Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಗಣೇಶನಿಗೆ ಕಡಲೆ ಉಸುಳಿ ಹೀಗೆ ಮಾಡಿ ನೋಡಿ
ಗೌರಿ ಗಣೇಶ ಹಬ್ಬ ಬರಲು ಇನ್ನೇನು ಕೆಲವೇ ದಿನಗಳಿವೆ. (ಗೌರಿ-ಆ.31-2011, ಗಣೇಶ-ಸೆ. 1, 2011). ಹಬ್ಬಗಳೆಂದ ಮೇಲೆ ಮನೆಯಲ್ಲಿ ತಿಂಡಿ ಊಟದ್ದೇ ಕಾರುಬಾರು. ಖಾದ್ಯಗಳಲ್ಲಿ ಹೊಸತನವಿದ್ದರೇನೆ ಹಬ್ಬಕ್ಕೆ ಕಳೆ. ಗಣೇಶನಿಗೆ ಪ್ರಿಯವಾದ ಕಡಲೆಕಾಳಿನ ಉಸುಳಿ ಇಲ್ಲದಿದ್ದರೆ ಈ ಹಬ್ಬಕ್ಕೆ ಅರ್ಥವೇ ಇಲ್ಲ.
ಕಡಲೆಕಾಳು ಉಸುಳಿಯನ್ನು ಅತಿ ಸುಲಭವಾಗಿ ಮತ್ತು ವಿಶೇಷವಾಗಿ ತಯಾರಿಸಬಹುದಾದ ವಿಧಾನ ಇಲ್ಲಿದೆ. ಈ ಬಾರಿಯ ಗಣೇಶ ಹಬ್ಬಕ್ಕೆ ವಿಶೇಷ ಉಸುಳಿ ಮಾಡಿ ಗಣೇಶನಿಗೆ ನೈವೇದ್ಯಕ್ಕೆ ಇಡುವುದನ್ನು ಮರೆಯಬೇಡಿ.
ಬೇಕಾಗುವ ಪದಾರ್ಥಗಳು:
* 1 1/2 ಕಪ್ ಕಡಲೆಕಾಳು
* ಮೂರು ಚಮಚ ತುರಿದಿಟ್ಟುಕೊಂಡ ಕಾಯಿ
* ಸಾಸಿವೆ, ಉದ್ದಿನ ಬೇಳೆ, ಉಪ್ಪು
* ಎರಡು ಕೆಂಪು ಮೆಣಸಿನ ಕಾಯಿ
* ಕರಿಬೇವು, ಇಂಗು ಮತ್ತು ಎಣ್ಣೆ
* ಗರಂ ಮಸಾಲ ಸ್ವಲ್ಪ
ಮಾಡುವ ವಿಧಾನ: ಹಬ್ಬದ ಹಿಂದಿನ ದಿನ ಕಡಲೆಕಾಳನ್ನು ಒಂದು ರಾತ್ರಿ ನೆನೆಸಿಡಬೇಕು. ನಂತರ ಕಡಲೆಕಾಳನ್ನು ಚೆನ್ನಾಗಿ ಸೋಸಿ ಬೇಯಿಸಿ ಇಟ್ಟುಕೊಳ್ಳಬೇಕು. ನೀರನ್ನು ಬಸಿದ ನಂತರ ಸ್ವಲ್ಪ ಸಮಯ ಕಡಲೆಕಾಳನ್ನು ಹಾಗೆಯೇ ಆರಲು ಬಿಡಬೇಕು. ಈಗ ಬಾಣಲೆಯಲ್ಲಿ ಎಣ್ಣೆ ಹಾಕಿ, ಅದು ಕಾದ ನಂತರ ಸಾಸಿವೆ, ಉದ್ದಿನ ಬೇಳೆ, ಮತ್ತು ಕೆಂಪು ಮೆಣಸಿನ ಕಾಯಿಯನ್ನು ತುಂಡಾಗಿ ಕತ್ತರಿಸಿ ಹಾಕಬೇಕು.
ನಂತರ ಅದಕ್ಕೆ ಕರಿಬೇವು ಹಾಕಿ ಇಂಗು ಮತ್ತು ಸ್ವಲ್ಪ ಗರಂ ಮಸಾಲ ಬೆರೆಸಿ ಹುರಿದುಕೊಳ್ಳಬೇಕು. ಕೊನೆಗೆ ತೆಂಗಿನ ತುರಿ ಮತ್ತು ಸ್ವಲ್ಪ ಉಪ್ಪನ್ನು ಬೆರೆಸಿ ಒಲೆಯಿಂದ ಕೆಳಗೆ ಇಳಿಸಬೇಕು. ಈಗ ಈ ಮಿಶ್ರಣವನ್ನು ಚೆನ್ನಾಗಿ ಕದಡಿ ಅದಕ್ಕೆ ಬೇಯಿಸಿದ ಕಡಲೆಕಾಳನ್ನು ಬೆರೆಸಿಕೊಂಡು ಕಾಯಿ ತುರಿ ಚೆನ್ನಾಗಿ ಹರಡಿಕೊಳ್ಳುವವರೆಗೂ ಉಸುಳಿಯನ್ನು ಉರಿದು ಕೆಳಗಿಳಿಸಬೇಕು.
ಈಗ ಕಡಲೆಕಾಳು ಉಸುಳಿ ನೈವೇದ್ಯಕ್ಕೆ ತಯಾರಾಗಿದೆ. ( ಸೂಚನೆ: ಕಡಲೆಕಾಳು ಬೇಯಿಸುವಾಗಲೂ ಸ್ವಲ್ಪ ಉಪ್ಪು ಬೆರೆಸಿದ್ದರಿಂದ ಉಪ್ಪನ್ನು ಹಾಕುವಲ್ಲಿ ಜಾಗ್ರತೆಯಿಂದಿರಬೇಕು).



Click it and Unblock the Notifications