Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
ಗಣೇಶನಿಗೆ ಕಡಲೆ ಉಸುಳಿ ಹೀಗೆ ಮಾಡಿ ನೋಡಿ
ಗೌರಿ ಗಣೇಶ ಹಬ್ಬ ಬರಲು ಇನ್ನೇನು ಕೆಲವೇ ದಿನಗಳಿವೆ. (ಗೌರಿ-ಆ.31-2011, ಗಣೇಶ-ಸೆ. 1, 2011). ಹಬ್ಬಗಳೆಂದ ಮೇಲೆ ಮನೆಯಲ್ಲಿ ತಿಂಡಿ ಊಟದ್ದೇ ಕಾರುಬಾರು. ಖಾದ್ಯಗಳಲ್ಲಿ ಹೊಸತನವಿದ್ದರೇನೆ ಹಬ್ಬಕ್ಕೆ ಕಳೆ. ಗಣೇಶನಿಗೆ ಪ್ರಿಯವಾದ ಕಡಲೆಕಾಳಿನ ಉಸುಳಿ ಇಲ್ಲದಿದ್ದರೆ ಈ ಹಬ್ಬಕ್ಕೆ ಅರ್ಥವೇ ಇಲ್ಲ.
ಕಡಲೆಕಾಳು ಉಸುಳಿಯನ್ನು ಅತಿ ಸುಲಭವಾಗಿ ಮತ್ತು ವಿಶೇಷವಾಗಿ ತಯಾರಿಸಬಹುದಾದ ವಿಧಾನ ಇಲ್ಲಿದೆ. ಈ ಬಾರಿಯ ಗಣೇಶ ಹಬ್ಬಕ್ಕೆ ವಿಶೇಷ ಉಸುಳಿ ಮಾಡಿ ಗಣೇಶನಿಗೆ ನೈವೇದ್ಯಕ್ಕೆ ಇಡುವುದನ್ನು ಮರೆಯಬೇಡಿ.
ಬೇಕಾಗುವ ಪದಾರ್ಥಗಳು:
* 1 1/2 ಕಪ್ ಕಡಲೆಕಾಳು
* ಮೂರು ಚಮಚ ತುರಿದಿಟ್ಟುಕೊಂಡ ಕಾಯಿ
* ಸಾಸಿವೆ, ಉದ್ದಿನ ಬೇಳೆ, ಉಪ್ಪು
* ಎರಡು ಕೆಂಪು ಮೆಣಸಿನ ಕಾಯಿ
* ಕರಿಬೇವು, ಇಂಗು ಮತ್ತು ಎಣ್ಣೆ
* ಗರಂ ಮಸಾಲ ಸ್ವಲ್ಪ
ಮಾಡುವ ವಿಧಾನ: ಹಬ್ಬದ ಹಿಂದಿನ ದಿನ ಕಡಲೆಕಾಳನ್ನು ಒಂದು ರಾತ್ರಿ ನೆನೆಸಿಡಬೇಕು. ನಂತರ ಕಡಲೆಕಾಳನ್ನು ಚೆನ್ನಾಗಿ ಸೋಸಿ ಬೇಯಿಸಿ ಇಟ್ಟುಕೊಳ್ಳಬೇಕು. ನೀರನ್ನು ಬಸಿದ ನಂತರ ಸ್ವಲ್ಪ ಸಮಯ ಕಡಲೆಕಾಳನ್ನು ಹಾಗೆಯೇ ಆರಲು ಬಿಡಬೇಕು. ಈಗ ಬಾಣಲೆಯಲ್ಲಿ ಎಣ್ಣೆ ಹಾಕಿ, ಅದು ಕಾದ ನಂತರ ಸಾಸಿವೆ, ಉದ್ದಿನ ಬೇಳೆ, ಮತ್ತು ಕೆಂಪು ಮೆಣಸಿನ ಕಾಯಿಯನ್ನು ತುಂಡಾಗಿ ಕತ್ತರಿಸಿ ಹಾಕಬೇಕು.
ನಂತರ ಅದಕ್ಕೆ ಕರಿಬೇವು ಹಾಕಿ ಇಂಗು ಮತ್ತು ಸ್ವಲ್ಪ ಗರಂ ಮಸಾಲ ಬೆರೆಸಿ ಹುರಿದುಕೊಳ್ಳಬೇಕು. ಕೊನೆಗೆ ತೆಂಗಿನ ತುರಿ ಮತ್ತು ಸ್ವಲ್ಪ ಉಪ್ಪನ್ನು ಬೆರೆಸಿ ಒಲೆಯಿಂದ ಕೆಳಗೆ ಇಳಿಸಬೇಕು. ಈಗ ಈ ಮಿಶ್ರಣವನ್ನು ಚೆನ್ನಾಗಿ ಕದಡಿ ಅದಕ್ಕೆ ಬೇಯಿಸಿದ ಕಡಲೆಕಾಳನ್ನು ಬೆರೆಸಿಕೊಂಡು ಕಾಯಿ ತುರಿ ಚೆನ್ನಾಗಿ ಹರಡಿಕೊಳ್ಳುವವರೆಗೂ ಉಸುಳಿಯನ್ನು ಉರಿದು ಕೆಳಗಿಳಿಸಬೇಕು.
ಈಗ ಕಡಲೆಕಾಳು ಉಸುಳಿ ನೈವೇದ್ಯಕ್ಕೆ ತಯಾರಾಗಿದೆ. ( ಸೂಚನೆ: ಕಡಲೆಕಾಳು ಬೇಯಿಸುವಾಗಲೂ ಸ್ವಲ್ಪ ಉಪ್ಪು ಬೆರೆಸಿದ್ದರಿಂದ ಉಪ್ಪನ್ನು ಹಾಕುವಲ್ಲಿ ಜಾಗ್ರತೆಯಿಂದಿರಬೇಕು).



Click it and Unblock the Notifications