Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
ಇಡ್ಲಿ ಜೊತೆಗೆ ಘಮ್ಮೆನ್ನುವ ಉಡುಪಿ ಸಾಂಬಾರು

ಶುಚಿರುಚಿಯಾದ ಅಡುಗೆಗೆ ಉಡುಪಿಯವರು ಫೇಮಸ್ಸು. ಆದ್ದರಿಂದಲೇ ಉಡುಪಿ ಭಟ್ಟರು ಭಾರತದ ಯಾವುದೇ ಮೂಲೆಯಲ್ಲಿ ಹೋಗಿ ಹೋಟೆಲ್ ಪ್ರಾರಂಭಿಸಿದರೂ ಬಿಸಿನೆಸ್ ಚೆನ್ನಾಗಿ ಆಗತ್ತೆ. ಅವರಿಗೆ ಶುಭಕೋರುತ್ತ, ಇವತ್ತು, ಗುರುವಾರ ನಾವುಗಳು ಉಡುಪಿ ಬ್ರಾಹ್ಮಣರ ಬ್ರಾಂಡೆಡ್ ಪದಾರ್ಥ ಸಾಂಬಾರು ತಯಾರಿಸುವ ವಿಧಾನದ ಬಗ್ಗೆ ತಿಳಿಯೋಣ.
ಬೇಕಾಗುವ ಸಾಮಾಗ್ರಿಗಳು:
* ಸಾಂಬಾರು ಮಾಡಲು ಬಳಸುವ ಬೇಳೆ 1/2 ಕಪ್
* ಎಣ್ಣೆ (ಸಾರಿಗೆ ಬೇಕಾದಷ್ಟು)
* ಮೆಂತೆ 1/2 ಚಮಚ
* ಉದ್ದಿನ ಬೇಳೆ 1 ಚಮಚ
* ಒಣ ಕೆಂಪು ಮೆಣಸಿನ ಕಾಯಿ
* ಕೊತ್ತಂಬರಿ ಬೀಜ 1 ಚಮಚ
* ಜೀರಿಗೆ 1/2 ಚಮಚ
* ಕರಿಬೇವಿನ ಎಲೆ ಸ್ವಲ್ಪ
* ತುರಿದ ತೆಂಗಿನಕಾಯಿ 1/2 ಕಪ್
* ಚಿಕ್ಕ ಈರುಳ್ಳಿ ಒಂದು ಹಿಡಿಯಷ್ಟು
* ಹಸಿ ಮೆಣಸು 2
* ಸಾಸಿವೆ 1/2 ಚಮಚ
* ಮೆಂತೆ 1/4 ಚಮಚ
* ಹುಳಿ (ರುಚಿಗೆ ತಕ್ಕಷ್ಟು)
* ಉಪ್ಪು ರುಚಿಗೆ ತಕ್ಕಷ್ಟು
* ಪುಡಿ ಮಾಡಿದ ಬೆಲ್ಲ 1 ಚಮಚ
ತಯಾರಿಸುವ ವಿಧಾನ:
1. ಬೇಳೆಯನ್ನು ಚೆನ್ನಾಗಿ ಬೇಯಿಸಿ ಸೌಟ್ ನಿಂದ ಅದನ್ನು ಚೆನ್ನಾಗಿ ಹಿಸುಕಬೇಕು.
2. ಒಂದು ಚಮಚ ಕಡಲೆಣ್ಣೆ ಅಥವಾ ಸನ್ ಫ್ಲವರ್ ಅನ್ನು ಬಾಣಲೆಗೆ ಹಾಕಿ ಮೆಂತೆ ಮತ್ತು ಉದ್ದಿನ ಬೇಳೆ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ನಂತರ ಅದನ್ನು ಒಂದು ಪಾತ್ರೆಯಲ್ಲಿ ಹಾಕಬೇಕು.
3. ಈಗ ಒಣಮೆಣಸಿನ ಕಾಯಿ ಮತ್ತು ಕೊತ್ತಂಬರಿ ಬೀಜನ್ನು ಬಾಣಲೆಯಲ್ಲಿ ಹಾಕಿ ಹುರಿಯಬೇಕು. ನಂತರ ಅದಕ್ಕೆ ಕರಿಬೇವಿನ ಎಲೆ ಮತ್ತು ತುರಿದ ತೆಂಗಿನಕಾಯಿ ಹಾಕಬೇಕು. ತೆಂಗಿನಕಾಯಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
4. ನಂತರ ಹುರಿದ ಈ ಮೇಲಿನ ಮಿಶ್ರಣವನ್ನು ಸ್ವಲ್ಪ ನೀರು ಹಾಕಿ ಮಿಕ್ಸಿಯಲ್ಲಿ ಅರಿದು ಪಕ್ಕದಲ್ಲಿಡಿ.
