Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಕೊಲ್ಲಾಪುರಿ ಚಿಕನ್ ಸಾರಿನ ವಿಶೇಷತೆ ಏನು?
ಕೆಂಪು ಬಣ್ಣ, ಖಾರ, ಸ್ವಾದಿಷ್ಟಕರ ಈ ರೀತಿ ಕೊಲ್ಲಾಪುರಿ ಚಿಕನ್ ಸಾರನ್ನು ಬಣ್ಣಿಸಬಹುದು. ಕೊಲ್ಲಾಪುರಿ ಅಡುಗೆ ತನ್ನದೇ ಆದ ಶೈಲಿಯನ್ನು ಹೊಂದಿದೆ.
ಒಂದೇ ರುಚಿಯ ಚಿಕನ್ ಸಾರು ಮಾಡುವ ಬದಲು ಸ್ವಲ್ಪ ಚೇಂಜ್ ಇರಲಿ ಎಂದು ಬಯಸುವುದಾದರೆ ಸರಳವಾದ, ರುಚಿಕರವಾದ ಈ ರೆಸಿಪಿ ಟ್ರೈ ಮಾಡಬಹುದು.

ಬೇಕಾಗುವ ಸಾಮಾಗ್ರಿಗಳು
ಚಿಕನ್ ಅರ್ಧ ಕೆಜಿ
ಮೊಸರು 50 ಗ್ರಾಂ
ಅರಿಶಿಣ ಪುಡಿ ಅರ್ಧ ಚಮಚ
ಈರುಳ್ಳಿ (ಕತ್ತರಿಸಿದ್ದು)
ಖಾರದ ಪುಡಿ ಅರ್ಧ ಚಮಚ
ಶುಂಠಿ-ಬೆಳ್ಳುಳ್ಳಿ ಪೇಸ್ಟ್ 1 ಚಮಚ
ಜೀರಿಗೆ 1 ಚಮಚ
ಕರಿ ಮೆಣಸು 4-5
ಗಸೆಗಸೆ 1 ಚಮಚ
ಗೋಡಂಬಿ 5-6
ಒಂದು ಇಂಚಿನಷ್ಟು ದೊಡ್ಡದಿರುವ ಚಕ್ಕೆ
ಲವಂಗ 2-3
ತೆಂಗಿನ ತುರಿ 1 ಕಪ್
ಟೊಮೆಟೊ 1
ಎಣ್ಣೆ
ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
* ಚಿಕನ್ ತುಂಡನ್ನು ತೊಳೆದು ಉಪ್ಪು, ಮೊಸರು, ಅರಿಶಿಣ, ಖಾರದ ಪುಡಿ ಹಾಕಿ ಕಲೆಸಿ 1 ಗಂಟೆ ಫ್ರಿಜ್ ನಲ್ಲಿಡಿ.
* ನಂತರ ಫ್ರಿಜ್ ನಿಂದ ತೆಗೆದು 10 ನಿಮಿಷ ಹಾಗೇ ಇಡಿ.
* ಈಗ ಬಾಣಲೆಗೆ 2 ಚಮಚ ಎಣ್ಣೆ ಹಾಕಿ ಬಿಸಿ ಮಾಡಿ. ನಂತರ ಕತ್ತರಿಸಿ ಗೋಡಂಬಿ, ಕೊತ್ತಂಬರಿ ಬೀಜ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಿರಿ. ನಂತರ ಕತ್ತರಿಸಿ ಈರುಳ್ಳಿಯಲ್ಲಿ ಅರ್ಧ ಭಾಗವನ್ನು ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಿರಿ.
* ನಂತರ ತೆಂಗಿನ ತುರಿಯನ್ನು ಹಾಕಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಿರಿ. ಚಕ್ಕೆ, ಲವಂಗ, ಕರಿ ಮೆಣಸು, ಗಸೆಗಸೆ, ಜೀರಿಗೆ ಸೇರಿಸಿ 2 ನಿಮಿಷ ಹುರಿದು ನಂತರ ಉರಿಯಿಂದ ಇಳಿಸಿ ತಣ್ಣಗಾಗಲು ಇಡಿ. ತಣ್ಣಗಾದ ನಂತರ ರುಬ್ಬಿ.
* ಈಗ ಎಣ್ಣೆಯನ್ನು ಬಿಸಿ ಮಾಡಿ ಅದರಲ್ಲಿ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಿರಿ. ನಂತರ ಶುಂಠಿ- ಬೆಳ್ಳುಳ್ಳಿ ಪೇಸ್ಟ್ ಹಾಕಿ. ಈಗ ಕತ್ತರಿಸಿದ ಟೊಮೆಟೊ ಹಾಕಿ ನಂತರ ಚಿಕನ್, ರುಬ್ಬಿದ ಮಸಾಲೆ, , ರುಚಿಗೆ ತಕ್ಕ ಉಪ್ಪು ಹಾಕಿ ಮಿಶ್ರಣ ಮಾಡಿ, ಪಾತ್ರೆಯ ಬಾಯಿ ಮುಚ್ಚಿ ಬೇಯಿಸಿ.
* ತುಂಬಾ ಡ್ರೈಯಾದರೆ ಸ್ವಲ್ಪ ನೀರು ಬೇಕಾದರೆ ಹಾಕಬಹುದು. ಚಿಕನ್ ಬೆಂದ ನಂತರ ಉಪ್ಪು ನೋಡಿ ಉರಿಯಿಂದ ಇಳಿಸಿದರೆ ಕೊಲ್ಲಾಪುರಿ ಚಿಕನ್ ಸಾರು ರೆಡಿ.



Click it and Unblock the Notifications