Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಕೊಲ್ಲಾಪುರಿ ಚಿಕನ್ ಸಾರಿನ ವಿಶೇಷತೆ ಏನು?
ಕೆಂಪು ಬಣ್ಣ, ಖಾರ, ಸ್ವಾದಿಷ್ಟಕರ ಈ ರೀತಿ ಕೊಲ್ಲಾಪುರಿ ಚಿಕನ್ ಸಾರನ್ನು ಬಣ್ಣಿಸಬಹುದು. ಕೊಲ್ಲಾಪುರಿ ಅಡುಗೆ ತನ್ನದೇ ಆದ ಶೈಲಿಯನ್ನು ಹೊಂದಿದೆ.
ಒಂದೇ ರುಚಿಯ ಚಿಕನ್ ಸಾರು ಮಾಡುವ ಬದಲು ಸ್ವಲ್ಪ ಚೇಂಜ್ ಇರಲಿ ಎಂದು ಬಯಸುವುದಾದರೆ ಸರಳವಾದ, ರುಚಿಕರವಾದ ಈ ರೆಸಿಪಿ ಟ್ರೈ ಮಾಡಬಹುದು.

ಬೇಕಾಗುವ ಸಾಮಾಗ್ರಿಗಳು
ಚಿಕನ್ ಅರ್ಧ ಕೆಜಿ
ಮೊಸರು 50 ಗ್ರಾಂ
ಅರಿಶಿಣ ಪುಡಿ ಅರ್ಧ ಚಮಚ
ಈರುಳ್ಳಿ (ಕತ್ತರಿಸಿದ್ದು)
ಖಾರದ ಪುಡಿ ಅರ್ಧ ಚಮಚ
ಶುಂಠಿ-ಬೆಳ್ಳುಳ್ಳಿ ಪೇಸ್ಟ್ 1 ಚಮಚ
ಜೀರಿಗೆ 1 ಚಮಚ
ಕರಿ ಮೆಣಸು 4-5
ಗಸೆಗಸೆ 1 ಚಮಚ
ಗೋಡಂಬಿ 5-6
ಒಂದು ಇಂಚಿನಷ್ಟು ದೊಡ್ಡದಿರುವ ಚಕ್ಕೆ
ಲವಂಗ 2-3
ತೆಂಗಿನ ತುರಿ 1 ಕಪ್
ಟೊಮೆಟೊ 1
ಎಣ್ಣೆ
ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
* ಚಿಕನ್ ತುಂಡನ್ನು ತೊಳೆದು ಉಪ್ಪು, ಮೊಸರು, ಅರಿಶಿಣ, ಖಾರದ ಪುಡಿ ಹಾಕಿ ಕಲೆಸಿ 1 ಗಂಟೆ ಫ್ರಿಜ್ ನಲ್ಲಿಡಿ.
* ನಂತರ ಫ್ರಿಜ್ ನಿಂದ ತೆಗೆದು 10 ನಿಮಿಷ ಹಾಗೇ ಇಡಿ.
* ಈಗ ಬಾಣಲೆಗೆ 2 ಚಮಚ ಎಣ್ಣೆ ಹಾಕಿ ಬಿಸಿ ಮಾಡಿ. ನಂತರ ಕತ್ತರಿಸಿ ಗೋಡಂಬಿ, ಕೊತ್ತಂಬರಿ ಬೀಜ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಿರಿ. ನಂತರ ಕತ್ತರಿಸಿ ಈರುಳ್ಳಿಯಲ್ಲಿ ಅರ್ಧ ಭಾಗವನ್ನು ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಿರಿ.
* ನಂತರ ತೆಂಗಿನ ತುರಿಯನ್ನು ಹಾಕಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಿರಿ. ಚಕ್ಕೆ, ಲವಂಗ, ಕರಿ ಮೆಣಸು, ಗಸೆಗಸೆ, ಜೀರಿಗೆ ಸೇರಿಸಿ 2 ನಿಮಿಷ ಹುರಿದು ನಂತರ ಉರಿಯಿಂದ ಇಳಿಸಿ ತಣ್ಣಗಾಗಲು ಇಡಿ. ತಣ್ಣಗಾದ ನಂತರ ರುಬ್ಬಿ.
* ಈಗ ಎಣ್ಣೆಯನ್ನು ಬಿಸಿ ಮಾಡಿ ಅದರಲ್ಲಿ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಿರಿ. ನಂತರ ಶುಂಠಿ- ಬೆಳ್ಳುಳ್ಳಿ ಪೇಸ್ಟ್ ಹಾಕಿ. ಈಗ ಕತ್ತರಿಸಿದ ಟೊಮೆಟೊ ಹಾಕಿ ನಂತರ ಚಿಕನ್, ರುಬ್ಬಿದ ಮಸಾಲೆ, , ರುಚಿಗೆ ತಕ್ಕ ಉಪ್ಪು ಹಾಕಿ ಮಿಶ್ರಣ ಮಾಡಿ, ಪಾತ್ರೆಯ ಬಾಯಿ ಮುಚ್ಚಿ ಬೇಯಿಸಿ.
* ತುಂಬಾ ಡ್ರೈಯಾದರೆ ಸ್ವಲ್ಪ ನೀರು ಬೇಕಾದರೆ ಹಾಕಬಹುದು. ಚಿಕನ್ ಬೆಂದ ನಂತರ ಉಪ್ಪು ನೋಡಿ ಉರಿಯಿಂದ ಇಳಿಸಿದರೆ ಕೊಲ್ಲಾಪುರಿ ಚಿಕನ್ ಸಾರು ರೆಡಿ.



Click it and Unblock the Notifications











