Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಪಾಕಶಾಲೆ:ಎಳೆ ಕ್ಯಾರಟ್ ರಸಾಯನ
ತರಕಾರಿ ಬೆಲೆ ಏನೋ ಗಗನಕ್ಕೇರಿದೆ ಆದರೆ ನಾಲಿಗೆ ಇದನ್ನೆಲ್ಲಾ ಕೇಳುವ ಸ್ಥಿತಿಯಲ್ಲಿಲ್ಲ ಎನ್ನುತ್ತಿದ್ದಾರೆ ಪಾಕ ಪ್ರವೀಣೆ ಬೆಂಗಳೂರಿನ ಶ್ರೀರಕ್ಷಾ! ಅಂದಹಾಗೆ ಈ ಕ್ಯಾರಟ್ ರಸಾಯನವನ್ನು ಅನ್ನಹುಳಿಯೊಂದಿಗೆ ವ್ಯಂಜನವಾಗಿ ಬಳಸಬಹುದು.
ಬೇಕಾಗುವ ಪದಾರ್ಥಗಳು
ಎಳೆ ಕ್ಯಾರೆಟ್: 2 ಕಪ್ಪು (ಚಕ್ರಾಕಾರದಲ್ಲಿ ಹೆಚ್ಚಿದ)
ಕೊತ್ತಂಬರಿ ಸೊಪ್ಪು: ½ ಹಿಡಿ
ನಿಂಬೆ ಹಣ್ಣಿನ ಹೋಳು: 2
ಮಸಾಲೆ ಪದಾರ್ಥಗಳು
ಸಾಸಿವೆ ಕಾಳು: ¼ ಟೀ ಚಮಚ
ಉದ್ದಿನ ಬೇಳೆ: ½ ಟೀ ಚಮಚ
ಹೆಚ್ಚಿಕೊಂಡ ಹಸಿ ಮೆಣಸಿನ ಕಾಯಿ: 1
ಈರುಳ್ಳಿ: 1 ಸಣ್ಣಗೆ ಹೆಚ್ಚಿಕೊಳ್ಳಬೇಕು
ಉಪ್ಪು: ರುಚಿಗೆ ತಕ್ಕಷ್ಟು
ಮಾಡುವ ವಿಧಾನ
1. ವೃತ್ತಾಕಾರದಲ್ಲಿ ಹೆಚ್ಚಿಕೊಂಡ ಎಳೆ ಕ್ಯಾರಟ್ ನ್ನು ಒಂದು ಪಕ್ಕಕ್ಕಿಟ್ಟುಕೊಳ್ಳಿ
2. ಬಾಣಲೆಯಲ್ಲಿ 1 ಟೀ ಚಮಚ ಎಣ್ಣೆ ,1 ಟೀ ಚಮಚ ಸಾಸಿವೆ, ½ ಟೀ ಚಮಚ ಉದ್ದಿನ ಬೇಳೆ ಹಾಗೂ ಹೆಚ್ಚಿಕೊಂಡ 1 ಹಸಿ ಮೆಣಸಿನಕಾಯಿ ಹಾಕಿ ಬಿಸಿ ಮಾಡಿ.
3. ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿಯನ್ನು ಹಾಕಿ ಬೇಯಿಸಿ ಸ್ವಲ್ಪ ಸಮಯ ಬಿಟ್ಟು ವೃತ್ತಾಕಾರದಲ್ಲಿ ಹೆಚ್ಚಿಕೊಂಡ ಕ್ಯಾರೆಟನ್ನು ಹಾಕಿ ಚೆನ್ನಾಗಿ ಬೇಯಿಸಿ.
4. ರುಚಿಗೆ ತಕ್ಕಷ್ಟು ಉಪ್ಪು, ಹೆಚ್ಚಿಕೊಂಡ ಕೊತ್ತಂಬರಿ ಸೊಪ್ಪು ಹಾಗೂ ನಿಂಬೆ ಹಣ್ಣಿನ ರಸ ಹಿಂಡಿ ಬಡಿಸಿ.



Click it and Unblock the Notifications