Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ನವರಾತ್ರಿಗೆ ನವಧಾನ್ಯದ ಉಸುಳಿ ನೈವೇದ್ಯಕ್ಕಿರಲಿ

ನವಧಾನ್ಯ ಉಸುಳಿಗೆ ಬೇಕಾಗುವ ಪದಾರ್ಥಗಳು:
* ಹುರುಳಿ ಕಾಳು, ಅಲಸಂದೆ ಕಾಳು, ಹೆಸರು ಕಾಳು, ಕಿಡ್ನಿ ಬೀನ್, ತರಣಿ ಕಾಳು, ಒಣಗಿದ ಬಟಾಣಿ ಕಾಳು, ಸೋಯಾ, ಕಡಲೆ ಕಾಳು, ಕಾಬುಲ್ ಕಡಲೆ ಕಾಳು ತಲಾ 1 1/4 ಕಪ್.
* 2 ಚಮಚ ಹುರಿದು ಪುಡಿ ಮಾಡಿದ ಎಳ್ಳು
* 1 ಚಮಚ ಸಾಸಿವೆ
* 3-4 ಕತ್ತರಿಸಿದ ಹಸಿ ಮೆಣಸಿನ ಕಾಯಿ
* ತೆಂಗಿನ ತುರಿ
* ಕರಿಬೇವು, ಕೊತ್ತಂಬರಿ
* 2 ಚಮಚ ನಿಂಬೆ ರಸ
* ಎಣ್ಣೆ, ಉಪ್ಪು
ನವಧಾನ್ಯ ಉಸುಳಿ ಮಾಡುವ ವಿಧಾನ: ಮೇಲೆ ತಿಳಿಸಿದ ಎಲ್ಲ ಧಾನ್ಯಗಳನ್ನು ನೀರಿನಲ್ಲಿ ನೆನೆಸಿ ನಂತರ ಸ್ವಲ್ಪ ಉಪ್ಪು ಬೆರೆಸಿ ಕುಕ್ಕರ್ ನಲ್ಲಿ ಬೇಯಿಸಬೇಕು. ನಂತರ ಅದನ್ನು ಕೆಳಗಿಳಿಸಿ ನೀರನ್ನು ಬಸಿದುಕೊಳ್ಳಬೇಕು.
ಪಾತ್ರೆಯೊಂದಕ್ಕೆ ಎಣ್ಣೆ ಹಾಕಿ ಕಾಯಿಸಿಕೊಂಡು ಅದಕ್ಕೆ ಸಾಸಿವೆ, ಕರಿಬೇವು, ಹಸಿರು ಮೆಣಸಿನ ಕಾಯಿ ಮತ್ತು ಎಳ್ಳಿನ ಪುಡಿಯನ್ನು ಹಾಕಿ ಹುರಿದುಕೊಳ್ಳಬೇಕು. ಬಸಿದ ಕಾಳುಗಳನ್ನು ಪಾತ್ರೆಗೆ ಹಾಕಿ ಚೆನ್ನಾಗಿ ಹುರಿಯಬೇಕು. ಅವಶ್ಯಕವೆನಿಸಿದರೆ ಮಾತ್ರ ಸ್ವಲ್ಪ ಉಪ್ಪನ್ನು ಹಾಕಿಕೊಳ್ಳಬೇಕು.
ಈಗ ಒಲೆಯಿಂದ ಪಾತ್ರೆಯನ್ನು ಕೆಳಗಿಳಿಸಿ ಅದಕ್ಕೆ ತೆಂಗಿನ ತುರಿ ಮತ್ತು ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿ ಹಾಕಿಕೊಳ್ಳಬೇಕು. ಕೊನೆಯಲ್ಲಿ ಇದರ ಮೇಲೆ ನಿಂಬೆರಸ ಹಾಕಿ ಚೆನ್ನಾಗಿ ತಿರುಗಿಸಬೇಕು. ಈಗ ನವಧಾನ್ಯದ ಉಸುಳಿ ತಯಾರಾಗಿದೆ.



Click it and Unblock the Notifications
