Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ನವರಾತ್ರಿಗೆ ನವಧಾನ್ಯದ ಉಸುಳಿ ನೈವೇದ್ಯಕ್ಕಿರಲಿ

ನವಧಾನ್ಯ ಉಸುಳಿಗೆ ಬೇಕಾಗುವ ಪದಾರ್ಥಗಳು:
* ಹುರುಳಿ ಕಾಳು, ಅಲಸಂದೆ ಕಾಳು, ಹೆಸರು ಕಾಳು, ಕಿಡ್ನಿ ಬೀನ್, ತರಣಿ ಕಾಳು, ಒಣಗಿದ ಬಟಾಣಿ ಕಾಳು, ಸೋಯಾ, ಕಡಲೆ ಕಾಳು, ಕಾಬುಲ್ ಕಡಲೆ ಕಾಳು ತಲಾ 1 1/4 ಕಪ್.
* 2 ಚಮಚ ಹುರಿದು ಪುಡಿ ಮಾಡಿದ ಎಳ್ಳು
* 1 ಚಮಚ ಸಾಸಿವೆ
* 3-4 ಕತ್ತರಿಸಿದ ಹಸಿ ಮೆಣಸಿನ ಕಾಯಿ
* ತೆಂಗಿನ ತುರಿ
* ಕರಿಬೇವು, ಕೊತ್ತಂಬರಿ
* 2 ಚಮಚ ನಿಂಬೆ ರಸ
* ಎಣ್ಣೆ, ಉಪ್ಪು
ನವಧಾನ್ಯ ಉಸುಳಿ ಮಾಡುವ ವಿಧಾನ: ಮೇಲೆ ತಿಳಿಸಿದ ಎಲ್ಲ ಧಾನ್ಯಗಳನ್ನು ನೀರಿನಲ್ಲಿ ನೆನೆಸಿ ನಂತರ ಸ್ವಲ್ಪ ಉಪ್ಪು ಬೆರೆಸಿ ಕುಕ್ಕರ್ ನಲ್ಲಿ ಬೇಯಿಸಬೇಕು. ನಂತರ ಅದನ್ನು ಕೆಳಗಿಳಿಸಿ ನೀರನ್ನು ಬಸಿದುಕೊಳ್ಳಬೇಕು.
ಪಾತ್ರೆಯೊಂದಕ್ಕೆ ಎಣ್ಣೆ ಹಾಕಿ ಕಾಯಿಸಿಕೊಂಡು ಅದಕ್ಕೆ ಸಾಸಿವೆ, ಕರಿಬೇವು, ಹಸಿರು ಮೆಣಸಿನ ಕಾಯಿ ಮತ್ತು ಎಳ್ಳಿನ ಪುಡಿಯನ್ನು ಹಾಕಿ ಹುರಿದುಕೊಳ್ಳಬೇಕು. ಬಸಿದ ಕಾಳುಗಳನ್ನು ಪಾತ್ರೆಗೆ ಹಾಕಿ ಚೆನ್ನಾಗಿ ಹುರಿಯಬೇಕು. ಅವಶ್ಯಕವೆನಿಸಿದರೆ ಮಾತ್ರ ಸ್ವಲ್ಪ ಉಪ್ಪನ್ನು ಹಾಕಿಕೊಳ್ಳಬೇಕು.
ಈಗ ಒಲೆಯಿಂದ ಪಾತ್ರೆಯನ್ನು ಕೆಳಗಿಳಿಸಿ ಅದಕ್ಕೆ ತೆಂಗಿನ ತುರಿ ಮತ್ತು ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿ ಹಾಕಿಕೊಳ್ಳಬೇಕು. ಕೊನೆಯಲ್ಲಿ ಇದರ ಮೇಲೆ ನಿಂಬೆರಸ ಹಾಕಿ ಚೆನ್ನಾಗಿ ತಿರುಗಿಸಬೇಕು. ಈಗ ನವಧಾನ್ಯದ ಉಸುಳಿ ತಯಾರಾಗಿದೆ.



Click it and Unblock the Notifications