Latest Updates
-
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಕಡಲೆಬೇಳೆ ಹಾಗು ಹೂಕೋಸು ಪಲ್ಯ

ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳಲು ತರಕಾರಿಗಳು ಬಹು ಅವಶ್ಯಕ. ಅದರಲ್ಲೂ, ಹೂಕೋಸು ತಿನ್ನುವುದರಿಂದ ಹೃದಯ ಸುಸ್ಥಿತಿಯಲ್ಲಿರುತ್ತದೆ ಮತ್ತು ಪಾರ್ಶ್ವವಾಯುವಿನಿಂದ ದೂರವಿಡುತ್ತದೆ. ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಗೆ ಹೂಕೋಸು ಇಂಬು ನೀಡುತ್ತದೆ. ಮಗುವಿನ ನಿರೀಕ್ಷೆಯಲ್ಲಿರುವವರು ಇದನ್ನು ಖಂಡಿತವಾಗಿ ತಿನ್ನಬೇಕು. ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ಬರದಂತೆ ತಡೆಯಲು ಹೂಕೋಸು ಸಹಕಾರಿ.
* ಸುನಂದ ಅರುಣಕುಮಾರ್ ಗೋಸಿ, ಬೆಂಗಳೂರು
ಬೇಕಾಗುವ ಸಾಮಗ್ರಿಗಳು :
* ಕಡಲೆಬೇಳೆ - 1/2 ಕಪ್
* ಹೂಕೋಸು - 8 ಹೂ (ಬಿಡಿಸಿದ್ದು)
* ಈರುಳ್ಳಿ - 1 (ನಿಮ್ಮಿಷ್ಟ)
* ಗರಂ ಮಸಾಲ - 1/4 ಚಮಚ
* ಅಚ್ಚ ಕಾರದಪುಡಿ - 1/2 ಚಮಚ
* ಹುಚ್ಚೆಳ್ಳು ಪುಡಿ - 1/2 ಚಮಚ
* ಅರಿಶಿಣ ಪುಡಿ
* ರುಚಿಗೆ ತಕ್ಕ ಉಪ್ಪು
* ಒಗ್ಗರೆಣೆಗೆ ಸಾಸಿವೆ, ಜೀರಿಗೆ, ಕರಿಬೇವು
* ಕೊತ್ತಂಬರಿ ಸೊಪ್ಪು ಸ್ವಲ್ಪ
ಮಾಡುವ ವಿಧಾನ :
ಮೊದಲಿಗೆ ಹುಕೋಸನ್ನು ಬಿಡಿಸಿ ಬಿಸಿನೀರಿನಲ್ಲಿ ಚೆನ್ನಾಗಿ ತೊಳೆದಿಟ್ಟುಕೊಳ್ಳಿ. ಕುದಿಯುವ ನೀರಿಗೆ ಸ್ವಲ್ಪ ಅರಿಷಿಣಪುಡಿ ಅಥವಾ ಸ್ವಲ್ಪ ಉಪ್ಪು ಸೇರಿಸಿದರೂ ಆಯಿತು. ಹೂಕೋಸಲ್ಲಿ ಸೇರಿದ್ದು ಹುಳಗಳು ಹೊರಬೀಳುತ್ತವೆ. ನಂತರ ಕಡಲೆಬೇಳೆಯನ್ನು ಕುಕ್ಕರಿನಲ್ಲಿ ಬೇಯಿಸಿರಿ. ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಳ್ಳಿ. ಈರುಳ್ಳಿ ಬಳಸುವುದು ಬಿಡುವುದು ನಿಮಗೆ ಬಿಟ್ಟಿದ್ದು. ಬಳಸದಿದ್ದರೆ ರುಚಿಯೇನೂ ಕೆಟ್ಟುಹೋಗುವುದಿಲ್ಲ.
ನಂತರ ಬಾಣಲೆಗೆ 2 ಚಮಚ ಎಣ್ಣೆ ಹಾಕಿ. ಸಾಸಿವೆ, ಜೀರಿಗೆ, ಅರಿಷಿಣ, ಕರಿಬೇವು ಹಾಗು ಸಣ್ಣಗೆ ಹೆಚ್ಚಿದ ಈರುಳ್ಳಿ ಹಾಕಿ ಚೆನ್ನಾಗಿ ತಾಳಿಸಿಟ್ಟುಕೊಳ್ಳಿ. ಅದಕ್ಕೆ ಬೇಯಿಸಿದ ಕಡಲೆಬೇಳೆ ಹಾಗು ಹೂಕೋಸನ್ನು ಸುರುವಿ ಗರಂ ಮಸಾಲ, ಹುಚ್ಚೆಳ್ಳು ಪುಡಿ, ಕಾರದಪುಡಿ, ರುಚಿಗೆ ತಕ್ಕಷ್ಟು ಉಪ್ಪು, ಸ್ವಲ್ಪ ನೀರು ಹಾಕಿ ಮಿಕ್ಸ್ ಮಾಡಿ ಚೆನ್ನಾಗಿ ಕುದಿಸಿದ ನಂತರ ಕೊತ್ತಂಬರಿ ಸೊಪ್ಪು ಹಾಕಿ ಕೆಳಗಿಳಿಸಿ.
ಇದು ಚಪಾತಿ, ಜೋಳದ ರೊಟ್ಟಿಗೆ ಚೆನ್ನಾಗಿರುತ್ತದೆ.



Click it and Unblock the Notifications