Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಎಣ್ಣೆರಹಿತ ಹೆಸರುಕಾಳಿನ ಮಸಾಲಾ

* ಧರ್ಮಸ್ಥಳ ಮಮತಾ ಶೆಣೈ
ಇಬ್ಬರ ಊಟಕ್ಕೆ ಪ್ರಮಾಣ : ಎರಡು ಕಪ್ ಹೆಸರುಕಾಳುಗಳನ್ನು ನೀರಲ್ಲಿ ನೆನೆ ಹಾಕಿ. ರಾತ್ರಿ ಅಥವಾ ಬೆಳಗ್ಗೆ ನೆನೆ ಹಾಕಿದರೆ ಸುಮಾರು ಎಂಟು ಗಂಟೆಕಾಲ ನೆನೆಯಬೇಕು. ನೆನೆದ ಹೆಸರು ಕಾಳನ್ನು ಬೇಯಲು ಇಡಿ. ಹೆಚ್ಚಿಗೆ ಬೆಂದು ನುಣ್ಣಗಾಗದಂತೆ ಎಚ್ಚರ ವಹಿಸಿ. ಮುಕ್ಕಾಲು ಭಾಗದಷ್ಟು ಬೆಂದರೆ ಸಾಕು. ಅದು ಒಂದು ಕಡೆ ಹಾಗಿರಲಿ.
ಮಸಾಲೆಗೆ ಸಿದ್ಧಮಾಡಿಕೊಳ್ಳೋಣ : ಗಸಗಸೆ ಒಂದು ಚಮಚ, ಚೂರು ಚಕ್ಕೆ, ಗೋಲಿ ಗಾತ್ರ ಹುಣಿಸೆ ಹಣ್ಣು, ಗೋಲಿ ಗಾತ್ರ ಬೆಲ್ಲ, ಐದಾರು ಗೋಡಂಬಿ, ಸಣ್ಣ ಹಿಡಿ ಕಾಯಿ ತುರಿ, ನಾಲಕ್ಕು ಹಸಿಮೆಣಸಿನಕಾಯಿ, ಐದಾರು ಎಸಳು ಕೊತ್ತಂಬರಿ ಸೊಪ್ಪು. ಇವಿಷ್ಟನ್ನು ಮಿಕ್ಸಿಗೆ ಹಾಕಿ, ಚೂರು ನೀರು ಬೆರೆಸಿ ನುಣ್ಣಗೆ ರುಬ್ಬಿಕೊಳ್ಳಬೇಕು.
ಬೆಂದ ಹೆಸರುಕಾಳಿಗೆ ಈ ಮೇಲಿನ ಮಸಾಲೆಯನ್ನು ಬೆರೆಸಿ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಮತ್ತೆ ಕುದಿಸಬೇಕು. ಹೆಚ್ಚಿಗೆ ನೀರು ಹಾಕಬಾರದು, ಪದಾರ್ಥ ತೊವ್ವೆ ಮಾದರಿಯಲ್ಲಿ ಇರಬೇಕು. ಈ ಅಡುಗೆಯ ವಿಶೇಷವೆಂದರೆ ಎಣ್ಣೆ, ಬೆಣ್ಣೆ ಅಥವಾ ತುಪ್ಪ ಅಥವಾ ಯಾವುದೇ ವನಸ್ಪತಿ ಇಲ್ಲದೆ ಮಸಾಲಾ ತಯಾರಾಗಿರುತ್ತದೆ. ದುಬಾರಿ ಬೇಳೆಯಲ್ಲಿ ಕಳೆದುಕೊಂಡದ್ದನ್ನು ಜಿಡ್ಡುರಹಿತ ಮಸಾಲಾದಲ್ಲಿ ಗಳಿಸಿ!



Click it and Unblock the Notifications











