Latest Updates
-
ಕ್ರಿಕೆಟ್ ಮ್ಯಾಚ್ ನೋಡುವಾಗ ದಂಪತಿಗಳ ನಡುವೆ ಜಗಳವೇ? ಶಾಂತಿ ಕಾಪಾಡಿಕೊಳ್ಳಲು ಇಲ್ಲಿದೆ ಸಮಾಧಾನದ ಸೂತ್ರ! -
ಕೇರಳದಲ್ಲಿ ಭಾರೀ ಮಳೆ: ನಿಮ್ಮ ಮನೆಯನ್ನು ತೇವಾಂಶ ಮತ್ತು ಬೂಸಿನಿಂದ ರಕ್ಷಿಸಲು ಇಲ್ಲಿವೆ ಸರಳ ಮನೆಮದ್ದುಗಳು! -
ಬೆಂಗಳೂರಿನಲ್ಲಿ ನೀರಿನ ಕಟ್ಟುನಿಟ್ಟಿನ ನಿಯಮ: ದಂಡ ತಪ್ಪಿಸಲು ನೀವು ಮಾಡಬೇಕಾದ ಬದಲಾವಣೆಗಳೇನು? -
ಪುಣೆ ರೈಲು ಪ್ರಯಾಣಿಕರೇ ಎಚ್ಚರ! 9 ಗಂಟೆಗಳ ಮೆಗಾ ಬ್ಲಾಕ್: ನಿಮ್ಮ ಪ್ರಯಾಣಕ್ಕೆ ಪರ್ಯಾಯ ಮಾರ್ಗಗಳಿವು -
ಕರಾವಳಿ ಮಳೆಯಲ್ಲಿ ಸಂಗಾತಿಯೊಂದಿಗೆ ಡೇಟ್ ನೈಟ್: ಕೇವಲ 500 ರೂಪಾಯಿಯಲ್ಲಿ ಮಳೆಗಾಲದ ಸಂಜೆಯನ್ನು ರೊಮ್ಯಾಂಟಿಕ್ ಆಗಿ ಕಳೆಯಿರಿ! -
ಮಳೆಗಾಲದ ತೇವಾಂಶಕ್ಕೆ ಬೇಸತ್ತಿದ್ದೀರಾ? ಅಮೆಜಾನ್ ಪ್ರೈಮ್ ಡೇ 2026ರಲ್ಲಿ ಸಿಗಲಿದೆ ಸ್ಮಾರ್ಟ್ ಪರಿಹಾರ! -
ಟೊಮೆಟೊ ಬೆಲೆ ಏರಿಕೆ: ಅಡುಗೆಯಲ್ಲಿ ರುಚಿ ಕೆಡದಂತೆ ಬಜೆಟ್ನಲ್ಲಿ ಅಡುಗೆ ಮಾಡುವುದು ಹೇಗೆ? -
ಮುಂಬೈನಲ್ಲಿ ರೆಡ್ ಅಲರ್ಟ್: ಶಾಲೆಗಳಿಗೆ ರಜೆ ಘೋಷಣೆ, ಮಳೆಗಾಲದಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರು ಮಾಡಬೇಕಾದ್ದೇನು? -
ದೆಹಲಿಯ ಮಳೆಗಾಲದ ಸೆಖೆ: ಮನೆಯಲ್ಲೇ 10 ನಿಮಿಷದ ಈ ವ್ಯಾಯಾಮ ಮಾಡಿದರೆ ಕಾಲು ನೋವು ಮಾಯ! -
ವಾಟ್ಸಾಪ್ ಹೊಸ ಫೀಚರ್ಗೆ ಬ್ರೇಕ್: ನಿಮ್ಮ ಪ್ರೈವೆಸಿ ಕಾಪಾಡಿಕೊಳ್ಳಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಕಡಲೆಬೇಳೆ ಹಾಗು ಹೂಕೋಸು ಪಲ್ಯ

ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳಲು ತರಕಾರಿಗಳು ಬಹು ಅವಶ್ಯಕ. ಅದರಲ್ಲೂ, ಹೂಕೋಸು ತಿನ್ನುವುದರಿಂದ ಹೃದಯ ಸುಸ್ಥಿತಿಯಲ್ಲಿರುತ್ತದೆ ಮತ್ತು ಪಾರ್ಶ್ವವಾಯುವಿನಿಂದ ದೂರವಿಡುತ್ತದೆ. ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಗೆ ಹೂಕೋಸು ಇಂಬು ನೀಡುತ್ತದೆ. ಮಗುವಿನ ನಿರೀಕ್ಷೆಯಲ್ಲಿರುವವರು ಇದನ್ನು ಖಂಡಿತವಾಗಿ ತಿನ್ನಬೇಕು. ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ಬರದಂತೆ ತಡೆಯಲು ಹೂಕೋಸು ಸಹಕಾರಿ.
