Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೊಳಕೆ ಹುರುಳಿಕಾಳು ಮತ್ತು ದಂಟಿನಸೊಪ್ಪಿನ ಬಸ್ಸಾರು

ಬೇಕಾಗುವ ಸಾಮಾಗ್ರಿಗಳು:
ಮೊಳಕೆ ಹುರುಳಿಕಾಳು - ಒಂದು ಬಟ್ಟಲು
ಹಸಿರು / ಕೆಂಪು ದಂಟಿನಸೊಪ್ಪು
ಈರುಳ್ಳಿ ಒಂದು
ಬೆಳ್ಳುಳ್ಳಿ
ಜೀರಿಗೆ ಒಂದು ದೊಡ್ಡ ಚಮಚ
ಮೆಣಸು ಏಳೆಂಟು ಕಾಳು
ಅರಿಶಿಣ
ಹುಣಸೆಹಣ್ಣು ಅಥವಾ ಹುಣಸೆರಸ
ಅಚ್ಚಖಾರದ ಪುಡಿ
ಸಾಂಬಾರ್/ಸಾರಿನ ಪುಡಿ - ಅರ್ಧ ಚಮಚ
ಕೊತ್ತಂಬರಿ ಸೊಪ್ಪು
ಕರಿಬೇವಿನ ಸೊಪ್ಪು
ಹಸಿಮೆಣಸಿನಕಾಯಿ
ಉಪ್ಪು
ಎಣ್ಣೆ
ತಯಾರಿಸುವ ವಿಧಾನ :
ಮೊದಲು ಸೊಪ್ಪನ್ನು ಚೆನ್ನಾಗಿ ಬಿಡಿಸಿಕೊಂಡು, ತೊಳೆದು, ಸಣ್ಣಗೆ ಹೆಚ್ಚಿಕೊಳ್ಳಿ. ಕುಕ್ಕರ್ ನಲ್ಲಿ ನೀರು ಹಾಕಿ, ಅದಕ್ಕೆ ಮೊಳಕೆ ಹುರುಳಿಕಾಳುಗಳನ್ನು ಹಾಕಿ ಚೆನ್ನಾಗಿ ಬೇಯಿಸಿ, ಚಿಟಿಕೆ ಅರಿಶಿಣ ಮತ್ತು ಒಂದು ಚಮಚ ಎಣ್ಣೆಯನ್ನು ಹಾಕಿ, ಕಾಳು ಬೇಯಲು ಬಿಡಿ. ಹುರುಳಿಕಾಳು ಬೇಯುವುದು ನಿಧಾನ. ಅದಕ್ಕೆ ಅದನ್ನು ಒಂದು ಕೂಗು ಕುಕ್ಕರ್ ನಲ್ಲಿ ಬೇಯಿಸಿಕೊಳ್ಳಿ, ಬೆಂದ ನಂತರ ಅದಕ್ಕೆ ಹೆಚ್ಚಿಟ್ಟುಕೊಂಡಿರುವ ಸೊಪ್ಪನ್ನು ಹಾಕಿ ಜೊತೆಯಲ್ಲಿ ಸ್ವಲ್ಪ ಉಪ್ಪನ್ನು ಹಾಕಿ, ಸೊಪ್ಪು ಬೇಯುವವರೆಗೂ ಬೇಯಿಸಿ, ಕಾಳು ಕರಗದಂತೆ ಬೇಯಿಸಿಕೊಳ್ಳಿ. ನಂತರ ಹುರುಳಿಕಾಳು ಮತ್ತು ಸೊಪ್ಪಿನ ಮಿಶ್ರಣವನ್ನು ಜಾಲರಿಯಲ್ಲಿ ಸೋಸಿಕೊಂಡು, ಸೊಪ್ಪು-ಕಾಳಿನ ಕಟ್ಟು ಮತ್ತು ಸೊಪ್ಪುಕಾಳನ್ನು ಬೇರೆಬೇರೆಯಾಗಿ ತೆಗೆದಿಟ್ಟುಕೊಳ್ಳಿ.
ಸಾರಿಗೆ ರುಬ್ಬಿಕೊಳ್ಳಲು :
ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಒಂದೆರಡು ನಿಮಿಷ ಹುರಿದುಕೊಂಡು, ಅದಕ್ಕೆ ಒಂದೆರಡು ಚಮಚ ಬೇಯಿಸಿದ ಕಾಳು ಮತ್ತು ಸೊಪ್ಪಿನ ಮಿಶ್ರಣವನ್ನು, ಎರಡು ಚಮಚ ಕಾಯಿತುರಿ/ಕೊಬ್ರಿ, ಜೀರಿಗೆ, ಅಚ್ಚಖಾರದಪುಡಿ, ಮೆಣಸು, ಸಾರಿನಪುಡಿ, ಹುಣಸೆಹಣ್ಣು, ಕೊತ್ತಂಬರಿ ಸೊಪ್ಪು ಎಲ್ಲವನ್ನೂ ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಿ.
ಸಾರಿನ ಒಗ್ಗರಣೆಗೆ :
ಒಂದೆರಡು ಚಮಚ ಎಣ್ಣೆ ಹಾಕಿ, ಸಾಸಿವೆ ಮತ್ತು ಜೀರಿಗೆ ಹಾಕಿ, ಕರಿಬೇವು, ಇಂಗು ಮತ್ತು ಜಜ್ಜಿದ ಬೆಳ್ಳುಳ್ಳಿಯನ್ನು ಹಾಕಿ ಅದರ ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಒಂದು ನಿಮಿಷ ಕುದಿಸಿ, ಬಸಿದಿಟ್ಟುಕೊಂಡ ಸೊಪ್ಪುಕಾಳಿನಕಟ್ಟನ್ನು ಹಾಕಿ, ಚೆನ್ನಾಗಿ ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದೇ ಒಂದು ಕುದಿ ಬರಿಸಿ ಇಳಿಸಿ. ಹುರುಳಿಕಾಳುಸೊಪ್ಪಿನ ಬಸ್ಸಾರು ತಯಾರು. [ಅಡುಗೆ ಸವಿರುಚಿ]



Click it and Unblock the Notifications











