Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಶುಗರ್ ಇರುವವರು ಸೇವಿಸಲೇಬೇಕಾದ ಅಡುಗೆ ನೆಲನೆಲ್ಲಿ ತಂಬಳಿ
ನೆಲ್ಲಿಕಾಯಿ ಎಲ್ಲರಿಗೂ ಗೊತ್ತು.ನೆಲ್ಲಿಕಾಯಿ ಮರದಲ್ಲಿ ಬಿಡುತ್ತೆ. ಇದೀಗ ನೆಲ್ಲಿ ಮರವನ್ನು ಒಂದು ಸಣ್ಣ ಕಳೆ ಸಸ್ಯದಂತೆ ಊಹಿಸಿಕೊಳ್ಳಿ. ಎಸ್.. ಅದುವೇ ನೆಲನೆಲ್ಲಿ ಗಿಡ.
ಗಿಡದ ಎಲೆಗಳು ಮುಟ್ಟಿದರೆ ಮುನಿ ಎಲೆಗಳಂತೆ. ಆದರೆ ಆ ಎಲೆಗಳ ಕೆಳಗೆ ಸಣ್ಣಸಣ್ಣ ನೆಲ್ಲಿಕಾಯಿ ಇರುತ್ತದೆ. ಕಳೆಯಂತೆ ಹುಟ್ಟಿಕೊಳ್ಳುವ ಈ ಸಸ್ಯ ನಿಮ್ಮ ದೇಹಕ್ಕೆ ಆರೋಗ್ಯ ಒದಗಿಸುವ ಸಸ್ಯ ಸಂಕುಲಗಳಲ್ಲಿ ಒಂದು.

ನೆಲನೆಲ್ಲಿಯನ್ನು ಕಿರುನೆಲ್ಲಿ ಎಂದೂ ಕೂಡ ಕರೆಯಲಾಗುತ್ತದೆ.ಯುಫೋರ್ಬಿಯೇಸಿ ಕುಟುಂಬಕ್ಕೆ ಸೇರಿರುವ ಈ ಸಸ್ಯ ಸಾಸಿವೆ ಗಾತ್ರದ ಚಿಕ್ಕಚಿಕ್ಕ ಕಾಯಿಗಳನ್ನ ಎಲೆಯ ಹಿಂಭಾಗದಲ್ಲಿ ಹೊಂದಿರುತ್ತದೆ.
ಇದನ್ನು ಬೇರೆಬೇರೆ ಭಾಷೆಗಳಲ್ಲಿ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ.

ಸಂಸ್ಕೃತ-ಭೂಮ್ಯಾಮಲಕಿ,ಶಿವಾ,ಬಹುಪತ್ರಾ,ಬಹುಫಲಾ,ಭೂಯಿಆಂವಲಾ,ತಾಮಲಕಿ
ಹಿಂದಿ-ಜರಾಮ್ಲ,ಭೂಯಿಆಮಲಾ
ಮರಾಠಿ-ಭೂಯಿ ಆಂಬಲಿ,ಭೂಯಿ ಆಂವ್ಲಾ
ತಮಿಳು-ಕಿಝಕಾಯ್ ನೆಲ್ಲಿ
ತೆಲುಗು-ನೆಲ ಉಸಸೀರಿಕೆ
ಮಲಯಾಳಂ-ಕಿಳಾನೆಲ್ಲಿ
ವೈಜ್ಞಾನಿಕ ಹೆಸರು-Phyllanthus amaras

