Latest Updates
-
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ
ನುಗ್ಗೆ ಸೊಪ್ಪಿನ ರೆಸಿಪಿ: ಸರ್ವ ರೋಗಕ್ಕೂ ರಾಮಬಾಣ
ಸಾಮಾನ್ಯವಾಗಿ ವರ್ಷವಿಡೀ ಸಾಂಬಾರಿನಲ್ಲಿ ಕಂಡುಬರುವ ತರಕಾರಿಗಳೆಂದರೆ ಮೂಲಂಗಿ, ನುಗ್ಗೇಕಾಯಿ ಮತ್ತು ಬದನೇಕಾಯಿ. ಹೆಚ್ಚಿನವರಿಗೆ ನುಗ್ಗೇಕಾಯಿ ಎಂದರೆ ಏನೋ ತಾತ್ಸಾರ. ಇದನ್ನು ತಿನ್ನದೇ ಹಾಗೇ ಬಿಟ್ಟುಬಿಡುತ್ತಾರೆ. ಆದರೆ ನುಗ್ಗೆಕಾಯಿಯಲ್ಲಿ ಉತ್ತಮ ಪೋಷಕಾಂಶಗಳಿರುವುದರಿಂದ ತಿನ್ನದಿರುವುದು ಸಲ್ಲದು. ನುಗ್ಗೇಕಾಯಿಯಂತೆ ನುಗ್ಗೆಸೊಪ್ಪಿನ (ಎಲೆಗಳ) ಪಲ್ಯ ಸಹಾ ಪೋಷಕಾಂಶಗಳಿಂದ ಕೂಡಿದೆ. ಆದರೆ ಇದು ಕೊಂಚ ಕಹಿಯಾಗಿರುವುದರಿಂದ ಹೆಚ್ಚಿನವರು ಇದನ್ನು ಇಷ್ಟಪಡುವುದಿಲ್ಲ, ಇದೇ ಕಾರಣಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚು ಲಭ್ಯವೂ ಇಲ್ಲ.
ಆದರೆ ಈ ಎಲೆಗಳು ಆರೋಗ್ಯಕ್ಕೆ ಉತ್ತಮವಾಗಿವೆ. ಇದು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ನಿಯಂತ್ರಿಸುವ ಕಾರಣ ಮಧುಮೇಹಿಗಳಿಗೂ ಸೂಕ್ತವಾಗಿದೆ. ಹೆಚ್ಚಿನ ನಾರು ಮತ್ತು ಜೀರ್ಣಿಸಿಕೊಳ್ಳಲು ಶರೀರದಲ್ಲಿ ಸಂಗ್ರಹವಾಗಿದ್ದ ಕೊಬ್ಬನ್ನು ಬಳಸುವುದರಿಂದ ತೂಕ ಇಳಿಸಿಕೊಳ್ಳುತ್ತಿರುವವರಿಗೂ ಸೂಕ್ತವಾದ ಆಹಾರವಾಗಿದೆ.
ಆರೋಗ್ಯತಜ್ಞರಿಂದ ಈಗ ಈ ಎರಡೂ ವಿಷಯಗಳು ಪ್ರಮಾಣಿಸಲ್ಪಟ್ಟಿವೆ. ಅಲ್ಲದೇ ಗರ್ಭಿಣಿಯರೂ ಈ ಆಹಾರವನ್ನು ಸೇವಿಸುವ ಮೂಲಕ ಅಗತ್ಯವಿರುವ ಅಧಿಕ ರಕ್ತವನ್ನು ಪಡೆಯಬಹುದು. ಹೆಚ್ಚಿನವರ ಅವಗಣನೆಗೆ ಗುರಿಯಾಗಿದ್ದ ಈ ಸೊಪ್ಪಿನ ಸೊಗಸನ್ನು ಹೆಚ್ಚಿಸುವ ಸುಲಭ ವಿಧಾನವನ್ನು ಇಲ್ಲಿ ನೀಡಲಾಗಿದೆ. ಅಧಿಕ ಪ್ರೊಟೀನ್ ಇರುವ ನುಗ್ಗೆ ಸೊಪ್ಪಿನ ಚಟ್ನಿ

ಪ್ರಮಾಣ: ಮೂವರಿಗೆ ಒಂದು ಹೊತ್ತಿಗಾಗುವಷ್ಟು
ಸಿದ್ಧತಾ ಸಮಯ: ಹದಿನೈದು ನಿಮಿಷಗಳು
ತಯಾರಿಕಾ ಸಮಯ: ಹದಿನೆಂಟು ನಿಮಿಷಗಳೂ
ಅಗತ್ಯವಿರುವ ಸಾಮಾಗ್ರಿಗಳು:
*ನುಗ್ಗೆಸೊಪ್ಪು - ಮೂರು ಕಟ್ಟು
*ಈರುಳ್ಳಿ - 2, ಚಿಕ್ಕದಾಗಿ ಹೆಚ್ಚಿದ್ದು (ಮಧ್ಯಮ ಗಾತ್ರ)
*ಬೆಳ್ಳುಳ್ಳಿ - ನಾಲ್ಕು ಎಸಳು, ಸಿಪ್ಪೆ ಸುಲಿದದ್ದು
*ಮೊಟ್ಟೆ - 1
*ಕೆಂಪು ಮೆಣಸಿನ ಕಾಯಿ - 3-4
*ಅಡುಗೆ ಎಣ್ಣೆ - 2 ದೊಡ್ಡ ಚಮಚ
*ಸಾಸಿವೆ- 1 ಚಿಕ್ಕಚಮಚ
*ಕಡಲೆ ಬೇಳೆ- 1 ಚಿಕ್ಕಚಮಚ
*ಉದ್ದಿನ ಬೇಳೆ - 1 ಚಿಕ್ಕಚಮಚ
*ಕಾಯಿತುರಿ - 2 ದೊಡ್ಡ ಚಮಚ (grated)
*ಉಪ್ಪು- ರುಚಿಗನುಸಾರ.
