Latest Updates
-
ಮಳೆಗಾಲದಲ್ಲಿ ಬಟ್ಟೆ ಒಣಗುತ್ತಿಲ್ಲವೇ? ಅಪಾರ್ಟ್ಮೆಂಟ್ನಲ್ಲಿ ಬೂಷ್ಟು ತಡೆಯಲು ಇಲ್ಲಿದೆ 15 ನಿಮಿಷದ ಸಿಂಪಲ್ ಟಿಪ್ಸ್! -
ಓಣಂ ಸದ್ಯದ ರುಚಿ ಸವಿಯುತ್ತಲೇ ಆರೋಗ್ಯ ಕಾಪಾಡಿಕೊಳ್ಳಿ: ಮಧುಮೇಹಿಗಳಿಗೆ ಇಲ್ಲಿದೆ ಸ್ಮಾರ್ಟ್ ಟಿಪ್ಸ್ -
ಓಣಂ ಮುಗಿದ್ರೂ ಕಮ್ಮಿ ಆಗಿಲ್ಲ ಸದ್ಯದ ಕ್ರೇಜ್! ಬೆಂಗಳೂರು, ಮುಂಬೈನಲ್ಲಿ ವೀಕೆಂಡ್ನಲ್ಲಿ ಎಲ್ಲಿ ಸಿಗುತ್ತೆ ರುಚಿಕರ ಊಟ? -
ರಾಷ್ಟ್ರೀಯ ಕ್ರೀಡಾದಿನ: ಜಿಮ್ ಇಲ್ಲದೆ ಮನೆಯಲ್ಲೇ ಫಿಟ್ ಆಗಲು ಈ 30 ನಿಮಿಷದ ವರ್ಕೌಟ್ ಟ್ರೈ ಮಾಡಿ! -
ವರಮಹಾಲಕ್ಷ್ಮಿ ಹಬ್ಬದ ತಯಾರಿ: ಕುಟುಂಬದೊಂದಿಗೆ ಜಗಳವಿಲ್ಲದೆ, ಶಾಂತಿಯುತವಾಗಿ ಹಬ್ಬ ಆಚರಿಸುವುದು ಹೇಗೆ? -
ನಾಲ್ಕನೇ ಓಣಂ ಸಂಭ್ರಮ: ಪೂಕಳಂ ಸ್ಪರ್ಧೆಗೆ ಕ್ವಿಕ್ ಟಿಪ್ಸ್ ಮತ್ತು ಝೀರೋ-ವೇಸ್ಟ್ ಹ್ಯಾಕ್ಸ್! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ: ಇನ್ಮುಂದೆ ಕ್ಯಾನ್ ಮೇಲೆ ಈ ಹೆಸರು ಇರಲ್ಲ, FSSAI ಹೊಸ ರೂಲ್ಸ್! -
ರಕ್ಷಾಬಂಧನ 2026: ಚಂದ್ರಗ್ರಹಣದ ಭಯ ಬೇಡ, ರಾಖಿ ಕಟ್ಟಲು ಬೆಸ್ಟ್ ಟೈಮ್ ಇಲ್ಲಿದೆ! -
ಉರಿ ಬಿಸಿಲು, ತೇವಾಂಶದ ಕಾಟ: ಎಸಿ ಇಲ್ಲದಿದ್ದರೂ ಫಿಟ್ ಆಗಿರಲು 12 ನಿಮಿಷದ ಸರಳ ವರ್ಕೌಟ್! -
ರಕ್ಷಾಬಂಧನ ಶಾಪಿಂಗ್ ಎಚ್ಚರ: ನಿಮ್ಮ ಹಣ ಕದಿಯಲು ಕಾಯುತ್ತಿದ್ದಾರೆ ಸೈಬರ್ ವಂಚಕರು!
ಹೊಟ್ಟೆಗೆ ತಂಪು ತರಿಸುವ ಬಾಳೆಕಾಯಿ ಮೊಸರು ರಾಯಿತ
ರುಚಿಯಾದ ಅಡುಗೆ ಕಣ್ಮುಂದೆ ಇದ್ದರೆ ಊಟ ಮಾಡುವವರ ಮನಸ್ಸು ಹೊಟ್ಟೆ ಸದಾ ತುಂಬಿರುತ್ತದೆ. ಮೃಷ್ಟಾನ್ನ ಭೋಜನ ಕೂಡ ರುಚಿಯಲ್ಲಿ ತನ್ನ ಮಹತ್ವವನ್ನು ಕಳೆದುಕೊಂಡಿದ್ದರೆ ಅದು ಸಪ್ಪೆಯಾಗುತ್ತದೆ ಮತ್ತು ಹೊಟ್ಟೆ ತುಂಬಿದರೂ ಮನಸ್ಸು ಇದರಿಂದ ತುಂಬುವುದಿಲ್ಲ.
ಭಾರತೀಯ ಖಾದ್ಯ ತಯಾರಿಯು ಈ ರುಚಿ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡೇ ಆಹಾರ ತಯಾರಿಗಳ ಕಾರ್ಯವನ್ನು ಮಾಡುತ್ತವೆ. ಆದ್ದರಿಂದಲೇ ನಮ್ಮಲ್ಲಿನ ತಿಂಡಿ ತಿನಿಸುಗಳು ಹೊರ ದೇಶದಲ್ಲೂ ಮಾನ್ಯತೆಯನ್ನು ಪಡೆಯುತ್ತಿರುವುದು. ಸಣ್ಣ ಹೋಟೆಲ್ಗಳಿಂದ ಹಿಡಿದು ಮೂರಂತಸ್ತಿನ ಹೋಟೆಲ್ಗಳೂ ಕೂಡ ರುಚಿ ಎಂಬ ಮಂತ್ರವನ್ನು ಅಡಿಪಾಯವನ್ನಾಗಿಸಿಕೊಂಡು ಭಕ್ಷ್ಯಗಳನ್ನು ತಯಾರಿಸುತ್ತವೆ.