* ಸುನಂದ ಅರುಣಕುಮಾರ್ ಗೋಸಿ, ಬೆಂಗಳೂರು
ಬೇಕಾಗುವ ಸಾಮಗ್ರಿಗಳು :
* ಕಡಲೆಬೇಳೆ - 1/2 ಕಪ್
* ಹೂಕೋಸು - 8 ಹೂ (ಬಿಡಿಸಿದ್ದು)
* ಈರುಳ್ಳಿ - 1 (ನಿಮ್ಮಿಷ್ಟ)
* ಗರಂ ಮಸಾಲ - 1/4 ಚಮಚ
* ಅಚ್ಚ ಕಾರದಪುಡಿ - 1/2 ಚಮಚ
* ಹುಚ್ಚೆಳ್ಳು ಪುಡಿ - 1/2 ಚಮಚ
* ಅರಿಶಿಣ ಪುಡಿ
* ರುಚಿಗೆ ತಕ್ಕ ಉಪ್ಪು
* ಒಗ್ಗರೆಣೆಗೆ ಸಾಸಿವೆ, ಜೀರಿಗೆ, ಕರಿಬೇವು
* ಕೊತ್ತಂಬರಿ ಸೊಪ್ಪು ಸ್ವಲ್ಪ
ಮಾಡುವ ವಿಧಾನ :
ಮೊದಲಿಗೆ ಹುಕೋಸನ್ನು ಬಿಡಿಸಿ ಬಿಸಿನೀರಿನಲ್ಲಿ ಚೆನ್ನಾಗಿ ತೊಳೆದಿಟ್ಟುಕೊಳ್ಳಿ. ಕುದಿಯುವ ನೀರಿಗೆ ಸ್ವಲ್ಪ ಅರಿಷಿಣಪುಡಿ ಅಥವಾ ಸ್ವಲ್ಪ ಉಪ್ಪು ಸೇರಿಸಿದರೂ ಆಯಿತು. ಹೂಕೋಸಲ್ಲಿ ಸೇರಿದ್ದು ಹುಳಗಳು ಹೊರಬೀಳುತ್ತವೆ. ನಂತರ ಕಡಲೆಬೇಳೆಯನ್ನು ಕುಕ್ಕರಿನಲ್ಲಿ ಬೇಯಿಸಿರಿ. ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಳ್ಳಿ. ಈರುಳ್ಳಿ ಬಳಸುವುದು ಬಿಡುವುದು ನಿಮಗೆ ಬಿಟ್ಟಿದ್ದು. ಬಳಸದಿದ್ದರೆ ರುಚಿಯೇನೂ ಕೆಟ್ಟುಹೋಗುವುದಿಲ್ಲ.
ನಂತರ ಬಾಣಲೆಗೆ 2 ಚಮಚ ಎಣ್ಣೆ ಹಾಕಿ. ಸಾಸಿವೆ, ಜೀರಿಗೆ, ಅರಿಷಿಣ, ಕರಿಬೇವು ಹಾಗು ಸಣ್ಣಗೆ ಹೆಚ್ಚಿದ ಈರುಳ್ಳಿ ಹಾಕಿ ಚೆನ್ನಾಗಿ ತಾಳಿಸಿಟ್ಟುಕೊಳ್ಳಿ. ಅದಕ್ಕೆ ಬೇಯಿಸಿದ ಕಡಲೆಬೇಳೆ ಹಾಗು ಹೂಕೋಸನ್ನು ಸುರುವಿ ಗರಂ ಮಸಾಲ, ಹುಚ್ಚೆಳ್ಳು ಪುಡಿ, ಕಾರದಪುಡಿ, ರುಚಿಗೆ ತಕ್ಕಷ್ಟು ಉಪ್ಪು, ಸ್ವಲ್ಪ ನೀರು ಹಾಕಿ ಮಿಕ್ಸ್ ಮಾಡಿ ಚೆನ್ನಾಗಿ ಕುದಿಸಿದ ನಂತರ ಕೊತ್ತಂಬರಿ ಸೊಪ್ಪು ಹಾಕಿ ಕೆಳಗಿಳಿಸಿ.
ಇದು ಚಪಾತಿ, ಜೋಳದ ರೊಟ್ಟಿಗೆ ಚೆನ್ನಾಗಿರುತ್ತದೆ.



Click it and Unblock the Notifications