Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಕಡಲೆಬೇಳೆ ಹಾಗು ಹೂಕೋಸು ಪಲ್ಯ

ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳಲು ತರಕಾರಿಗಳು ಬಹು ಅವಶ್ಯಕ. ಅದರಲ್ಲೂ, ಹೂಕೋಸು ತಿನ್ನುವುದರಿಂದ ಹೃದಯ ಸುಸ್ಥಿತಿಯಲ್ಲಿರುತ್ತದೆ ಮತ್ತು ಪಾರ್ಶ್ವವಾಯುವಿನಿಂದ ದೂರವಿಡುತ್ತದೆ. ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಗೆ ಹೂಕೋಸು ಇಂಬು ನೀಡುತ್ತದೆ. ಮಗುವಿನ ನಿರೀಕ್ಷೆಯಲ್ಲಿರುವವರು ಇದನ್ನು ಖಂಡಿತವಾಗಿ ತಿನ್ನಬೇಕು. ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ಬರದಂತೆ ತಡೆಯಲು ಹೂಕೋಸು ಸಹಕಾರಿ.
* ಸುನಂದ ಅರುಣಕುಮಾರ್ ಗೋಸಿ, ಬೆಂಗಳೂರು
ಬೇಕಾಗುವ ಸಾಮಗ್ರಿಗಳು :
* ಕಡಲೆಬೇಳೆ - 1/2 ಕಪ್
* ಹೂಕೋಸು - 8 ಹೂ (ಬಿಡಿಸಿದ್ದು)
* ಈರುಳ್ಳಿ - 1 (ನಿಮ್ಮಿಷ್ಟ)
* ಗರಂ ಮಸಾಲ - 1/4 ಚಮಚ
* ಅಚ್ಚ ಕಾರದಪುಡಿ - 1/2 ಚಮಚ
* ಹುಚ್ಚೆಳ್ಳು ಪುಡಿ - 1/2 ಚಮಚ
* ಅರಿಶಿಣ ಪುಡಿ
* ರುಚಿಗೆ ತಕ್ಕ ಉಪ್ಪು
* ಒಗ್ಗರೆಣೆಗೆ ಸಾಸಿವೆ, ಜೀರಿಗೆ, ಕರಿಬೇವು
* ಕೊತ್ತಂಬರಿ ಸೊಪ್ಪು ಸ್ವಲ್ಪ
ಮಾಡುವ ವಿಧಾನ :
ಮೊದಲಿಗೆ ಹುಕೋಸನ್ನು ಬಿಡಿಸಿ ಬಿಸಿನೀರಿನಲ್ಲಿ ಚೆನ್ನಾಗಿ ತೊಳೆದಿಟ್ಟುಕೊಳ್ಳಿ. ಕುದಿಯುವ ನೀರಿಗೆ ಸ್ವಲ್ಪ ಅರಿಷಿಣಪುಡಿ ಅಥವಾ ಸ್ವಲ್ಪ ಉಪ್ಪು ಸೇರಿಸಿದರೂ ಆಯಿತು. ಹೂಕೋಸಲ್ಲಿ ಸೇರಿದ್ದು ಹುಳಗಳು ಹೊರಬೀಳುತ್ತವೆ. ನಂತರ ಕಡಲೆಬೇಳೆಯನ್ನು ಕುಕ್ಕರಿನಲ್ಲಿ ಬೇಯಿಸಿರಿ. ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಳ್ಳಿ. ಈರುಳ್ಳಿ ಬಳಸುವುದು ಬಿಡುವುದು ನಿಮಗೆ ಬಿಟ್ಟಿದ್ದು. ಬಳಸದಿದ್ದರೆ ರುಚಿಯೇನೂ ಕೆಟ್ಟುಹೋಗುವುದಿಲ್ಲ.
ನಂತರ ಬಾಣಲೆಗೆ 2 ಚಮಚ ಎಣ್ಣೆ ಹಾಕಿ. ಸಾಸಿವೆ, ಜೀರಿಗೆ, ಅರಿಷಿಣ, ಕರಿಬೇವು ಹಾಗು ಸಣ್ಣಗೆ ಹೆಚ್ಚಿದ ಈರುಳ್ಳಿ ಹಾಕಿ ಚೆನ್ನಾಗಿ ತಾಳಿಸಿಟ್ಟುಕೊಳ್ಳಿ. ಅದಕ್ಕೆ ಬೇಯಿಸಿದ ಕಡಲೆಬೇಳೆ ಹಾಗು ಹೂಕೋಸನ್ನು ಸುರುವಿ ಗರಂ ಮಸಾಲ, ಹುಚ್ಚೆಳ್ಳು ಪುಡಿ, ಕಾರದಪುಡಿ, ರುಚಿಗೆ ತಕ್ಕಷ್ಟು ಉಪ್ಪು, ಸ್ವಲ್ಪ ನೀರು ಹಾಕಿ ಮಿಕ್ಸ್ ಮಾಡಿ ಚೆನ್ನಾಗಿ ಕುದಿಸಿದ ನಂತರ ಕೊತ್ತಂಬರಿ ಸೊಪ್ಪು ಹಾಕಿ ಕೆಳಗಿಳಿಸಿ.
ಇದು ಚಪಾತಿ, ಜೋಳದ ರೊಟ್ಟಿಗೆ ಚೆನ್ನಾಗಿರುತ್ತದೆ.



Click it and Unblock the Notifications