5. ಈರುಳ್ಳಿಯ ಸಿಪ್ಪೆ ಸುಲಿದು ಕತ್ತರಿಸಿಡಬೇಕು.
6. ದೊಡ್ಡ ಬಾಣಲೆಯಲ್ಲಿ ಒಂದು ಚಮಚ ಎಣ್ಣೆ ಹಾಕಿ ಅದರಲ್ಲಿ ಸಾಸಿವೆಯನ್ನು ಹಾಕಬೇಕು.
7. ಸಾಸಿವೆ ಚಿಟಾಪಟಾ ಶಬ್ದ ಬರುವಾಗ 1/2 ಚಮಚ ಉದ್ದಿನ ಬೇಳೆ ಮತ್ತು ಇಂಗು ಸೇರಿಸಬೇಕು.
8. ಈಗ ಈರುಳ್ಳಿ, ಹಸಿಮೆಣಸು ಮತ್ತು ಕರಿಬೇವಿನ ಎಲೆಯನ್ನು ಸೇರಿಸಬೇಕು.
9. ಟೊಮೆಟೊ ಮತ್ತು ಇತರ ತರಕಾರಿಯನ್ನು ಬೇಕಾದರೆ ಬೇಕಾದರೆ ಸೇರಿಸಬಹುದು.
10. ನಂತರ ಇವುಗಳನ್ನು ಟೊಮೆಟೊ ಮೆತ್ತೆಗಾಗುವರೆಗೂ ಹುರಿಯಬೇಕು. ನಂತರ ಸ್ವಲ್ಪ ನೀರು ಸೇರಿಸಿ ತರಕಾರಿಯನ್ನು ಬೇಯಿಸಬೇಕು.
11. ಹುಣಸೆ ಹುಳಿಯನ್ನು ಚಿಕ್ಕ ಪಾತ್ರೆಯಲ್ಲಿ ನೀರು ತೆಗೆದು ಅದರಲ್ಲಿ ಕಲೆಸಿ ಅದನ್ನು ತರಕಾರಿ ಮಿಶ್ರಣಕ್ಕೆ ಸೇರಿಸಬೇಕು.
12. ನಂತರ ಆ ಮಿಶ್ರಣವನ್ನು ಕುದಿಸಬೇಕು.
13. ಈಗ ರುಚಿಗೆ ತಕ್ಕ ಉಪ್ಪು ಮತ್ತು ಬೆಲ್ಲವನ್ನು ಸೇರಿಸಿ ಚೆನ್ನಾಗಿ ಕುದಿಸಬೇಕು.
14. ಈಗ ಬೇಯಿಸಿ ಸೌಟ್ ನಿಂದ ಚೆನ್ನಾಗಿ ಹಿಸುಕಿದ ಬೇಳೆ ಮತ್ತು ಮಸಾಲೆಯನ್ನು ತರಕಾರಿ ಮಿಶ್ರಣಕ್ಕೆ ಸೇರಿಸಿ ಉಪ್ಪು ಸಾಲದಿದ್ದರೆ ಸ್ವಲ್ಪ ಉಪ್ಪು ಹಾಕಿ. ಗಟ್ಟಿ ಸಾಂಬಾರು ಬೇಡ ಅಂದರೆ ಸ್ವಲ್ಪ ನೀರು ಸೇರಿಸಿ ಕುದಿಸಿದರೆ ಸಾಂಬಾರುರೆಡಿ.
ಈ ಸಾಂಬಾರನ್ನು ದೋಸೆ, ಇಡ್ಲಿ ಮತ್ತು ಅನ್ನದ ಜೊತೆ ತಿನ್ನಲು ತುಂಬಾ ರುಚಿರವಾಗಿರುತ್ತದೆ.
(ತರಕಾರಿಗಳಾಗಿ ಕುಂಬಳಕಾಯಿ, ಸೌತೆಕಾಯಿ, ಬೆಂಡೆಕಾಯಿ, ಬದನೆಕಾಯಿ, ನುಗ್ಗೆ ಕಾಯಿ, ಸೇರಿಸಬಹುದು)



Click it and Unblock the Notifications