Latest Updates
-
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ!
ನವರಾತ್ರಿಗೆ ನವಧಾನ್ಯದ ಉಸುಳಿ ನೈವೇದ್ಯಕ್ಕಿರಲಿ

ನವಧಾನ್ಯ ಉಸುಳಿಗೆ ಬೇಕಾಗುವ ಪದಾರ್ಥಗಳು:
* ಹುರುಳಿ ಕಾಳು, ಅಲಸಂದೆ ಕಾಳು, ಹೆಸರು ಕಾಳು, ಕಿಡ್ನಿ ಬೀನ್, ತರಣಿ ಕಾಳು, ಒಣಗಿದ ಬಟಾಣಿ ಕಾಳು, ಸೋಯಾ, ಕಡಲೆ ಕಾಳು, ಕಾಬುಲ್ ಕಡಲೆ ಕಾಳು ತಲಾ 1 1/4 ಕಪ್.
* 2 ಚಮಚ ಹುರಿದು ಪುಡಿ ಮಾಡಿದ ಎಳ್ಳು
* 1 ಚಮಚ ಸಾಸಿವೆ
* 3-4 ಕತ್ತರಿಸಿದ ಹಸಿ ಮೆಣಸಿನ ಕಾಯಿ
* ತೆಂಗಿನ ತುರಿ
* ಕರಿಬೇವು, ಕೊತ್ತಂಬರಿ
* 2 ಚಮಚ ನಿಂಬೆ ರಸ
* ಎಣ್ಣೆ, ಉಪ್ಪು
ನವಧಾನ್ಯ ಉಸುಳಿ ಮಾಡುವ ವಿಧಾನ: ಮೇಲೆ ತಿಳಿಸಿದ ಎಲ್ಲ ಧಾನ್ಯಗಳನ್ನು ನೀರಿನಲ್ಲಿ ನೆನೆಸಿ ನಂತರ ಸ್ವಲ್ಪ ಉಪ್ಪು ಬೆರೆಸಿ ಕುಕ್ಕರ್ ನಲ್ಲಿ ಬೇಯಿಸಬೇಕು. ನಂತರ ಅದನ್ನು ಕೆಳಗಿಳಿಸಿ ನೀರನ್ನು ಬಸಿದುಕೊಳ್ಳಬೇಕು.
ಪಾತ್ರೆಯೊಂದಕ್ಕೆ ಎಣ್ಣೆ ಹಾಕಿ ಕಾಯಿಸಿಕೊಂಡು ಅದಕ್ಕೆ ಸಾಸಿವೆ, ಕರಿಬೇವು, ಹಸಿರು ಮೆಣಸಿನ ಕಾಯಿ ಮತ್ತು ಎಳ್ಳಿನ ಪುಡಿಯನ್ನು ಹಾಕಿ ಹುರಿದುಕೊಳ್ಳಬೇಕು. ಬಸಿದ ಕಾಳುಗಳನ್ನು ಪಾತ್ರೆಗೆ ಹಾಕಿ ಚೆನ್ನಾಗಿ ಹುರಿಯಬೇಕು. ಅವಶ್ಯಕವೆನಿಸಿದರೆ ಮಾತ್ರ ಸ್ವಲ್ಪ ಉಪ್ಪನ್ನು ಹಾಕಿಕೊಳ್ಳಬೇಕು.
ಈಗ ಒಲೆಯಿಂದ ಪಾತ್ರೆಯನ್ನು ಕೆಳಗಿಳಿಸಿ ಅದಕ್ಕೆ ತೆಂಗಿನ ತುರಿ ಮತ್ತು ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿ ಹಾಕಿಕೊಳ್ಳಬೇಕು. ಕೊನೆಯಲ್ಲಿ ಇದರ ಮೇಲೆ ನಿಂಬೆರಸ ಹಾಕಿ ಚೆನ್ನಾಗಿ ತಿರುಗಿಸಬೇಕು. ಈಗ ನವಧಾನ್ಯದ ಉಸುಳಿ ತಯಾರಾಗಿದೆ.



Click it and Unblock the Notifications