್ಸಿ ಜಾರ್ಗೆ ಹಾಕಿ ಸಣ್ಣದಾಗಿ ಪುಡಿ ಮಾಡಿಕೊಳ್ಳಿ. ಈಗ ಒಲೆ ಮೇಲೆ ಒಂದು ಬಾಣಲೆ ಇಟ್ಟು ಅದಕ್ಕೆ ಎಣ್ಣೆ ಹಾಕಿಕೊಂಡು ಬಿಸಿಯಾದ ಬಳಿಕ ಇದಕ್ಕೆ ಸಾಸಿವೆ, ಕರಿವೇವು, ಇಂಗು, ಒಣ ಮೆಣಸು ಹಾಕಿ ಬಿಸಿ ಮಾಡಿ. ನಂತರ ಎರಡು ಟೊಮೆಟೋ ಹಾಕಿ 2 ನಿಮಿಷ ಫ್ರೈ ಮಾಡಿ. ನಂತರ ನೆನೆಸಿಟ್ಟಿರುವ ಹುಣಸೆ ಹಣ್ಣನ್ನು ಹಿಂಡಿಕೊಂಡು ಅದರ ರಸ ಹಾಕಿಕೊಳ್ಳಿ.
ಹಾಗೆ ಇದಕ್ಕೆ ಮೊದಲು ಬೇಯಿಸಿದ್ದ ತೊಗರಿ ಬೇಳೆಯ ಪೇಸ್ಟ್ ಅನ್ನು ಕೂಡ ಹಾಕಿಕೊಳ್ಳಿ. ತೊಗರಿ ಬೇಳೆ ಕುಕ್ಕರ್ನಲ್ಲಿ ಬೆಂದ ಬಳಿಕ ಅದನ್ನು ಸ್ವಲ್ಪ ಕಿವುಚಿ ಮೆತ್ತಗೆ ಮಾಡಿಕೊಳ್ಳಿ. ಇದನ್ನು ಬಾಣಲೆಗೆ ಹಾಕಿ ಒಮ್ಮೆ ಮಿಕ್ಸ್ ಮಾಡಿ ಮಿಕ್ಸಿ ಜಾರ್ನಲ್ಲಿದ್ದ ಮಸಾಲೆ ಪುಡಿಯನ್ನು ಹಾಕಿ, ಸ್ಪೂನ್ ಬೆಲ್ಲದ ಪುಡಿ, ಉಪ್ಪು, ಸ್ವಲ್ಪ ನೀರು ಕೂಡ ಹಾಕಿಕೊಂಡು ಮಿಕ್ಸ್ ಮಾಡಿ.
ನಂತರ ಕುದಿಬರಲು ಬಿಡಬೇಕು. ಸುಮಾರು 5ರಿಂದ 10 ನಿಮಿಷ ಕುದಿಯಲು ಬಿಡಿ. ಕೊನೆಯಲ್ಲಿ ಇದಕ್ಕೆ ಕೊತ್ತಂಬರಿ ಸೊಪ್ಪು ಹಾಕಿ ತಕ್ಷಣ ಒಲೆ ಆಫ್ ಮಾಡಿಕೊಂಡು ಇಳಿಸಿಕೊಳ್ಳಿ. ಇಷ್ಟಾದರೆ ನಿಮ್ಮ ಮುಂದೆ ರುಚಿ ರುಚಿಯ ಚಳಿಗಾಲದ ರಸಂ ರೆಡಿಯಾಗುತ್ತೆ.



Click it and Unblock the Notifications
