Latest Updates
-
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ?
ಮೊಳಕೆ ಹುರುಳಿಕಾಳು ಮತ್ತು ದಂಟಿನಸೊಪ್ಪಿನ ಬಸ್ಸಾರು

ಬೇಕಾಗುವ ಸಾಮಾಗ್ರಿಗಳು:
ಮೊಳಕೆ ಹುರುಳಿಕಾಳು - ಒಂದು ಬಟ್ಟಲು
ಹಸಿರು / ಕೆಂಪು ದಂಟಿನಸೊಪ್ಪು
ಈರುಳ್ಳಿ ಒಂದು
ಬೆಳ್ಳುಳ್ಳಿ
ಜೀರಿಗೆ ಒಂದು ದೊಡ್ಡ ಚಮಚ
ಮೆಣಸು ಏಳೆಂಟು ಕಾಳು
ಅರಿಶಿಣ
ಹುಣಸೆಹಣ್ಣು ಅಥವಾ ಹುಣಸೆರಸ
ಅಚ್ಚಖಾರದ ಪುಡಿ
ಸಾಂಬಾರ್/ಸಾರಿನ ಪುಡಿ - ಅರ್ಧ ಚಮಚ
ಕೊತ್ತಂಬರಿ ಸೊಪ್ಪು
ಕರಿಬೇವಿನ ಸೊಪ್ಪು
ಹಸಿಮೆಣಸಿನಕಾಯಿ
ಉಪ್ಪು
ಎಣ್ಣೆ
ತಯಾರಿಸುವ ವಿಧಾನ :
ಮೊದಲು ಸೊಪ್ಪನ್ನು ಚೆನ್ನಾಗಿ ಬಿಡಿಸಿಕೊಂಡು, ತೊಳೆದು, ಸಣ್ಣಗೆ ಹೆಚ್ಚಿಕೊಳ್ಳಿ. ಕುಕ್ಕರ್ ನಲ್ಲಿ ನೀರು ಹಾಕಿ, ಅದಕ್ಕೆ ಮೊಳಕೆ ಹುರುಳಿಕಾಳುಗಳನ್ನು ಹಾಕಿ ಚೆನ್ನಾಗಿ ಬೇಯಿಸಿ, ಚಿಟಿಕೆ ಅರಿಶಿಣ ಮತ್ತು ಒಂದು ಚಮಚ ಎಣ್ಣೆಯನ್ನು ಹಾಕಿ, ಕಾಳು ಬೇಯಲು ಬಿಡಿ. ಹುರುಳಿಕಾಳು ಬೇಯುವುದು ನಿಧಾನ. ಅದಕ್ಕೆ ಅದನ್ನು ಒಂದು ಕೂಗು ಕುಕ್ಕರ್ ನಲ್ಲಿ ಬೇಯಿಸಿಕೊಳ್ಳಿ, ಬೆಂದ ನಂತರ ಅದಕ್ಕೆ ಹೆಚ್ಚಿಟ್ಟುಕೊಂಡಿರುವ ಸೊಪ್ಪನ್ನು ಹಾಕಿ ಜೊತೆಯಲ್ಲಿ ಸ್ವಲ್ಪ ಉಪ್ಪನ್ನು ಹಾಕಿ, ಸೊಪ್ಪು ಬೇಯುವವರೆಗೂ ಬೇಯಿಸಿ, ಕಾಳು ಕರಗದಂತೆ ಬೇಯಿಸಿಕೊಳ್ಳಿ. ನಂತರ ಹುರುಳಿಕಾಳು ಮತ್ತು ಸೊಪ್ಪಿನ ಮಿಶ್ರಣವನ್ನು ಜಾಲರಿಯಲ್ಲಿ ಸೋಸಿಕೊಂಡು, ಸೊಪ್ಪು-ಕಾಳಿನ ಕಟ್ಟು ಮತ್ತು ಸೊಪ್ಪುಕಾಳನ್ನು ಬೇರೆಬೇರೆಯಾಗಿ ತೆಗೆದಿಟ್ಟುಕೊಳ್ಳಿ.
ಸಾರಿಗೆ ರುಬ್ಬಿಕೊಳ್ಳಲು :
ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಒಂದೆರಡು ನಿಮಿಷ ಹುರಿದುಕೊಂಡು, ಅದಕ್ಕೆ ಒಂದೆರಡು ಚಮಚ ಬೇಯಿಸಿದ ಕಾಳು ಮತ್ತು ಸೊಪ್ಪಿನ ಮಿಶ್ರಣವನ್ನು, ಎರಡು ಚಮಚ ಕಾಯಿತುರಿ/ಕೊಬ್ರಿ, ಜೀರಿಗೆ, ಅಚ್ಚಖಾರದಪುಡಿ, ಮೆಣಸು, ಸಾರಿನಪುಡಿ, ಹುಣಸೆಹಣ್ಣು, ಕೊತ್ತಂಬರಿ ಸೊಪ್ಪು ಎಲ್ಲವನ್ನೂ ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಿ.
ಸಾರಿನ ಒಗ್ಗರಣೆಗೆ :
ಒಂದೆರಡು ಚಮಚ ಎಣ್ಣೆ ಹಾಕಿ, ಸಾಸಿವೆ ಮತ್ತು ಜೀರಿಗೆ ಹಾಕಿ, ಕರಿಬೇವು, ಇಂಗು ಮತ್ತು ಜಜ್ಜಿದ ಬೆಳ್ಳುಳ್ಳಿಯನ್ನು ಹಾಕಿ ಅದರ ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಒಂದು ನಿಮಿಷ ಕುದಿಸಿ, ಬಸಿದಿಟ್ಟುಕೊಂಡ ಸೊಪ್ಪುಕಾಳಿನಕಟ್ಟನ್ನು ಹಾಕಿ, ಚೆನ್ನಾಗಿ ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದೇ ಒಂದು ಕುದಿ ಬರಿಸಿ ಇಳಿಸಿ. ಹುರುಳಿಕಾಳುಸೊಪ್ಪಿನ ಬಸ್ಸಾರು ತಯಾರು. [ಅಡುಗೆ ಸವಿರುಚಿ]



Click it and Unblock the Notifications