Latest Updates
-
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ನವರಾತ್ರಿಗೆ ನವಧಾನ್ಯದ ಉಸುಳಿ ನೈವೇದ್ಯಕ್ಕಿರಲಿ

ನವಧಾನ್ಯ ಉಸುಳಿಗೆ ಬೇಕಾಗುವ ಪದಾರ್ಥಗಳು:
* ಹುರುಳಿ ಕಾಳು, ಅಲಸಂದೆ ಕಾಳು, ಹೆಸರು ಕಾಳು, ಕಿಡ್ನಿ ಬೀನ್, ತರಣಿ ಕಾಳು, ಒಣಗಿದ ಬಟಾಣಿ ಕಾಳು, ಸೋಯಾ, ಕಡಲೆ ಕಾಳು, ಕಾಬುಲ್ ಕಡಲೆ ಕಾಳು ತಲಾ 1 1/4 ಕಪ್.
* 2 ಚಮಚ ಹುರಿದು ಪುಡಿ ಮಾಡಿದ ಎಳ್ಳು
* 1 ಚಮಚ ಸಾಸಿವೆ
* 3-4 ಕತ್ತರಿಸಿದ ಹಸಿ ಮೆಣಸಿನ ಕಾಯಿ
* ತೆಂಗಿನ ತುರಿ
* ಕರಿಬೇವು, ಕೊತ್ತಂಬರಿ
* 2 ಚಮಚ ನಿಂಬೆ ರಸ
* ಎಣ್ಣೆ, ಉಪ್ಪು
ನವಧಾನ್ಯ ಉಸುಳಿ ಮಾಡುವ ವಿಧಾನ: ಮೇಲೆ ತಿಳಿಸಿದ ಎಲ್ಲ ಧಾನ್ಯಗಳನ್ನು ನೀರಿನಲ್ಲಿ ನೆನೆಸಿ ನಂತರ ಸ್ವಲ್ಪ ಉಪ್ಪು ಬೆರೆಸಿ ಕುಕ್ಕರ್ ನಲ್ಲಿ ಬೇಯಿಸಬೇಕು. ನಂತರ ಅದನ್ನು ಕೆಳಗಿಳಿಸಿ ನೀರನ್ನು ಬಸಿದುಕೊಳ್ಳಬೇಕು.
ಪಾತ್ರೆಯೊಂದಕ್ಕೆ ಎಣ್ಣೆ ಹಾಕಿ ಕಾಯಿಸಿಕೊಂಡು ಅದಕ್ಕೆ ಸಾಸಿವೆ, ಕರಿಬೇವು, ಹಸಿರು ಮೆಣಸಿನ ಕಾಯಿ ಮತ್ತು ಎಳ್ಳಿನ ಪುಡಿಯನ್ನು ಹಾಕಿ ಹುರಿದುಕೊಳ್ಳಬೇಕು. ಬಸಿದ ಕಾಳುಗಳನ್ನು ಪಾತ್ರೆಗೆ ಹಾಕಿ ಚೆನ್ನಾಗಿ ಹುರಿಯಬೇಕು. ಅವಶ್ಯಕವೆನಿಸಿದರೆ ಮಾತ್ರ ಸ್ವಲ್ಪ ಉಪ್ಪನ್ನು ಹಾಕಿಕೊಳ್ಳಬೇಕು.
ಈಗ ಒಲೆಯಿಂದ ಪಾತ್ರೆಯನ್ನು ಕೆಳಗಿಳಿಸಿ ಅದಕ್ಕೆ ತೆಂಗಿನ ತುರಿ ಮತ್ತು ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿ ಹಾಕಿಕೊಳ್ಳಬೇಕು. ಕೊನೆಯಲ್ಲಿ ಇದರ ಮೇಲೆ ನಿಂಬೆರಸ ಹಾಕಿ ಚೆನ್ನಾಗಿ ತಿರುಗಿಸಬೇಕು. ಈಗ ನವಧಾನ್ಯದ ಉಸುಳಿ ತಯಾರಾಗಿದೆ.



Click it and Unblock the Notifications