ನೆಲನೆಲ್ಲಿ ಸೊಪ್ಪಿನಿಂದ ತಂಬಳಿ ತಯಾರಿಸುವುದು ಹೇಗೆ ಎಂಬ ಬಗ್ಗೆ ನಾವಿಲ್ಲಿ ನಿಮಗೆ ತಿಳಿಸಿಕೊಡುತ್ತಿದ್ದೇವೆ.
Recipe By: Sushma Chatra
Recipe Type: Chutney
Serves: 4
-
ಬೇಕಾಗುವ ಸಾಮಗ್ರಿಗಳು
ನೆಲನೆಲ್ಲಿ ಸೊಪ್ಪು - ಒಂದು ಬೌಲ್
ಜೀರಿಗೆ- ಒಂದು ಸ್ಪೂನ್
ಕಾಳುಮೆಣಸು- ನಾಲ್ಕು
ಉಪ್ಪು- ರುಚಿಗೆ ತಕ್ಕಷ್ಟು
ಸಾಸಿವೆ- ಅರ್ಧ ಸ್ಪೂನ್
ತುಪ್ಪ- ಎರಡು ಸ್ಪೂನ್
ಮಜ್ಜಿಗೆ- ಕಾಲ್ಲೀಟರ್
ಬೆಲ್ಲ - ಒಂದೆರಡು ಗೋಲಿ ಗಾತ್ರ
ಬ್ಯಾಡಗಿ ಮೆಣಸು - ಒಂದುಕಾಯಿತುರಿ- ಅರ್ಧ ಬೌಲ್
-
ಮಾಡುವ ವಿಧಾನ
. ನೆಲನೆಲ್ಲಿ ಸೊಪ್ಪನ್ನ ಬಾಣಲೆಯಲ್ಲಿ ಹಾಕಿ ಸ್ವಲ್ಪ ಹುರಿದುಕೊಳ್ಳಿ.
. ಇದಕ್ಕೆ ಕಾಯಿತುರಿ, ಅರ್ಧ ಸ್ಪೂನ್ ಜೀರಿಗೆ, ಕಾಳುಮೆಣಸು ಸೇರಿಸಿ ಎರಡು ಲೋಟ ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು ನೀರು ಸೇರಿಸಿ ರುಬ್ಬಿಕೊಳ್ಳಿ.
. ರುಬ್ಬಿದ ಮಿಶ್ರಣವನ್ನು ಜರಡಿ ಹಿಡಿದು ರಸವನ್ನು ಬೇರ್ಪಡಿಸಿ.
.ಈ ರಸಕ್ಕೆ ಉಪ್ಪು,ಬೆಲ್ಲ, ಮಜ್ಜಿಗೆ ಸೇರಿಸಿ.
. ನಂತರ ತುಪ್ಪದಲ್ಲಿ ಸಾಸಿವೆ ಚಟಿಪಟಿ ಮಾಡಿ, ಸ್ವಲ್ಪ ಜೀರಿಗೆ ಹಾಕಿ ಬ್ಯಾಡಗಿ ಮೆಣಸಿನ ಒಗ್ಗರಣೆ ಕೊಟ್ಟರೆ ನೆಲನೆಲ್ಲಿ ತಂಬಳಿ ಸವಿಯಲು ಸಿದ್ಧ.
- ನೆಲನೆಲ್ಲಿ ಸೇವನೆಯಿಂದ ಕಾಮಾಲೆ ರೋಗ ನಿವಾರಣೆಯಾಗುತ್ತೆ ಎನ್ನಲಾಗುತ್ತದೆ. ದೇಹದ ರೋಗ ನಿರೋಧಕ ಶಕ್ತಿಯನ್ನು ಇದು ಹೆಚ್ಚಿಸುತ್ತದೆ.ಗಾಯಗಳ ನಿವಾರಣೆಗೆ ಇದು ಉಪಯೋಗಕಾರಿ.ಚರ್ಮರೋಗವನ್ನು ನಿವಾರಿಸುವ ಸಾಮರ್ಥ್ಯ ಇದಕ್ಕಿದೆ. ಅಜೀರ್ಣ ಹೊಟ್ಟೆನೋವು ಸಮಸ್ಯೆ ನಿವಾರಿಸುತ್ತದೆ. ಹೆಪಟೈಟಿಸ್ ಬಿ ಸಮಸ್ಯೆಗೂ ಕೂಡ ಪರಿಣಾಮಕಾರಿ. ಕಿಡ್ನಿ ಸ್ಟೋನ್ ಆಗದಂತೆ ತಡೆಯುವ ಶಕ್ತಿ ಇದಕ್ಕಿದೆ.
- ಸರ್ವ್ - 4
- ಕ್ಯಾಲೋರಿ - 150 cal
- ನಾರಿನಂಶ - 20ಗ್ರಾಂ



Click it and Unblock the Notifications