Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ರಂಜಾನ್ ಹಬ್ಬಕ್ಕೆ ಸ್ಪೆಷೆಲ್-ಚಿಕನ್ ಹುಸೈನಿ

ಬೇಕಾಗುವ ಸಾಮಾಗ್ರಿಗಳು:
* ಚಿಕನ್ ಒಂದು ಕೆಜಿ
* ದೊಡ್ಡ ಈರುಳ್ಳಿ 4 (ಕತ್ತರಿಸಿದ್ದು)
* ಹಸಿ ಮೆಣಸಿನ ಕಾಯಿ 8
* ಒಂದು ಚಿಕ್ಕ ತುಂಡು ಶುಂಠಿ (ಜಜ್ಜಿದ ಶುಂಠಿ)
* ಟೊಮೆಟೊ 2 (ಕತ್ತರಿಸಿದ್ದು)
* ಬೆಳ್ಳುಳ್ಳಿ 8-10 ಎಸಳು
* ಅರಿಶಿಣ 1 ಚಮಚ
* ಮೆಣಸಿನ ಪುಡಿ 2 ಚಮಚ
* ಚಕ್ಕೆ ಮತ್ತು ಲವಂಗ 1/2 ಚಮಚ
* ಜೀರಿಗೆ 1/4 ಚಮಚ
* ಏಲಕ್ಕಿ 2
* ಕೊತ್ತಂಬರಿ ಸೊಪ್ಪು, ಪುದೀನಾ ಸೊಪ್ಪು ಮತ್ತು ಕರಿಬೇವಿನ ಎಲೆ
* ಎಣ್ಣೆ 1 ಚಮಚ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಚಿಕನ್ ತುಂಡುಗಳನ್ನು ಚೆನ್ನಾಗಿ ತೊಳೆದು ಅದಕ್ಕೆ ರುಚಿಗೆ ತಕ್ಕ ಉಪ್ಪು, ಅರಿಶಿಣ, ಮೆಣಸಿನ ಪುಡಿ, ಚಕ್ಕೆ, ಲವಂಗ, ಏಲಕ್ಕಿ, ಜೀರಿಗೆ ಪುಡಿ ಹಾಕಿ ಮಿಶ್ರಣ ಮಾಡಬೇಕು.
2. ಒಂದು ಪಾತ್ರೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಕತ್ತರಿಸಿದ ಈರುಳ್ಳಿ, ಹಸಿಮೆಣಸಿನ ಕಾಯಿ , ಜಜ್ಜಿದ ಶುಂಠಿ, ಜಜ್ಜಿದ ಬೆಳ್ಳುಳ್ಳಿ ಹಾಕಿ , ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ಈಗ ಸ್ವಲ್ಪ ಪುದೀನಾ ಮತ್ತು ಕರಿಬೇವಿನ ಎಲೆ ಹಾಕಬೇಕು. ನಂತರ ಕತ್ತರಿಸಿದ ಟೊಮೆಟೊ ಹಾಕಿ, ಟೊಮೆಟೊ ಮೆತ್ತಗಾಗುವವರೆಗೆ ಹುರಿಯಬೇಕು. ನಂತರ ಮಸಾಲೆ ಮಿಕ್ಸ್ ಮಾಡಿದ ಚಿಕನ್ ಹಾಕಿ ಬೇಯಿಸಿಬೇಕು (ಇದರಲ್ಲಿ ಉಪ್ಪು ಸರಿಯಾಗಿ ಇದೆಯೇ ಎಂದು ನೋಡಿ).
3. ಚಿಕನ್ ಬೆಂದ ನಂತರ ಕೊತ್ತಂಬರಿ ಸೊಪ್ಪು ಹಾಕಿ ಅಲಂಕರಿಸಿದರೆ ಚಿಕನ್ ಹುಸೈನಿ ರೆಡಿ.
(ಇದನ್ನು ನೀರು ಹಾಕದೆ ತಯಾರಿಸಬೇಕು, ಚಿಕನ್ ಹುಸೈನಿ ಬೇಯಿಸುವಾಗ ಅದು ತಳ ಹಿಡಿಯದಿರಲು ಆಗಾಗ ಸೌಟ್ ನಿಂದ ಆಡಿಸುತ್ತಾ ಇರಬೇಕು).



Click it and Unblock the Notifications
