Latest Updates
-
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ!
ನಿಂಬೆ ಹಣ್ಣಿನ ಚಿತ್ರಾನ್ನದ ಗೊಜ್ಜು

ಬೇಕಾದ ಸಾಮಗ್ರಿಗಳು :
ಹಸಿರು ಮೆಣಸಿನಕಾಯಿ : 10-15
ಸಾಸಿವೆ, ಕಡಲೆ ಬೇಳೆ, ಉದ್ದಿನ ಬೇಳೆ, ಹಸಿ ಕರಿ ಬೇವು, ಕೊತ್ತಂಬರಿ ಸೊಪ್ಪು : ಒಗ್ಗರಣೆಗೆ ಬೇಕಾಗುವಷ್ಟು
ಪುಡಿ ಮಾಡಿದ ಹಿಂಗು : 4-5 ಚಿಟಿಕೆ
ಅರಿಷಿಣ : 4-5 ಚಿಟಿಕೆ
ಕಡಲೆ ಬೀಜ : ಎರಡು ಹಿಡಿ
ಗೋಡಂಬಿ : ಒಂದು ಹಿಡಿ
ಪುದೀನಾ ಸೊಪ್ಪು : ಒಂದು ಕಟ್ಟು
ಸಣ್ಣಗೆ ಹೆಚ್ಚಿದ ಹುರುಳಿ ಕಾಯಿ, ಕ್ಯಾರೆಟ್, ದೊಣ್ಣೆ ಮೆಣಸಿನ ಕಾಯಿ : ಎರಡು ಕಪ್
ಹಸಿ ಬಟಾಣಿ : ಒಂದು ಕಪ್
ಪುಡಿ ಉಪ್ಪು : ರುಚಿಗೆ ತಕ್ಕಷ್ಟು
ತೆಂಗಿನ ತುರಿ : ಅರ್ಧ ಹೋಳಿನದು
ಕಡಲೆ ಕಾಯಿ ಎಣ್ಣೆ : ಎರಡು ಕಪ್
ನಿಂಬೆ ಹಣ್ಣಿನ ರಸ : 4-5 ನಿಂಬೆ ಹಣ್ಣಿನದು
ಮಾಡುವ ವಿಧಾನ :
ಬಾಣಲಿಯಲ್ಲಿ ಅರ್ಧ ಕಪ್ ಎಣ್ಣೆ ಕಾಯಿಸಿ ಕಡಲೆ ಬೀಜ ಮತ್ತು ಗೋಡಂಬಿಯನ್ನು ಕರಿದುಕೊಂಡು ಪಕ್ಕಕ್ಕೆ ತೆಗೆದಿಡಿ. ಉಳಿದ ಎಣ್ಣೆಯನ್ನು ಬಾಣಲೆಗೆ ಹಾಕಿ ಕಾದ ಮೇಲೆ ಸಾಸಿವೆ ಹಾಕಬೇಕು. ಸಾಸಿವೆ ಸಿಡಿದ ಮೇಲೆ ಕರಿಬೇವು, ಉದ್ದಿನ ಬೇಳೆ, ಕಡಲೆ ಬೇಳೆ ಹಾಕಿ (ಉದ್ದಿನ ಬೇಳೆ) ಕೆಂಬಣ್ಣ ಬರುವವರೆಗೆ ಕರಿಯಬೇಕು.
ನಂತರ ಅರಿಷಿಣ, ಹಿಂಗು, ಹೆಚ್ಚಿಟ್ಟುಕೊಂಡ ತರಕಾರಿ, ಬಟಾಣಿ ಹಾಕಿ ತಿರುವಿ 4-5 ನಿಮಿಷ ತಟ್ಟೆ ಮುಚ್ಚಿ, ಮಂದ ಉರಿಯಲ್ಲಿ ಬೇಯಲು ಬಿಡಬೇಕು. 5 ನಿಮಿಷದ ನಂತರ ತರಕಾರಿ ಬೆಂದಿರುತ್ತದೆ. ಇದಕ್ಕೆ ಪುದೀನಾ ಸೊಪ್ಪು, ಉಪ್ಪು ಹಾಕಿ ಒಂದೆರಡು ನಿಮಿಷ ಬೇಯಿಸಿ, ತೆಂಗಿನ ತುರಿ, ಕೊತ್ತಂಬರಿ ಸೊಪ್ಪು ಬೆರೆಸಿ, ಒಲೆಯಿಂದ ಬಾಣಲೆಯನ್ನು ಇಳಿಸಿ, ತಟ್ಟೆ ಮುಚ್ಚಿ ಇಡಬೇಕು.
ತೆಂಗಿನ ತುರಿ ಹಾಕಿದ ನಂತರ ಮಿಶ್ರಣವನ್ನು ಬೇಯಿಸಬಾರದು. ಮಿಶ್ರಣ ಸ್ವಲ್ಪ ಆರಿದ ನಂತರ ನಿಂಬೆ ರಸ ಬೆರೆಸಬೇಕು. ಚಿತ್ರಾನ್ನದ ಗೊಜ್ಜು ಈಗ ತಯಾರು. ಚಿತ್ರಾನ್ನಕ್ಕಾಗಿ ಅನ್ನ ಮಾಡುವಾಗ ಸ್ವಲ್ಪ ಉಪ್ಪು ಹಾಕಿ, ಉದುರು ಉದುರಾಗಿ ಮಾಡಬೇಕು. ಅನ್ನಕ್ಕೆ ಗೊಜ್ಜನ್ನು ಬೆರೆಸಿ, ಕರಿದ ಕಡಲೆ ಬೀಜ, ಗೋಡಂಬಿಯನ್ನು ಸೇರಿಸಿ, ಒಂದು ಕಪ್ ಗಟ್ಟಿ ಮೊಸರಿನೊಡನೆ ತಿಂದರೆ ರುಚಿಯೋ ರುಚಿ.
(ಕಡಲೆ ಬೀಜ, ಗೋಡಂಬಿಯನ್ನು ಗೊಜ್ಜಿಗೇ ಸೇರಿಸಬಹುದು ಆದರೆ ಅವು ಮೆತ್ತಗಾಗುತ್ತವೆ).



Click it and Unblock the Notifications