Latest Updates
-
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ
ಗಣೇಶನಿಗೆ ಕಡಲೆ ಉಸುಳಿ ಹೀಗೆ ಮಾಡಿ ನೋಡಿ
ಗೌರಿ ಗಣೇಶ ಹಬ್ಬ ಬರಲು ಇನ್ನೇನು ಕೆಲವೇ ದಿನಗಳಿವೆ. (ಗೌರಿ-ಆ.31-2011, ಗಣೇಶ-ಸೆ. 1, 2011). ಹಬ್ಬಗಳೆಂದ ಮೇಲೆ ಮನೆಯಲ್ಲಿ ತಿಂಡಿ ಊಟದ್ದೇ ಕಾರುಬಾರು. ಖಾದ್ಯಗಳಲ್ಲಿ ಹೊಸತನವಿದ್ದರೇನೆ ಹಬ್ಬಕ್ಕೆ ಕಳೆ. ಗಣೇಶನಿಗೆ ಪ್ರಿಯವಾದ ಕಡಲೆಕಾಳಿನ ಉಸುಳಿ ಇಲ್ಲದಿದ್ದರೆ ಈ ಹಬ್ಬಕ್ಕೆ ಅರ್ಥವೇ ಇಲ್ಲ.
ಕಡಲೆಕಾಳು ಉಸುಳಿಯನ್ನು ಅತಿ ಸುಲಭವಾಗಿ ಮತ್ತು ವಿಶೇಷವಾಗಿ ತಯಾರಿಸಬಹುದಾದ ವಿಧಾನ ಇಲ್ಲಿದೆ. ಈ ಬಾರಿಯ ಗಣೇಶ ಹಬ್ಬಕ್ಕೆ ವಿಶೇಷ ಉಸುಳಿ ಮಾಡಿ ಗಣೇಶನಿಗೆ ನೈವೇದ್ಯಕ್ಕೆ ಇಡುವುದನ್ನು ಮರೆಯಬೇಡಿ.
ಬೇಕಾಗುವ ಪದಾರ್ಥಗಳು:
* 1 1/2 ಕಪ್ ಕಡಲೆಕಾಳು
* ಮೂರು ಚಮಚ ತುರಿದಿಟ್ಟುಕೊಂಡ ಕಾಯಿ
* ಸಾಸಿವೆ, ಉದ್ದಿನ ಬೇಳೆ, ಉಪ್ಪು
* ಎರಡು ಕೆಂಪು ಮೆಣಸಿನ ಕಾಯಿ
* ಕರಿಬೇವು, ಇಂಗು ಮತ್ತು ಎಣ್ಣೆ
* ಗರಂ ಮಸಾಲ ಸ್ವಲ್ಪ
ಮಾಡುವ ವಿಧಾನ: ಹಬ್ಬದ ಹಿಂದಿನ ದಿನ ಕಡಲೆಕಾಳನ್ನು ಒಂದು ರಾತ್ರಿ ನೆನೆಸಿಡಬೇಕು. ನಂತರ ಕಡಲೆಕಾಳನ್ನು ಚೆನ್ನಾಗಿ ಸೋಸಿ ಬೇಯಿಸಿ ಇಟ್ಟುಕೊಳ್ಳಬೇಕು. ನೀರನ್ನು ಬಸಿದ ನಂತರ ಸ್ವಲ್ಪ ಸಮಯ ಕಡಲೆಕಾಳನ್ನು ಹಾಗೆಯೇ ಆರಲು ಬಿಡಬೇಕು. ಈಗ ಬಾಣಲೆಯಲ್ಲಿ ಎಣ್ಣೆ ಹಾಕಿ, ಅದು ಕಾದ ನಂತರ ಸಾಸಿವೆ, ಉದ್ದಿನ ಬೇಳೆ, ಮತ್ತು ಕೆಂಪು ಮೆಣಸಿನ ಕಾಯಿಯನ್ನು ತುಂಡಾಗಿ ಕತ್ತರಿಸಿ ಹಾಕಬೇಕು.
ನಂತರ ಅದಕ್ಕೆ ಕರಿಬೇವು ಹಾಕಿ ಇಂಗು ಮತ್ತು ಸ್ವಲ್ಪ ಗರಂ ಮಸಾಲ ಬೆರೆಸಿ ಹುರಿದುಕೊಳ್ಳಬೇಕು. ಕೊನೆಗೆ ತೆಂಗಿನ ತುರಿ ಮತ್ತು ಸ್ವಲ್ಪ ಉಪ್ಪನ್ನು ಬೆರೆಸಿ ಒಲೆಯಿಂದ ಕೆಳಗೆ ಇಳಿಸಬೇಕು. ಈಗ ಈ ಮಿಶ್ರಣವನ್ನು ಚೆನ್ನಾಗಿ ಕದಡಿ ಅದಕ್ಕೆ ಬೇಯಿಸಿದ ಕಡಲೆಕಾಳನ್ನು ಬೆರೆಸಿಕೊಂಡು ಕಾಯಿ ತುರಿ ಚೆನ್ನಾಗಿ ಹರಡಿಕೊಳ್ಳುವವರೆಗೂ ಉಸುಳಿಯನ್ನು ಉರಿದು ಕೆಳಗಿಳಿಸಬೇಕು.
ಈಗ ಕಡಲೆಕಾಳು ಉಸುಳಿ ನೈವೇದ್ಯಕ್ಕೆ ತಯಾರಾಗಿದೆ. ( ಸೂಚನೆ: ಕಡಲೆಕಾಳು ಬೇಯಿಸುವಾಗಲೂ ಸ್ವಲ್ಪ ಉಪ್ಪು ಬೆರೆಸಿದ್ದರಿಂದ ಉಪ್ಪನ್ನು ಹಾಕುವಲ್ಲಿ ಜಾಗ್ರತೆಯಿಂದಿರಬೇಕು).



Click it and Unblock the Notifications