Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಬಕ್ರೀದ್ ವಿಶೇಷ: ಘಮ್ಮೆನ್ನುವ ಪೆಪ್ಪರ್ ಮಟನ್ ರೆಸಿಪಿ
ಬಕ್ರೀದ್ ಹಬ್ಬದ ಈ ಶುಭ ಸಂದರ್ಭದಲ್ಲಿ ಮುಸ್ಲಿಂ ಕುಟುಂಬದವರು ಸಾಮಾನ್ಯವಾಗಿ ಕುರಿಮಾಂಸದ ಅಡುಗೆಯನ್ನೇ ಮಾಡುತ್ತಾರೆ. ಹಾಗಾಗಿ ನಿಮ್ಮ ಅತಿಥಿಗಳ ಮನಗೆಲ್ಲಲು ಎಂದಿಗೂ ತಯಾರಿಸುವ ಅದೇ ಹಳೆಯ ರುಚಿಗಿಂತ ಕೊಂಚ ಭಿನ್ನವಾದ ರುಚಿಯ ಕುರಿಮಾಂಸದ ಖಾದ್ಯವನ್ನೇಕೆ ಈ ವರ್ಷ ನೀವು ಮಾಡಬಾರದು? ಹಬ್ಬದ ಮಧ್ಯಾಹ್ನ ಅಥವಾ ರಾತ್ರಿಯೂಟಕ್ಕಾಗಿ ಈ ರುಚಿಕರ ಮತ್ತು ಕೊಂಚ ಖಾರವಾದ ಪೆಪ್ಪರ್ ಮಟನ್ ಖಾದ್ಯವನ್ನು ಮಾಡಿನೋಡಿ.
ಈ ಖಾದ್ಯದಲ್ಲಿ ಪ್ರಮುಖವಾಗಿ ಕಾಳುಮೆಣಸನ್ನು ಬಳಸಲಾಗುವುದರಿಂದ ಇದನ್ನು ರೊಟ್ಟಿಯೊಡನೆ ತಿನ್ನುವಾಗ ಅತ್ಯುತ್ತಮವಾದ ರುಚಿಯನ್ನು ನೀಡುತ್ತದೆ. ಅನ್ನದೊಡನೆ ಕಲಸಿಕೊಂಡು ತಿನ್ನಬಹುದಾದರೂ ಇದರ ಸಾರು ಬಹಳ ದಟ್ಟನಿರುವುದರಿಂದ ಹೆಚ್ಚಿನ ಪ್ರಮಾಣದ ಅಗತ್ಯವಿದೆ. ಕಾಳುಮೆಣಸನ್ನು ಪ್ರಮುಖವಾಗಿ ಬಳಸಿರುವ ಕಾರಣ ಊಟದ ಬಳಿಕ ಕೊಂಚ ಮೊಸರನ್ನು ಸೇವಿಸುವುದು ಅಗತ್ಯ. ಬನ್ನಿ, ತಿಂದಷ್ಟೂ ನಾಲಿಗೆ ಇನ್ನೂ ಬೇಕು ಎನ್ನಿಸುವಂತೆ ಮಾಡುವ ಪೆಪ್ಪರ್ ಮಟನ್ ಮಾಡುವ ಬಗೆಯನ್ನು ನೋಡೋಣ: ಹರಿಯಾಲಿ ಮಟನ್-ಬಕ್ರೀದ್ ಸ್ಪೆಷಲ್

ಪ್ರಮಾಣ: ನಾಲ್ವರಿಗೆ, ಒಂದು ಹೊತ್ತಿಗಾಗುವಷ್ಟು
*ಸಿದ್ಧತಾ ಸಮಯ: ಮೂವತ್ತು ನಿಮಿಷಗಳು
*ತಯಾರಿಕಾ ಸಮಯ: ನಲವತ್ತು ನಿಮಿಷಗಳು
ಅಗತ್ಯವಿರುವ ಸಾಮಾಗ್ರಿಗಳು:
*ಮಟನ್ - ಒಂದು ಕೇಜಿ (ಚಿಕ್ಕ ತುಂಡುಗಳಾಗಿಸಿದ್ದು)
*ಒಣಮೆಣಸಿನ ಪುಡಿ: ಒಂದು ದೊಡ್ಡ ಚಮಚ (ಕಾಶ್ಮೀರಿ ಚಿಲ್ಲಿ ಆದರೆ ಒಂದೂವರೆ ಚಮಚ)
*ಗರಂ ಮಸಾಲಾ ಪುಡಿ : ಒಂದು ದೊಡ್ಡ ಚಮಚ
*ಬೇವಿನ ಎಲೆಗಳು : ಒಂದು ಎಸಳು
*ಅರಿಶಿನ ಪುಡಿ: ಅರ್ಧ ದೊಡ್ಡಚಮಚ
*ಹಸಿಮೆಣಸು : ನಾಲ್ಕು (ಉದ್ದಕ್ಕೆ ಸೀಳಿದ್ದು)
*ಹಸಿಶುಂಠಿಯ ಪೇಸ್ಟ್: ಒಂದು ದೊಡ್ಡಚಮಚ
*ಸಾಸಿವೆ: ಒಂದು ದೊಡ್ಡಚಮಚ
*ಕಾಳುಮೆಣಸು: ಮೂರು ದೊಡ್ಡಚಮಚ
*ಕೊತ್ತಂಬರಿ ಪುಡಿ: ಒಂದು ದೊಡ್ಡಚಮಚ
*ಶುಂಠಿ-ಬೆಳ್ಳುಳ್ಳಿ ಪೇಸ್ಟ್: ಅರ್ಧ ದೊಡ್ಡಚಮಚ
*ಎಣ್ಣೆ : ಒಂದು ದೊಡ್ಡಚಮಚ
*ಉಪ್ಪು: ರುಚಿಗನುಸಾರ
ವಿಧಾನ:
1) ಮಾಂಸದ ತುಂಡುಗಳನ್ನು ನೀರಿನಲ್ಲಿ ಚೆನ್ನಾಗಿ ತೊಳೆದು ನೀರೆಲ್ಲಾ ಹೊರಹೋಗುವಂತೆ ಬಸಿಯಿರಿ. ಇದಕ್ಕೆ ಅರ್ಧದಷ್ಟು ಅರಿಶಿನದ ಪುಡಿ ಹಚ್ಚಿ ಬದಿಗಿಡಿ.
