Latest Updates
-
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ!
ಮೊಳಕೆ ಹುರುಳಿಕಾಳು ಮತ್ತು ದಂಟಿನಸೊಪ್ಪಿನ ಬಸ್ಸಾರು

ಬೇಕಾಗುವ ಸಾಮಾಗ್ರಿಗಳು:
ಮೊಳಕೆ ಹುರುಳಿಕಾಳು - ಒಂದು ಬಟ್ಟಲು
ಹಸಿರು / ಕೆಂಪು ದಂಟಿನಸೊಪ್ಪು
ಈರುಳ್ಳಿ ಒಂದು
ಬೆಳ್ಳುಳ್ಳಿ
ಜೀರಿಗೆ ಒಂದು ದೊಡ್ಡ ಚಮಚ
ಮೆಣಸು ಏಳೆಂಟು ಕಾಳು
ಅರಿಶಿಣ
ಹುಣಸೆಹಣ್ಣು ಅಥವಾ ಹುಣಸೆರಸ
ಅಚ್ಚಖಾರದ ಪುಡಿ
ಸಾಂಬಾರ್/ಸಾರಿನ ಪುಡಿ - ಅರ್ಧ ಚಮಚ
ಕೊತ್ತಂಬರಿ ಸೊಪ್ಪು
ಕರಿಬೇವಿನ ಸೊಪ್ಪು
ಹಸಿಮೆಣಸಿನಕಾಯಿ
ಉಪ್ಪು
ಎಣ್ಣೆ
ತಯಾರಿಸುವ ವಿಧಾನ :
ಮೊದಲು ಸೊಪ್ಪನ್ನು ಚೆನ್ನಾಗಿ ಬಿಡಿಸಿಕೊಂಡು, ತೊಳೆದು, ಸಣ್ಣಗೆ ಹೆಚ್ಚಿಕೊಳ್ಳಿ. ಕುಕ್ಕರ್ ನಲ್ಲಿ ನೀರು ಹಾಕಿ, ಅದಕ್ಕೆ ಮೊಳಕೆ ಹುರುಳಿಕಾಳುಗಳನ್ನು ಹಾಕಿ ಚೆನ್ನಾಗಿ ಬೇಯಿಸಿ, ಚಿಟಿಕೆ ಅರಿಶಿಣ ಮತ್ತು ಒಂದು ಚಮಚ ಎಣ್ಣೆಯನ್ನು ಹಾಕಿ, ಕಾಳು ಬೇಯಲು ಬಿಡಿ. ಹುರುಳಿಕಾಳು ಬೇಯುವುದು ನಿಧಾನ. ಅದಕ್ಕೆ ಅದನ್ನು ಒಂದು ಕೂಗು ಕುಕ್ಕರ್ ನಲ್ಲಿ ಬೇಯಿಸಿಕೊಳ್ಳಿ, ಬೆಂದ ನಂತರ ಅದಕ್ಕೆ ಹೆಚ್ಚಿಟ್ಟುಕೊಂಡಿರುವ ಸೊಪ್ಪನ್ನು ಹಾಕಿ ಜೊತೆಯಲ್ಲಿ ಸ್ವಲ್ಪ ಉಪ್ಪನ್ನು ಹಾಕಿ, ಸೊಪ್ಪು ಬೇಯುವವರೆಗೂ ಬೇಯಿಸಿ, ಕಾಳು ಕರಗದಂತೆ ಬೇಯಿಸಿಕೊಳ್ಳಿ. ನಂತರ ಹುರುಳಿಕಾಳು ಮತ್ತು ಸೊಪ್ಪಿನ ಮಿಶ್ರಣವನ್ನು ಜಾಲರಿಯಲ್ಲಿ ಸೋಸಿಕೊಂಡು, ಸೊಪ್ಪು-ಕಾಳಿನ ಕಟ್ಟು ಮತ್ತು ಸೊಪ್ಪುಕಾಳನ್ನು ಬೇರೆಬೇರೆಯಾಗಿ ತೆಗೆದಿಟ್ಟುಕೊಳ್ಳಿ.
ಸಾರಿಗೆ ರುಬ್ಬಿಕೊಳ್ಳಲು :
ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಒಂದೆರಡು ನಿಮಿಷ ಹುರಿದುಕೊಂಡು, ಅದಕ್ಕೆ ಒಂದೆರಡು ಚಮಚ ಬೇಯಿಸಿದ ಕಾಳು ಮತ್ತು ಸೊಪ್ಪಿನ ಮಿಶ್ರಣವನ್ನು, ಎರಡು ಚಮಚ ಕಾಯಿತುರಿ/ಕೊಬ್ರಿ, ಜೀರಿಗೆ, ಅಚ್ಚಖಾರದಪುಡಿ, ಮೆಣಸು, ಸಾರಿನಪುಡಿ, ಹುಣಸೆಹಣ್ಣು, ಕೊತ್ತಂಬರಿ ಸೊಪ್ಪು ಎಲ್ಲವನ್ನೂ ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಿ.
ಸಾರಿನ ಒಗ್ಗರಣೆಗೆ :
ಒಂದೆರಡು ಚಮಚ ಎಣ್ಣೆ ಹಾಕಿ, ಸಾಸಿವೆ ಮತ್ತು ಜೀರಿಗೆ ಹಾಕಿ, ಕರಿಬೇವು, ಇಂಗು ಮತ್ತು ಜಜ್ಜಿದ ಬೆಳ್ಳುಳ್ಳಿಯನ್ನು ಹಾಕಿ ಅದರ ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಒಂದು ನಿಮಿಷ ಕುದಿಸಿ, ಬಸಿದಿಟ್ಟುಕೊಂಡ ಸೊಪ್ಪುಕಾಳಿನಕಟ್ಟನ್ನು ಹಾಕಿ, ಚೆನ್ನಾಗಿ ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದೇ ಒಂದು ಕುದಿ ಬರಿಸಿ ಇಳಿಸಿ. ಹುರುಳಿಕಾಳುಸೊಪ್ಪಿನ ಬಸ್ಸಾರು ತಯಾರು. [ಅಡುಗೆ ಸವಿರುಚಿ]



Click it and Unblock the Notifications
