Just In
- 2 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 3 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 4 hrs ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 5 hrs ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಡಲೆಬೇಳೆ ಹಾಗು ಹೂಕೋಸು ಪಲ್ಯ
ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳಲು ತರಕಾರಿಗಳು ಬಹು ಅವಶ್ಯಕ. ಅದರಲ್ಲೂ, ಹೂಕೋಸು ತಿನ್ನುವುದರಿಂದ ಹೃದಯ ಸುಸ್ಥಿತಿಯಲ್ಲಿರುತ್ತದೆ ಮತ್ತು ಪಾರ್ಶ್ವವಾಯುವಿನಿಂದ ದೂರವಿಡುತ್ತದೆ. ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಗೆ ಹೂಕೋಸು ಇಂಬು ನೀಡುತ್ತದೆ. ಮಗುವಿನ ನಿರೀಕ್ಷೆಯಲ್ಲಿರುವವರು ಇದನ್ನು ಖಂಡಿತವಾಗಿ ತಿನ್ನಬೇಕು. ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ಬರದಂತೆ ತಡೆಯಲು ಹೂಕೋಸು ಸಹಕಾರಿ.
* ಸುನಂದ ಅರುಣಕುಮಾರ್ ಗೋಸಿ, ಬೆಂಗಳೂರು
ಬೇಕಾಗುವ ಸಾಮಗ್ರಿಗಳು :
*
ಕಡಲೆಬೇಳೆ
-
1/2
ಕಪ್
*
ಹೂಕೋಸು
-
8
ಹೂ
(ಬಿಡಿಸಿದ್ದು)
*
ಈರುಳ್ಳಿ
-
1
(ನಿಮ್ಮಿಷ್ಟ)
*
ಗರಂ
ಮಸಾಲ
-
1/4
ಚಮಚ
*
ಅಚ್ಚ
ಕಾರದಪುಡಿ
-
1/2
ಚಮಚ
*
ಹುಚ್ಚೆಳ್ಳು
ಪುಡಿ
-
1/2
ಚಮಚ
*
ಅರಿಶಿಣ
ಪುಡಿ
*
ರುಚಿಗೆ
ತಕ್ಕ
ಉಪ್ಪು
*
ಒಗ್ಗರೆಣೆಗೆ
ಸಾಸಿವೆ,
ಜೀರಿಗೆ,
ಕರಿಬೇವು
*
ಕೊತ್ತಂಬರಿ
ಸೊಪ್ಪು
ಸ್ವಲ್ಪ
ಮಾಡುವ ವಿಧಾನ :
ಮೊದಲಿಗೆ ಹುಕೋಸನ್ನು ಬಿಡಿಸಿ ಬಿಸಿನೀರಿನಲ್ಲಿ ಚೆನ್ನಾಗಿ ತೊಳೆದಿಟ್ಟುಕೊಳ್ಳಿ. ಕುದಿಯುವ ನೀರಿಗೆ ಸ್ವಲ್ಪ ಅರಿಷಿಣಪುಡಿ ಅಥವಾ ಸ್ವಲ್ಪ ಉಪ್ಪು ಸೇರಿಸಿದರೂ ಆಯಿತು. ಹೂಕೋಸಲ್ಲಿ ಸೇರಿದ್ದು ಹುಳಗಳು ಹೊರಬೀಳುತ್ತವೆ. ನಂತರ ಕಡಲೆಬೇಳೆಯನ್ನು ಕುಕ್ಕರಿನಲ್ಲಿ ಬೇಯಿಸಿರಿ. ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಳ್ಳಿ. ಈರುಳ್ಳಿ ಬಳಸುವುದು ಬಿಡುವುದು ನಿಮಗೆ ಬಿಟ್ಟಿದ್ದು. ಬಳಸದಿದ್ದರೆ ರುಚಿಯೇನೂ ಕೆಟ್ಟುಹೋಗುವುದಿಲ್ಲ.
ನಂತರ ಬಾಣಲೆಗೆ 2 ಚಮಚ ಎಣ್ಣೆ ಹಾಕಿ. ಸಾಸಿವೆ, ಜೀರಿಗೆ, ಅರಿಷಿಣ, ಕರಿಬೇವು ಹಾಗು ಸಣ್ಣಗೆ ಹೆಚ್ಚಿದ ಈರುಳ್ಳಿ ಹಾಕಿ ಚೆನ್ನಾಗಿ ತಾಳಿಸಿಟ್ಟುಕೊಳ್ಳಿ. ಅದಕ್ಕೆ ಬೇಯಿಸಿದ ಕಡಲೆಬೇಳೆ ಹಾಗು ಹೂಕೋಸನ್ನು ಸುರುವಿ ಗರಂ ಮಸಾಲ, ಹುಚ್ಚೆಳ್ಳು ಪುಡಿ, ಕಾರದಪುಡಿ, ರುಚಿಗೆ ತಕ್ಕಷ್ಟು ಉಪ್ಪು, ಸ್ವಲ್ಪ ನೀರು ಹಾಕಿ ಮಿಕ್ಸ್ ಮಾಡಿ ಚೆನ್ನಾಗಿ ಕುದಿಸಿದ ನಂತರ ಕೊತ್ತಂಬರಿ ಸೊಪ್ಪು ಹಾಕಿ ಕೆಳಗಿಳಿಸಿ.
ಇದು ಚಪಾತಿ, ಜೋಳದ ರೊಟ್ಟಿಗೆ ಚೆನ್ನಾಗಿರುತ್ತದೆ.