2) ಸುಮಾರು ಹದಿನೈದು ನಿಮಿಷದ ಬಳಿಕ ಪ್ರೆಶರ್ ಕುಕ್ಕರ್ ನಲ್ಲಿ ಕೊಂಚ ಎಣ್ಣೆ ಹಾಕಿ ಬಿಸಿಮಾಡಿ. ಬಿಸಿಯಾದ ಬಳಿಕ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಉಳಿದ ಅರಿಶಿನ ಪುಡಿ, ಕೊತ್ತಂಬರಿ ಪುಡಿ, ಮೆಣಸಿನ ಪುಡಿ, ಉಪ್ಪು ಹಾಕಿ ಚಿಕ್ಕ ಉರಿಯಲ್ಲಿ ನಡುನಡುವೆ ತಿರುವುತ್ತಾ ಹುರಿಯಿರಿ.
3) ಕೊಂಚ ಕಂದು ಬಣ್ಣಕ್ಕೆ ತಿರುಗಿದ ಬಳಿಕ ಮಾಂಸದ ತುಂಡುಗಳನ್ನು ಹಾಕಿ ಕೆಲಕಾಲ ಹುರಿದು ಬಳಿಕ ಮುಚ್ಚಳ ಮುಚ್ಚಿ ಅತಿ ಕಡಿಮೆ ಉರಿಯಲ್ಲಿ ಸುಮಾರು ಹದಿನೈದು ನಿಮಿಷ ಬೇಯಲು ಬಿಡಿ.
4) ಇನ್ನೊಂದು ಪಾತ್ರೆಯಲ್ಲಿ ಒಂದು ಚಮಚ ಎಣ್ಣೆ ಹಾಕಿ ಸಾಸಿವೆ ಸಿಡಿಸಿ. ಬಳಿಕ ಬೇವಿನ ಎಲೆ, ಶುಂಠಿ ಪೇಸ್ಟ್, ಹಸಿಮೆಣಸು ಹಾಕಿ ಕಂದು ಬಣ್ಣವಾಗುವವರೆಗೆ ಹುರಿಯಿರಿ.
5) ಬಳಿಕ ಗರಂ ಮಸಾಲ ಪುಡಿ, ಕಾಳುಮೆಣಸು ಹಾಕಿ ಹುರಿಯಿರಿ.
6) ನಂತರ ಪ್ರೆಶರ್ ಕುಕ್ಕರಿನಲ್ಲಿ ಬೇಯಿಸಿದ್ದ ಮಾಂಸದ ತುಂಡುಗಳನ್ನು ಇದಕ್ಕೆ ಹಾಕಿ ತಿರುವಿ
7) ಚಿಕ್ಕ ಉರಿಯಲ್ಲಿಯೇ ನಡುನಡುವೆ ತಿರುವುತ್ತಾ ಮಾಂಸ ಬೇಯಲು ಬಿಡಿ. ಹತ್ತು ನಿಮಿಷದ ಬಳಿಕ ಉರಿಯನ್ನು ನಂದಿಸಿ.
8) ಕೊತ್ತಂಬರಿ ಸೊಪ್ಪನ್ನು ಚಿಕ್ಕದಾಗಿ ಹೆಚ್ಚಿ ಮೇಲೆ ಸಿಂಪಡಿಸಿ ಬಿಸಿಬಿಸಿಯಿದ್ದಂತೆಯೇ ಅತಿಥಿಗಳಿಗೆ ಬಡಿಸಿ. ಈ ರುಚಿಕರ ಖಾದ್ಯ ನಿಮಗೆ ಹೇಗೆನಿಸಿತು ಎಂಬುದನ್ನು ನಮಗೆ ತಿಳಿಸಲು ಮರೆಯದಿರಿ



Click it and Unblock the Notifications