ಇನ್ನು ನಮ್ಮಲ್ಲಿ ತಯಾರಾಗುವ ಹಳ್ಳಿ ತಿಂಡಿಗಳಿಗೂ ಹೆಚ್ಚಿನ ಬೇಡಿಕೆಯಿದೆ. ಹಿತ್ತಲಿನಲ್ಲಿ ಬೆಳೆಯುವ ಆಹಾರ ಪದಾರ್ಥಗಳು ಪೋಷಕಾಂಶದೊಂದಿಗೆ ಹೇರಳವಾಗಿರುವುದರ ಮೂಲಕ ರುಚಿಯ ಅಮೂಲಾಗ್ರ ಶ್ರೀಮಂತಿಕೆಯನ್ನು ಉಣಬಡಿಸುತ್ತವೆ.
ಇಂದಿನ ಲೇಖನದಲ್ಲಿ ಕೂಡ ಹಿತ್ತಲಿನ ತರಕಾರಿಯಾದ ಬಾಳೆಕಾಯಿಯ ಮೊಸರು ಬಜ್ಜಿ ಅಥವಾ ರಾಯಿತ ಪಾಕ ವಿಧಾನದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ. ನಾರಿನಂಶದಿಂದ ಸಮೃದ್ಧವಾಗಿರುವ ಬಾಳೆಕಾಯಿ ನಿಮ್ಮ ಹೊಟ್ಟೆಗೂ ನಾಲಿಗೆಗೂ ಹಿತಕಾರಿಯಾಗಿರುವಂಥದ್ದು.
ತೆಳ್ಳಗೆ-ಬೆಳ್ಳಗಿನ ನೀರು ದೋಸೆ
ಪ್ರಮಾಣ: 4
ಸಿದ್ಧತಾ ಸಮಯ: 10 ನಿಮಿಷಗಳು
ಅಡುಗೆಗೆ ಬೇಕಾದ ಸಮಯ: 15 ನಿಮಿಷಗಳು
ಸಾಮಾಗ್ರಿಗಳು
*ಬಾಳೆಕಾಯಿ -2
*ಹಸಿಮೆಣಸು - 2-3
*ಕೊತ್ತಂಬರಿ ಸೊಪ್ಪು - 3-4
*ಮೊಸರು - 2 ಕಪ್
*ತುರಿದ ತೆಂಗಿನಕಾಯಿ - 2-3 ಚಮಚ
*ಉಪ್ಪು- ರುಚಿಗೆ ತಕ್ಕಷ್ಟು
*ಸಾಸಿವೆ - 1 ಚಮಚ
*ಜೀರಿಗೆ - 1/2 ಚಮಚ
*ಸ್ವಲ್ಪ ಇಂಗಿನ ಪುಡಿ
*ಕರಿಬೇವಿನೆಲೆ - 5-6
*ಕೆಂಪು ಮೆಣಸು - 1-2
*ಎಣ್ಣೆ - 1 ಚಮಚ
ಮಾಡುವ ವಿಧಾನ
*ಉಪ್ಪು ಮತ್ತು ಸಾಕಷ್ಟು ನೀರು ಹಾಕಿ ಕುಕ್ಕರ್ನಲ್ಲಿ ಬಾಳೆಕಾಯಿಯನ್ನು ಬೇಯಿಸಿಕೊಳ್ಳಿ.
*ಕುಕ್ಕರ್ ತಣ್ಣಗಾದ ನಂತರ, ಬೇಯಿಸಿದ ಬಾಳೆಕಾಯಿಯ ಸಿಪ್ಪೆಯನ್ನು ತೆಗೆಯಿರಿ. ನಂತರ ಚೆನ್ನಾಗಿ ಅದನ್ನು ಹಿಸುಕಿಕೊಳ್ಳಿ. ತೆಂಗಿನ ತುರಿಯನ್ನು ನುಣ್ಣಗೆ ಪೇಸ್ಟ್ನಂತೆ ರುಬ್ಬಿಕೊಳ್ಳಿ. ತದನಂತರ ಹಸಿಮೆಣಸನ್ನು ಮತ್ತು ಕರಿಬೇವಿನೆಲೆಯನ್ನು ಜೊತೆಯಾಗಿ ರುಬ್ಬಿಕೊಳ್ಳಿ.
*ಇನ್ನು ಈ ಮಿಶ್ರಣಕ್ಕೆ ಮೊಸರನ್ನು ಸೇರಿಸಿ
*ಪಾತ್ರೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ ಅದು ಬಿಸಿಯಾದೊಡನೆ ಸಾಸಿವೆ, ಜೀರಿಗೆ, ಕೆಂಪು ಮೆಣಸನ್ನು ಹಾಕಿ ಒಗ್ಗರಣೆ ತಯಾರು ಮಾಡಿಕೊಳ್ಳಿ. ಇದಕ್ಕೆ ಸ್ವಲ್ಪ ಇಂಗಿನ ಪುಡಿ ಹಾಗೂ ಕೊತ್ತಂಬರಿ ಸೊಪ್ಪನ್ನು ಸೇರಿಸಿ ಒಗ್ಗರಣೆ ಮಾಡಿ ಚೆನ್ನಾಗಿ ಮಿಶ್ರ ಮಾಡಿ.



Click it and Unblock the Notifications