Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ನಿಂಬೆ ಹಣ್ಣಿನ ಚಿತ್ರಾನ್ನದ ಗೊಜ್ಜು

ಬೇಕಾದ ಸಾಮಗ್ರಿಗಳು :
ಹಸಿರು ಮೆಣಸಿನಕಾಯಿ : 10-15
ಸಾಸಿವೆ, ಕಡಲೆ ಬೇಳೆ, ಉದ್ದಿನ ಬೇಳೆ, ಹಸಿ ಕರಿ ಬೇವು, ಕೊತ್ತಂಬರಿ ಸೊಪ್ಪು : ಒಗ್ಗರಣೆಗೆ ಬೇಕಾಗುವಷ್ಟು
ಪುಡಿ ಮಾಡಿದ ಹಿಂಗು : 4-5 ಚಿಟಿಕೆ
ಅರಿಷಿಣ : 4-5 ಚಿಟಿಕೆ
ಕಡಲೆ ಬೀಜ : ಎರಡು ಹಿಡಿ
ಗೋಡಂಬಿ : ಒಂದು ಹಿಡಿ
ಪುದೀನಾ ಸೊಪ್ಪು : ಒಂದು ಕಟ್ಟು
ಸಣ್ಣಗೆ ಹೆಚ್ಚಿದ ಹುರುಳಿ ಕಾಯಿ, ಕ್ಯಾರೆಟ್, ದೊಣ್ಣೆ ಮೆಣಸಿನ ಕಾಯಿ : ಎರಡು ಕಪ್
ಹಸಿ ಬಟಾಣಿ : ಒಂದು ಕಪ್
ಪುಡಿ ಉಪ್ಪು : ರುಚಿಗೆ ತಕ್ಕಷ್ಟು
ತೆಂಗಿನ ತುರಿ : ಅರ್ಧ ಹೋಳಿನದು
ಕಡಲೆ ಕಾಯಿ ಎಣ್ಣೆ : ಎರಡು ಕಪ್
ನಿಂಬೆ ಹಣ್ಣಿನ ರಸ : 4-5 ನಿಂಬೆ ಹಣ್ಣಿನದು
ಮಾಡುವ ವಿಧಾನ :
ಬಾಣಲಿಯಲ್ಲಿ ಅರ್ಧ ಕಪ್ ಎಣ್ಣೆ ಕಾಯಿಸಿ ಕಡಲೆ ಬೀಜ ಮತ್ತು ಗೋಡಂಬಿಯನ್ನು ಕರಿದುಕೊಂಡು ಪಕ್ಕಕ್ಕೆ ತೆಗೆದಿಡಿ. ಉಳಿದ ಎಣ್ಣೆಯನ್ನು ಬಾಣಲೆಗೆ ಹಾಕಿ ಕಾದ ಮೇಲೆ ಸಾಸಿವೆ ಹಾಕಬೇಕು. ಸಾಸಿವೆ ಸಿಡಿದ ಮೇಲೆ ಕರಿಬೇವು, ಉದ್ದಿನ ಬೇಳೆ, ಕಡಲೆ ಬೇಳೆ ಹಾಕಿ (ಉದ್ದಿನ ಬೇಳೆ) ಕೆಂಬಣ್ಣ ಬರುವವರೆಗೆ ಕರಿಯಬೇಕು.
ನಂತರ ಅರಿಷಿಣ, ಹಿಂಗು, ಹೆಚ್ಚಿಟ್ಟುಕೊಂಡ ತರಕಾರಿ, ಬಟಾಣಿ ಹಾಕಿ ತಿರುವಿ 4-5 ನಿಮಿಷ ತಟ್ಟೆ ಮುಚ್ಚಿ, ಮಂದ ಉರಿಯಲ್ಲಿ ಬೇಯಲು ಬಿಡಬೇಕು. 5 ನಿಮಿಷದ ನಂತರ ತರಕಾರಿ ಬೆಂದಿರುತ್ತದೆ. ಇದಕ್ಕೆ ಪುದೀನಾ ಸೊಪ್ಪು, ಉಪ್ಪು ಹಾಕಿ ಒಂದೆರಡು ನಿಮಿಷ ಬೇಯಿಸಿ, ತೆಂಗಿನ ತುರಿ, ಕೊತ್ತಂಬರಿ ಸೊಪ್ಪು ಬೆರೆಸಿ, ಒಲೆಯಿಂದ ಬಾಣಲೆಯನ್ನು ಇಳಿಸಿ, ತಟ್ಟೆ ಮುಚ್ಚಿ ಇಡಬೇಕು.
ತೆಂಗಿನ ತುರಿ ಹಾಕಿದ ನಂತರ ಮಿಶ್ರಣವನ್ನು ಬೇಯಿಸಬಾರದು. ಮಿಶ್ರಣ ಸ್ವಲ್ಪ ಆರಿದ ನಂತರ ನಿಂಬೆ ರಸ ಬೆರೆಸಬೇಕು. ಚಿತ್ರಾನ್ನದ ಗೊಜ್ಜು ಈಗ ತಯಾರು. ಚಿತ್ರಾನ್ನಕ್ಕಾಗಿ ಅನ್ನ ಮಾಡುವಾಗ ಸ್ವಲ್ಪ ಉಪ್ಪು ಹಾಕಿ, ಉದುರು ಉದುರಾಗಿ ಮಾಡಬೇಕು. ಅನ್ನಕ್ಕೆ ಗೊಜ್ಜನ್ನು ಬೆರೆಸಿ, ಕರಿದ ಕಡಲೆ ಬೀಜ, ಗೋಡಂಬಿಯನ್ನು ಸೇರಿಸಿ, ಒಂದು ಕಪ್ ಗಟ್ಟಿ ಮೊಸರಿನೊಡನೆ ತಿಂದರೆ ರುಚಿಯೋ ರುಚಿ.
(ಕಡಲೆ ಬೀಜ, ಗೋಡಂಬಿಯನ್ನು ಗೊಜ್ಜಿಗೇ ಸೇರಿಸಬಹುದು ಆದರೆ ಅವು ಮೆತ್ತಗಾಗುತ್ತವೆ).



Click it and Unblock the Notifications