Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಕೊಲ್ಲಾಪುರಿ ಚಿಕನ್ ಸಾರಿನ ವಿಶೇಷತೆ ಏನು?
ಕೆಂಪು ಬಣ್ಣ, ಖಾರ, ಸ್ವಾದಿಷ್ಟಕರ ಈ ರೀತಿ ಕೊಲ್ಲಾಪುರಿ ಚಿಕನ್ ಸಾರನ್ನು ಬಣ್ಣಿಸಬಹುದು. ಕೊಲ್ಲಾಪುರಿ ಅಡುಗೆ ತನ್ನದೇ ಆದ ಶೈಲಿಯನ್ನು ಹೊಂದಿದೆ.
ಒಂದೇ ರುಚಿಯ ಚಿಕನ್ ಸಾರು ಮಾಡುವ ಬದಲು ಸ್ವಲ್ಪ ಚೇಂಜ್ ಇರಲಿ ಎಂದು ಬಯಸುವುದಾದರೆ ಸರಳವಾದ, ರುಚಿಕರವಾದ ಈ ರೆಸಿಪಿ ಟ್ರೈ ಮಾಡಬಹುದು.

ಬೇಕಾಗುವ ಸಾಮಾಗ್ರಿಗಳು
ಚಿಕನ್ ಅರ್ಧ ಕೆಜಿ
ಮೊಸರು 50 ಗ್ರಾಂ
ಅರಿಶಿಣ ಪುಡಿ ಅರ್ಧ ಚಮಚ
ಈರುಳ್ಳಿ (ಕತ್ತರಿಸಿದ್ದು)
ಖಾರದ ಪುಡಿ ಅರ್ಧ ಚಮಚ
ಶುಂಠಿ-ಬೆಳ್ಳುಳ್ಳಿ ಪೇಸ್ಟ್ 1 ಚಮಚ
ಜೀರಿಗೆ 1 ಚಮಚ
ಕರಿ ಮೆಣಸು 4-5
ಗಸೆಗಸೆ 1 ಚಮಚ
ಗೋಡಂಬಿ 5-6
ಒಂದು ಇಂಚಿನಷ್ಟು ದೊಡ್ಡದಿರುವ ಚಕ್ಕೆ
ಲವಂಗ 2-3
ತೆಂಗಿನ ತುರಿ 1 ಕಪ್
ಟೊಮೆಟೊ 1
ಎಣ್ಣೆ
ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
* ಚಿಕನ್ ತುಂಡನ್ನು ತೊಳೆದು ಉಪ್ಪು, ಮೊಸರು, ಅರಿಶಿಣ, ಖಾರದ ಪುಡಿ ಹಾಕಿ ಕಲೆಸಿ 1 ಗಂಟೆ ಫ್ರಿಜ್ ನಲ್ಲಿಡಿ.
* ನಂತರ ಫ್ರಿಜ್ ನಿಂದ ತೆಗೆದು 10 ನಿಮಿಷ ಹಾಗೇ ಇಡಿ.
* ಈಗ ಬಾಣಲೆಗೆ 2 ಚಮಚ ಎಣ್ಣೆ ಹಾಕಿ ಬಿಸಿ ಮಾಡಿ. ನಂತರ ಕತ್ತರಿಸಿ ಗೋಡಂಬಿ, ಕೊತ್ತಂಬರಿ ಬೀಜ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಿರಿ. ನಂತರ ಕತ್ತರಿಸಿ ಈರುಳ್ಳಿಯಲ್ಲಿ ಅರ್ಧ ಭಾಗವನ್ನು ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಿರಿ.
* ನಂತರ ತೆಂಗಿನ ತುರಿಯನ್ನು ಹಾಕಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಿರಿ. ಚಕ್ಕೆ, ಲವಂಗ, ಕರಿ ಮೆಣಸು, ಗಸೆಗಸೆ, ಜೀರಿಗೆ ಸೇರಿಸಿ 2 ನಿಮಿಷ ಹುರಿದು ನಂತರ ಉರಿಯಿಂದ ಇಳಿಸಿ ತಣ್ಣಗಾಗಲು ಇಡಿ. ತಣ್ಣಗಾದ ನಂತರ ರುಬ್ಬಿ.
* ಈಗ ಎಣ್ಣೆಯನ್ನು ಬಿಸಿ ಮಾಡಿ ಅದರಲ್ಲಿ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಿರಿ. ನಂತರ ಶುಂಠಿ- ಬೆಳ್ಳುಳ್ಳಿ ಪೇಸ್ಟ್ ಹಾಕಿ. ಈಗ ಕತ್ತರಿಸಿದ ಟೊಮೆಟೊ ಹಾಕಿ ನಂತರ ಚಿಕನ್, ರುಬ್ಬಿದ ಮಸಾಲೆ, , ರುಚಿಗೆ ತಕ್ಕ ಉಪ್ಪು ಹಾಕಿ ಮಿಶ್ರಣ ಮಾಡಿ, ಪಾತ್ರೆಯ ಬಾಯಿ ಮುಚ್ಚಿ ಬೇಯಿಸಿ.
* ತುಂಬಾ ಡ್ರೈಯಾದರೆ ಸ್ವಲ್ಪ ನೀರು ಬೇಕಾದರೆ ಹಾಕಬಹುದು. ಚಿಕನ್ ಬೆಂದ ನಂತರ ಉಪ್ಪು ನೋಡಿ ಉರಿಯಿಂದ ಇಳಿಸಿದರೆ ಕೊಲ್ಲಾಪುರಿ ಚಿಕನ್ ಸಾರು ರೆಡಿ.



Click it and Unblock the Notifications