Latest Updates
-
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ! -
ಕರಾವಳಿ ರೆಡ್ ಅಲರ್ಟ್: ಮನೆಯಲ್ಲೇ ಸುರಕ್ಷಿತವಾಗಿ ಫಿಟ್ ಆಗಿರಲು ಈ 12 ನಿಮಿಷಗಳ ವರ್ಕೌಟ್ ಟ್ರೈ ಮಾಡಿ! -
ಪುಣೆಯಲ್ಲಿ ಮಳೆ ರಜೆ: ವರ್ಕ್ ಫ್ರಮ್ ಹೋಮ್ ಜೊತೆಗೆ ಮಕ್ಕಳನ್ನು ನಿಭಾಯಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್ -
ಮುಂಬೈ ರೆಡ್ ಅಲರ್ಟ್: ಮಳೆಯಿಂದ ನಿಮ್ಮ ಬಾಡಿಗೆ ಮನೆ ಮತ್ತು ವಸ್ತುಗಳನ್ನು ರಕ್ಷಿಸಿಕೊಳ್ಳುವುದು ಹೇಗೆ? -
ಮುಂಬೈ ರೆಡ್ ಅಲರ್ಟ್: ಮಳೆಗಾಲದ ಕಾಯಿಲೆಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ!
ನವರಾತ್ರಿಗೆ ನವಧಾನ್ಯದ ಉಸುಳಿ ನೈವೇದ್ಯಕ್ಕಿರಲಿ

ನವಧಾನ್ಯ ಉಸುಳಿಗೆ ಬೇಕಾಗುವ ಪದಾರ್ಥಗಳು:
* ಹುರುಳಿ ಕಾಳು, ಅಲಸಂದೆ ಕಾಳು, ಹೆಸರು ಕಾಳು, ಕಿಡ್ನಿ ಬೀನ್, ತರಣಿ ಕಾಳು, ಒಣಗಿದ ಬಟಾಣಿ ಕಾಳು, ಸೋಯಾ, ಕಡಲೆ ಕಾಳು, ಕಾಬುಲ್ ಕಡಲೆ ಕಾಳು ತಲಾ 1 1/4 ಕಪ್.
* 2 ಚಮಚ ಹುರಿದು ಪುಡಿ ಮಾಡಿದ ಎಳ್ಳು
* 1 ಚಮಚ ಸಾಸಿವೆ
* 3-4 ಕತ್ತರಿಸಿದ ಹಸಿ ಮೆಣಸಿನ ಕಾಯಿ
* ತೆಂಗಿನ ತುರಿ
* ಕರಿಬೇವು, ಕೊತ್ತಂಬರಿ
* 2 ಚಮಚ ನಿಂಬೆ ರಸ
* ಎಣ್ಣೆ, ಉಪ್ಪು
ನವಧಾನ್ಯ ಉಸುಳಿ ಮಾಡುವ ವಿಧಾನ: ಮೇಲೆ ತಿಳಿಸಿದ ಎಲ್ಲ ಧಾನ್ಯಗಳನ್ನು ನೀರಿನಲ್ಲಿ ನೆನೆಸಿ ನಂತರ ಸ್ವಲ್ಪ ಉಪ್ಪು ಬೆರೆಸಿ ಕುಕ್ಕರ್ ನಲ್ಲಿ ಬೇಯಿಸಬೇಕು. ನಂತರ ಅದನ್ನು ಕೆಳಗಿಳಿಸಿ ನೀರನ್ನು ಬಸಿದುಕೊಳ್ಳಬೇಕು.
ಪಾತ್ರೆಯೊಂದಕ್ಕೆ ಎಣ್ಣೆ ಹಾಕಿ ಕಾಯಿಸಿಕೊಂಡು ಅದಕ್ಕೆ ಸಾಸಿವೆ, ಕರಿಬೇವು, ಹಸಿರು ಮೆಣಸಿನ ಕಾಯಿ ಮತ್ತು ಎಳ್ಳಿನ ಪುಡಿಯನ್ನು ಹಾಕಿ ಹುರಿದುಕೊಳ್ಳಬೇಕು. ಬಸಿದ ಕಾಳುಗಳನ್ನು ಪಾತ್ರೆಗೆ ಹಾಕಿ ಚೆನ್ನಾಗಿ ಹುರಿಯಬೇಕು. ಅವಶ್ಯಕವೆನಿಸಿದರೆ ಮಾತ್ರ ಸ್ವಲ್ಪ ಉಪ್ಪನ್ನು ಹಾಕಿಕೊಳ್ಳಬೇಕು.
ಈಗ ಒಲೆಯಿಂದ ಪಾತ್ರೆಯನ್ನು ಕೆಳಗಿಳಿಸಿ ಅದಕ್ಕೆ ತೆಂಗಿನ ತುರಿ ಮತ್ತು ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿ ಹಾಕಿಕೊಳ್ಳಬೇಕು. ಕೊನೆಯಲ್ಲಿ ಇದರ ಮೇಲೆ ನಿಂಬೆರಸ ಹಾಕಿ ಚೆನ್ನಾಗಿ ತಿರುಗಿಸಬೇಕು. ಈಗ ನವಧಾನ್ಯದ ಉಸುಳಿ ತಯಾರಾಗಿದೆ.



Click it and Unblock the Notifications