Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ಮೊಳಕೆ ಹುರುಳಿಕಾಳು ಮತ್ತು ದಂಟಿನಸೊಪ್ಪಿನ ಬಸ್ಸಾರು

ಬೇಕಾಗುವ ಸಾಮಾಗ್ರಿಗಳು:
ಮೊಳಕೆ ಹುರುಳಿಕಾಳು - ಒಂದು ಬಟ್ಟಲು
ಹಸಿರು / ಕೆಂಪು ದಂಟಿನಸೊಪ್ಪು
ಈರುಳ್ಳಿ ಒಂದು
ಬೆಳ್ಳುಳ್ಳಿ
ಜೀರಿಗೆ ಒಂದು ದೊಡ್ಡ ಚಮಚ
ಮೆಣಸು ಏಳೆಂಟು ಕಾಳು
ಅರಿಶಿಣ
ಹುಣಸೆಹಣ್ಣು ಅಥವಾ ಹುಣಸೆರಸ
ಅಚ್ಚಖಾರದ ಪುಡಿ
ಸಾಂಬಾರ್/ಸಾರಿನ ಪುಡಿ - ಅರ್ಧ ಚಮಚ
ಕೊತ್ತಂಬರಿ ಸೊಪ್ಪು
ಕರಿಬೇವಿನ ಸೊಪ್ಪು
ಹಸಿಮೆಣಸಿನಕಾಯಿ
ಉಪ್ಪು
ಎಣ್ಣೆ
ತಯಾರಿಸುವ ವಿಧಾನ :
ಮೊದಲು ಸೊಪ್ಪನ್ನು ಚೆನ್ನಾಗಿ ಬಿಡಿಸಿಕೊಂಡು, ತೊಳೆದು, ಸಣ್ಣಗೆ ಹೆಚ್ಚಿಕೊಳ್ಳಿ. ಕುಕ್ಕರ್ ನಲ್ಲಿ ನೀರು ಹಾಕಿ, ಅದಕ್ಕೆ ಮೊಳಕೆ ಹುರುಳಿಕಾಳುಗಳನ್ನು ಹಾಕಿ ಚೆನ್ನಾಗಿ ಬೇಯಿಸಿ, ಚಿಟಿಕೆ ಅರಿಶಿಣ ಮತ್ತು ಒಂದು ಚಮಚ ಎಣ್ಣೆಯನ್ನು ಹಾಕಿ, ಕಾಳು ಬೇಯಲು ಬಿಡಿ. ಹುರುಳಿಕಾಳು ಬೇಯುವುದು ನಿಧಾನ. ಅದಕ್ಕೆ ಅದನ್ನು ಒಂದು ಕೂಗು ಕುಕ್ಕರ್ ನಲ್ಲಿ ಬೇಯಿಸಿಕೊಳ್ಳಿ, ಬೆಂದ ನಂತರ ಅದಕ್ಕೆ ಹೆಚ್ಚಿಟ್ಟುಕೊಂಡಿರುವ ಸೊಪ್ಪನ್ನು ಹಾಕಿ ಜೊತೆಯಲ್ಲಿ ಸ್ವಲ್ಪ ಉಪ್ಪನ್ನು ಹಾಕಿ, ಸೊಪ್ಪು ಬೇಯುವವರೆಗೂ ಬೇಯಿಸಿ, ಕಾಳು ಕರಗದಂತೆ ಬೇಯಿಸಿಕೊಳ್ಳಿ. ನಂತರ ಹುರುಳಿಕಾಳು ಮತ್ತು ಸೊಪ್ಪಿನ ಮಿಶ್ರಣವನ್ನು ಜಾಲರಿಯಲ್ಲಿ ಸೋಸಿಕೊಂಡು, ಸೊಪ್ಪು-ಕಾಳಿನ ಕಟ್ಟು ಮತ್ತು ಸೊಪ್ಪುಕಾಳನ್ನು ಬೇರೆಬೇರೆಯಾಗಿ ತೆಗೆದಿಟ್ಟುಕೊಳ್ಳಿ.
ಸಾರಿಗೆ ರುಬ್ಬಿಕೊಳ್ಳಲು :
ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಒಂದೆರಡು ನಿಮಿಷ ಹುರಿದುಕೊಂಡು, ಅದಕ್ಕೆ ಒಂದೆರಡು ಚಮಚ ಬೇಯಿಸಿದ ಕಾಳು ಮತ್ತು ಸೊಪ್ಪಿನ ಮಿಶ್ರಣವನ್ನು, ಎರಡು ಚಮಚ ಕಾಯಿತುರಿ/ಕೊಬ್ರಿ, ಜೀರಿಗೆ, ಅಚ್ಚಖಾರದಪುಡಿ, ಮೆಣಸು, ಸಾರಿನಪುಡಿ, ಹುಣಸೆಹಣ್ಣು, ಕೊತ್ತಂಬರಿ ಸೊಪ್ಪು ಎಲ್ಲವನ್ನೂ ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಿ.
ಸಾರಿನ ಒಗ್ಗರಣೆಗೆ :
ಒಂದೆರಡು ಚಮಚ ಎಣ್ಣೆ ಹಾಕಿ, ಸಾಸಿವೆ ಮತ್ತು ಜೀರಿಗೆ ಹಾಕಿ, ಕರಿಬೇವು, ಇಂಗು ಮತ್ತು ಜಜ್ಜಿದ ಬೆಳ್ಳುಳ್ಳಿಯನ್ನು ಹಾಕಿ ಅದರ ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಒಂದು ನಿಮಿಷ ಕುದಿಸಿ, ಬಸಿದಿಟ್ಟುಕೊಂಡ ಸೊಪ್ಪುಕಾಳಿನಕಟ್ಟನ್ನು ಹಾಕಿ, ಚೆನ್ನಾಗಿ ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದೇ ಒಂದು ಕುದಿ ಬರಿಸಿ ಇಳಿಸಿ. ಹುರುಳಿಕಾಳುಸೊಪ್ಪಿನ ಬಸ್ಸಾರು ತಯಾರು. [ಅಡುಗೆ ಸವಿರುಚಿ]



Click it and Unblock the Notifications