ವಿಧಾನ:
*ಮೊದಲು ನುಗ್ಗೆಸೊಪ್ಪನ್ನು ಚೆನ್ನಾಗಿ ತೊಳೆದುಕೊಳ್ಳಿ. ಪ್ರತಿ ಎಲೆಯನ್ನೂ ಬೆರಳುಗಳಿಂದ ಸವರಿ ತೊಳೆಯುವುದು ಅಗತ್ಯ. ಏಕೆಂದರೆ ಎಲೆಯ ಮೇಲೆ ಅಂಟಿಕೊಂಡಿರುವ ಧೂಳು ಕೇವಲ ನೀರಿನಲ್ಲಿ ನೆನೆಸುವುದರಿಂದ ತೊಲಗುವುದಿಲ್ಲ. ಬಳಿಕ ನೀರು ಬಸಿದು ಒಂದು ಬದಿಯಲ್ಲಿಡಿ.
*ಒಂದು ಪಾತ್ರೆಯಲ್ಲಿ ಕೊಂಚವೇ ನೀರು ಹಾಕಿ ನುಗ್ಗೆಸೊಪ್ಪನ್ನು ಚಿಕ್ಕ ಉರಿಯಲ್ಲಿ ಹದಿನೈದು ನಿಮಿಷ ಮುಚ್ಚಳ ಮುಚ್ಚಿ ಬೇಯಿಸಿ. ಕೊಂಚ ಉಪ್ಪನ್ನು ಎಲ್ಲಾ ಎಲೆಗಳ ಮೇಲೆ ಬರುವಂತೆ ಚಿಮುಕಿಸಿ. ನಡುನಡುವೆ ತಿರುವುತ್ತಿರಿ.
*ಇನ್ನೊಂದು ಪಾತ್ರೆಯನ್ನು ಮಧ್ಯಮ ಉರಿಯಲ್ಲಿಟ್ಟು ಎಣ್ಣೆ ಹಾಕಿ ಕೊಂಚ ಬಿಸಿಯಾಗುತ್ತಿದ್ದಂತೆಯೇ ಈರುಳ್ಳಿ, ಬೆಳ್ಳುಳ್ಳಿ, ಕೆಂಪುಮೆಣಸು, ಸಾಸಿವೆ, ಉದ್ದಿನ ಬೇಳೆ ಮತ್ತು ಕಡಲೆ ಬೇಳೆ ಹಾಕಿ ಹುರಿಯಿರಿ.
ಈರುಳ್ಳಿ ಕೆಂಪಕಾಗುವವರೆಗೆ ತಿರುವುತ್ತಾ ಇರಿ.
*ಈಗ ಮೊಟ್ಟೆಯನ್ನು ಒಡೆದು ನೀರುಳ್ಳಿಯ ಮೇಲೆ ಸುರಿದು ತಕ್ಷಣ ತಿರುವುತ್ತಾ ಎಲ್ಲಾ ಪ್ರಮಾಣದಲ್ಲಿ ಮಿಳಿತವಾಗುವಂತೆ ನೋಡಿಕೊಳ್ಳಿ
*ಇನ್ನು ಬೇಯಿಸಿಟ್ಟಿದ್ದ ನುಗ್ಗೆ ಎಲೆಗಳನ್ನು ಹಾಕಿ ಚೆನ್ನಾಗಿ ತಿರುವಿರಿ. ಮಧ್ಯಮ ಉರಿಯಲ್ಲಿ ಈ ಮಿಶ್ರಣವನ್ನು ಚೆನ್ನಾಗಿ ಬೇಯಿಸಿ.
*ತದನಂತರ ಎಲೆಗಳು ಬೆಂದಿವೆಯೇ ನೋಡಿಕೊಳ್ಳಿ. ಬಳಿಕ ಕಾಯಿತುರಿ ಹಾಕಿ ತಿರುವಿ. ಕೂಡಲೇ ಒಲೆಯಿಂದಿಳಿಸಿ ತಣಿಯಲು ಬಿಡಿ.
ಸಲಹೆ:
ನುಗ್ಗೆಸೊಪ್ಪನ್ನು ಬೇಯಿಸುವಾಗ ಅತಿ ಕಡಿಮೆ ನೀರು ಇರಬೇಕು. ಪ್ರೆಶರ್ ಕುಕ್ಕರ್ ಬಳಸುವುದಾದರೆ ಐದಾರು ಸೀಟಿ ಬರುವವರೆಗೆ ಬೇಯಿಸಿ. ಆದರೆ ಉಪ್ಪನ್ನು ನೀರಿನಲ್ಲಿ ಮೊದಲೇ ಹಾಕಬೇಕು.



Click it and Unblock the Notifications
