Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಕಡಲೆಬೇಳೆ ಹಾಗು ಹೂಕೋಸು ಪಲ್ಯ

ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳಲು ತರಕಾರಿಗಳು ಬಹು ಅವಶ್ಯಕ. ಅದರಲ್ಲೂ, ಹೂಕೋಸು ತಿನ್ನುವುದರಿಂದ ಹೃದಯ ಸುಸ್ಥಿತಿಯಲ್ಲಿರುತ್ತದೆ ಮತ್ತು ಪಾರ್ಶ್ವವಾಯುವಿನಿಂದ ದೂರವಿಡುತ್ತದೆ. ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಗೆ ಹೂಕೋಸು ಇಂಬು ನೀಡುತ್ತದೆ. ಮಗುವಿನ ನಿರೀಕ್ಷೆಯಲ್ಲಿರುವವರು ಇದನ್ನು ಖಂಡಿತವಾಗಿ ತಿನ್ನಬೇಕು. ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ಬರದಂತೆ ತಡೆಯಲು ಹೂಕೋಸು ಸಹಕಾರಿ.
* ಸುನಂದ ಅರುಣಕುಮಾರ್ ಗೋಸಿ, ಬೆಂಗಳೂರು
ಬೇಕಾಗುವ ಸಾಮಗ್ರಿಗಳು :
* ಕಡಲೆಬೇಳೆ - 1/2 ಕಪ್
* ಹೂಕೋಸು - 8 ಹೂ (ಬಿಡಿಸಿದ್ದು)
* ಈರುಳ್ಳಿ - 1 (ನಿಮ್ಮಿಷ್ಟ)
* ಗರಂ ಮಸಾಲ - 1/4 ಚಮಚ
* ಅಚ್ಚ ಕಾರದಪುಡಿ - 1/2 ಚಮಚ
* ಹುಚ್ಚೆಳ್ಳು ಪುಡಿ - 1/2 ಚಮಚ
* ಅರಿಶಿಣ ಪುಡಿ
* ರುಚಿಗೆ ತಕ್ಕ ಉಪ್ಪು
* ಒಗ್ಗರೆಣೆಗೆ ಸಾಸಿವೆ, ಜೀರಿಗೆ, ಕರಿಬೇವು
* ಕೊತ್ತಂಬರಿ ಸೊಪ್ಪು ಸ್ವಲ್ಪ
ಮಾಡುವ ವಿಧಾನ :
ಮೊದಲಿಗೆ ಹುಕೋಸನ್ನು ಬಿಡಿಸಿ ಬಿಸಿನೀರಿನಲ್ಲಿ ಚೆನ್ನಾಗಿ ತೊಳೆದಿಟ್ಟುಕೊಳ್ಳಿ. ಕುದಿಯುವ ನೀರಿಗೆ ಸ್ವಲ್ಪ ಅರಿಷಿಣಪುಡಿ ಅಥವಾ ಸ್ವಲ್ಪ ಉಪ್ಪು ಸೇರಿಸಿದರೂ ಆಯಿತು. ಹೂಕೋಸಲ್ಲಿ ಸೇರಿದ್ದು ಹುಳಗಳು ಹೊರಬೀಳುತ್ತವೆ. ನಂತರ ಕಡಲೆಬೇಳೆಯನ್ನು ಕುಕ್ಕರಿನಲ್ಲಿ ಬೇಯಿಸಿರಿ. ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಳ್ಳಿ. ಈರುಳ್ಳಿ ಬಳಸುವುದು ಬಿಡುವುದು ನಿಮಗೆ ಬಿಟ್ಟಿದ್ದು. ಬಳಸದಿದ್ದರೆ ರುಚಿಯೇನೂ ಕೆಟ್ಟುಹೋಗುವುದಿಲ್ಲ.
ನಂತರ ಬಾಣಲೆಗೆ 2 ಚಮಚ ಎಣ್ಣೆ ಹಾಕಿ. ಸಾಸಿವೆ, ಜೀರಿಗೆ, ಅರಿಷಿಣ, ಕರಿಬೇವು ಹಾಗು ಸಣ್ಣಗೆ ಹೆಚ್ಚಿದ ಈರುಳ್ಳಿ ಹಾಕಿ ಚೆನ್ನಾಗಿ ತಾಳಿಸಿಟ್ಟುಕೊಳ್ಳಿ. ಅದಕ್ಕೆ ಬೇಯಿಸಿದ ಕಡಲೆಬೇಳೆ ಹಾಗು ಹೂಕೋಸನ್ನು ಸುರುವಿ ಗರಂ ಮಸಾಲ, ಹುಚ್ಚೆಳ್ಳು ಪುಡಿ, ಕಾರದಪುಡಿ, ರುಚಿಗೆ ತಕ್ಕಷ್ಟು ಉಪ್ಪು, ಸ್ವಲ್ಪ ನೀರು ಹಾಕಿ ಮಿಕ್ಸ್ ಮಾಡಿ ಚೆನ್ನಾಗಿ ಕುದಿಸಿದ ನಂತರ ಕೊತ್ತಂಬರಿ ಸೊಪ್ಪು ಹಾಕಿ ಕೆಳಗಿಳಿಸಿ.
ಇದು ಚಪಾತಿ, ಜೋಳದ ರೊಟ್ಟಿಗೆ ಚೆನ್ನಾಗಿರುತ್ತದೆ.



Click it and Unblock the Notifications