Latest Updates
-
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ! -
ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ತೋರಿಸುವ ಹೊಸ ಟ್ರೆಂಡ್: 'ಸಾಫ್ಟ್ ಲಾಂಚ್' ಮೂಲಕ ನಿಮ್ಮ ಸಂಬಂಧವನ್ನು ಭದ್ರಪಡಿಸಿಕೊಳ್ಳಿ! -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಲ್ಲೂ ನಿಮ್ಮ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಟಿಪ್ಸ್ ಸಾಕು! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮಗಳನ್ನು ಮರೆಯದೆ ಪಾಲಿಸಿ! -
ಮುಟ್ಟಿನ ನೈರ್ಮಲ್ಯ ದಿನ: ಕೇವಲ 200 ರೂಪಾಯಿಗೂ ಕಡಿಮೆ ಬೆಲೆಯಲ್ಲಿ ಸಿಗುತ್ತಿವೆ ಈ ಅಗತ್ಯ ಉತ್ಪನ್ನಗಳು, ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ!
ಕಡಲೆಬೇಳೆ ಹಾಗು ಹೂಕೋಸು ಪಲ್ಯ

ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳಲು ತರಕಾರಿಗಳು ಬಹು ಅವಶ್ಯಕ. ಅದರಲ್ಲೂ, ಹೂಕೋಸು ತಿನ್ನುವುದರಿಂದ ಹೃದಯ ಸುಸ್ಥಿತಿಯಲ್ಲಿರುತ್ತದೆ ಮತ್ತು ಪಾರ್ಶ್ವವಾಯುವಿನಿಂದ ದೂರವಿಡುತ್ತದೆ. ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಗೆ ಹೂಕೋಸು ಇಂಬು ನೀಡುತ್ತದೆ. ಮಗುವಿನ ನಿರೀಕ್ಷೆಯಲ್ಲಿರುವವರು ಇದನ್ನು ಖಂಡಿತವಾಗಿ ತಿನ್ನಬೇಕು. ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ಬರದಂತೆ ತಡೆಯಲು ಹೂಕೋಸು ಸಹಕಾರಿ.
* ಸುನಂದ ಅರುಣಕುಮಾರ್ ಗೋಸಿ, ಬೆಂಗಳೂರು
ಬೇಕಾಗುವ ಸಾಮಗ್ರಿಗಳು :
* ಕಡಲೆಬೇಳೆ - 1/2 ಕಪ್
* ಹೂಕೋಸು - 8 ಹೂ (ಬಿಡಿಸಿದ್ದು)
* ಈರುಳ್ಳಿ - 1 (ನಿಮ್ಮಿಷ್ಟ)
* ಗರಂ ಮಸಾಲ - 1/4 ಚಮಚ
* ಅಚ್ಚ ಕಾರದಪುಡಿ - 1/2 ಚಮಚ
* ಹುಚ್ಚೆಳ್ಳು ಪುಡಿ - 1/2 ಚಮಚ
* ಅರಿಶಿಣ ಪುಡಿ
* ರುಚಿಗೆ ತಕ್ಕ ಉಪ್ಪು
* ಒಗ್ಗರೆಣೆಗೆ ಸಾಸಿವೆ, ಜೀರಿಗೆ, ಕರಿಬೇವು
* ಕೊತ್ತಂಬರಿ ಸೊಪ್ಪು ಸ್ವಲ್ಪ
ಮಾಡುವ ವಿಧಾನ :
ಮೊದಲಿಗೆ ಹುಕೋಸನ್ನು ಬಿಡಿಸಿ ಬಿಸಿನೀರಿನಲ್ಲಿ ಚೆನ್ನಾಗಿ ತೊಳೆದಿಟ್ಟುಕೊಳ್ಳಿ. ಕುದಿಯುವ ನೀರಿಗೆ ಸ್ವಲ್ಪ ಅರಿಷಿಣಪುಡಿ ಅಥವಾ ಸ್ವಲ್ಪ ಉಪ್ಪು ಸೇರಿಸಿದರೂ ಆಯಿತು. ಹೂಕೋಸಲ್ಲಿ ಸೇರಿದ್ದು ಹುಳಗಳು ಹೊರಬೀಳುತ್ತವೆ. ನಂತರ ಕಡಲೆಬೇಳೆಯನ್ನು ಕುಕ್ಕರಿನಲ್ಲಿ ಬೇಯಿಸಿರಿ. ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಳ್ಳಿ. ಈರುಳ್ಳಿ ಬಳಸುವುದು ಬಿಡುವುದು ನಿಮಗೆ ಬಿಟ್ಟಿದ್ದು. ಬಳಸದಿದ್ದರೆ ರುಚಿಯೇನೂ ಕೆಟ್ಟುಹೋಗುವುದಿಲ್ಲ.
ನಂತರ ಬಾಣಲೆಗೆ 2 ಚಮಚ ಎಣ್ಣೆ ಹಾಕಿ. ಸಾಸಿವೆ, ಜೀರಿಗೆ, ಅರಿಷಿಣ, ಕರಿಬೇವು ಹಾಗು ಸಣ್ಣಗೆ ಹೆಚ್ಚಿದ ಈರುಳ್ಳಿ ಹಾಕಿ ಚೆನ್ನಾಗಿ ತಾಳಿಸಿಟ್ಟುಕೊಳ್ಳಿ. ಅದಕ್ಕೆ ಬೇಯಿಸಿದ ಕಡಲೆಬೇಳೆ ಹಾಗು ಹೂಕೋಸನ್ನು ಸುರುವಿ ಗರಂ ಮಸಾಲ, ಹುಚ್ಚೆಳ್ಳು ಪುಡಿ, ಕಾರದಪುಡಿ, ರುಚಿಗೆ ತಕ್ಕಷ್ಟು ಉಪ್ಪು, ಸ್ವಲ್ಪ ನೀರು ಹಾಕಿ ಮಿಕ್ಸ್ ಮಾಡಿ ಚೆನ್ನಾಗಿ ಕುದಿಸಿದ ನಂತರ ಕೊತ್ತಂಬರಿ ಸೊಪ್ಪು ಹಾಕಿ ಕೆಳಗಿಳಿಸಿ.
ಇದು ಚಪಾತಿ, ಜೋಳದ ರೊಟ್ಟಿಗೆ ಚೆನ್ನಾಗಿರುತ್ತದೆ.



Click it and Unblock the Notifications