Latest Updates
-
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ!
ಗಣೇಶನಿಗೆ ಕಡಲೆ ಉಸುಳಿ ಹೀಗೆ ಮಾಡಿ ನೋಡಿ
ಗೌರಿ ಗಣೇಶ ಹಬ್ಬ ಬರಲು ಇನ್ನೇನು ಕೆಲವೇ ದಿನಗಳಿವೆ. (ಗೌರಿ-ಆ.31-2011, ಗಣೇಶ-ಸೆ. 1, 2011). ಹಬ್ಬಗಳೆಂದ ಮೇಲೆ ಮನೆಯಲ್ಲಿ ತಿಂಡಿ ಊಟದ್ದೇ ಕಾರುಬಾರು. ಖಾದ್ಯಗಳಲ್ಲಿ ಹೊಸತನವಿದ್ದರೇನೆ ಹಬ್ಬಕ್ಕೆ ಕಳೆ. ಗಣೇಶನಿಗೆ ಪ್ರಿಯವಾದ ಕಡಲೆಕಾಳಿನ ಉಸುಳಿ ಇಲ್ಲದಿದ್ದರೆ ಈ ಹಬ್ಬಕ್ಕೆ ಅರ್ಥವೇ ಇಲ್ಲ.
ಕಡಲೆಕಾಳು ಉಸುಳಿಯನ್ನು ಅತಿ ಸುಲಭವಾಗಿ ಮತ್ತು ವಿಶೇಷವಾಗಿ ತಯಾರಿಸಬಹುದಾದ ವಿಧಾನ ಇಲ್ಲಿದೆ. ಈ ಬಾರಿಯ ಗಣೇಶ ಹಬ್ಬಕ್ಕೆ ವಿಶೇಷ ಉಸುಳಿ ಮಾಡಿ ಗಣೇಶನಿಗೆ ನೈವೇದ್ಯಕ್ಕೆ ಇಡುವುದನ್ನು ಮರೆಯಬೇಡಿ.
ಬೇಕಾಗುವ ಪದಾರ್ಥಗಳು:
* 1 1/2 ಕಪ್ ಕಡಲೆಕಾಳು
* ಮೂರು ಚಮಚ ತುರಿದಿಟ್ಟುಕೊಂಡ ಕಾಯಿ
* ಸಾಸಿವೆ, ಉದ್ದಿನ ಬೇಳೆ, ಉಪ್ಪು
* ಎರಡು ಕೆಂಪು ಮೆಣಸಿನ ಕಾಯಿ
* ಕರಿಬೇವು, ಇಂಗು ಮತ್ತು ಎಣ್ಣೆ
* ಗರಂ ಮಸಾಲ ಸ್ವಲ್ಪ
ಮಾಡುವ ವಿಧಾನ: ಹಬ್ಬದ ಹಿಂದಿನ ದಿನ ಕಡಲೆಕಾಳನ್ನು ಒಂದು ರಾತ್ರಿ ನೆನೆಸಿಡಬೇಕು. ನಂತರ ಕಡಲೆಕಾಳನ್ನು ಚೆನ್ನಾಗಿ ಸೋಸಿ ಬೇಯಿಸಿ ಇಟ್ಟುಕೊಳ್ಳಬೇಕು. ನೀರನ್ನು ಬಸಿದ ನಂತರ ಸ್ವಲ್ಪ ಸಮಯ ಕಡಲೆಕಾಳನ್ನು ಹಾಗೆಯೇ ಆರಲು ಬಿಡಬೇಕು. ಈಗ ಬಾಣಲೆಯಲ್ಲಿ ಎಣ್ಣೆ ಹಾಕಿ, ಅದು ಕಾದ ನಂತರ ಸಾಸಿವೆ, ಉದ್ದಿನ ಬೇಳೆ, ಮತ್ತು ಕೆಂಪು ಮೆಣಸಿನ ಕಾಯಿಯನ್ನು ತುಂಡಾಗಿ ಕತ್ತರಿಸಿ ಹಾಕಬೇಕು.
ನಂತರ ಅದಕ್ಕೆ ಕರಿಬೇವು ಹಾಕಿ ಇಂಗು ಮತ್ತು ಸ್ವಲ್ಪ ಗರಂ ಮಸಾಲ ಬೆರೆಸಿ ಹುರಿದುಕೊಳ್ಳಬೇಕು. ಕೊನೆಗೆ ತೆಂಗಿನ ತುರಿ ಮತ್ತು ಸ್ವಲ್ಪ ಉಪ್ಪನ್ನು ಬೆರೆಸಿ ಒಲೆಯಿಂದ ಕೆಳಗೆ ಇಳಿಸಬೇಕು. ಈಗ ಈ ಮಿಶ್ರಣವನ್ನು ಚೆನ್ನಾಗಿ ಕದಡಿ ಅದಕ್ಕೆ ಬೇಯಿಸಿದ ಕಡಲೆಕಾಳನ್ನು ಬೆರೆಸಿಕೊಂಡು ಕಾಯಿ ತುರಿ ಚೆನ್ನಾಗಿ ಹರಡಿಕೊಳ್ಳುವವರೆಗೂ ಉಸುಳಿಯನ್ನು ಉರಿದು ಕೆಳಗಿಳಿಸಬೇಕು.
ಈಗ ಕಡಲೆಕಾಳು ಉಸುಳಿ ನೈವೇದ್ಯಕ್ಕೆ ತಯಾರಾಗಿದೆ. ( ಸೂಚನೆ: ಕಡಲೆಕಾಳು ಬೇಯಿಸುವಾಗಲೂ ಸ್ವಲ್ಪ ಉಪ್ಪು ಬೆರೆಸಿದ್ದರಿಂದ ಉಪ್ಪನ್ನು ಹಾಕುವಲ್ಲಿ ಜಾಗ್ರತೆಯಿಂದಿರಬೇಕು).



Click it and Unblock the Notifications