Latest Updates
-
ಬೆಂಗಳೂರು, ಕರಾವಳಿಯಲ್ಲಿ ಭಾರಿ ಮಳೆ: ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ರಾಜ ಪರ್ಬ 2026: ಮಹಿಳೆಯರಿಗೆ ವಿಶ್ರಾಂತಿ ನೀಡುವ ಈ ಹಬ್ಬದ ಆಚರಣೆ ಮತ್ತು ವಿಶೇಷತೆಗಳೇನು? -
ದೆಹಲಿ ಮಾಲಿನ್ಯದ ಆತಂಕ: ನಿಮ್ಮ ಮನೆಯನ್ನು ವಿಷಕಾರಿ ಗಾಳಿಯಿಂದ ರಕ್ಷಿಸಲು ಈ ಸರಳ ಕ್ರಮಗಳನ್ನು ಪಾಲಿಸಿ -
ಖರ್ಜೂರದಲ್ಲಿ ಹುಳುಗಳ ಆತಂಕ: ಆನ್ಲೈನ್ನಲ್ಲಿ ಆರ್ಡರ್ ಮಾಡುವ ಮುನ್ನ ಈ ತಪ್ಪು ಮಾಡಬೇಡಿ! -
ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ 2026: ಬಾರ್ಸಿಲೋನಾದಲ್ಲಿ ಇಂದು ಹೈ-ವೋಲ್ಟೇಜ್ ರೇಸ್, ಮಿಸ್ ಮಾಡ್ಬೇಡಿ! -
ರಕ್ತದಾನದ ನಂತರ ಜಿಮ್ಗೆ ಹೋಗುವ ಮುನ್ನ ಎಚ್ಚರ! ಈ ತಪ್ಪುಗಳನ್ನು ಮಾಡಬೇಡಿ -
ವೀಕೆಂಡ್ ಪ್ಲಾನ್ ಮಾಡಿದ್ದೀರಾ? ಹವಾಮಾನ ವೈಪರೀತ್ಯದ ಎಚ್ಚರಿಕೆ: ನಿಮ್ಮ ಸುರಕ್ಷತೆಗಾಗಿ ಈ ಬದಲಾವಣೆ ಮಾಡಿಕೊಳ್ಳಿ! -
ಮುಂಬೈ ಬಿಸಿಲು ಮತ್ತು ಆರ್ದ್ರತೆ: 15 ನಿಮಿಷದಲ್ಲಿ ನಿಮ್ಮ ಮನೆಯನ್ನು ತಂಪಾಗಿರಿಸುವ ಸರಳ ಉಪಾಯಗಳು! -
ನಿಮ್ಮ ಆಹಾರದ ಪ್ಯಾಕೆಟ್ನಲ್ಲಿ ಸ್ಟೇಪ್ಲರ್ ಪಿನ್ ಇದೆಯೇ? ಎಚ್ಚರ, FSSAI ಕಠಿಣ ಆದೇಶ! -
ಧರ್ಮಶಾಲಾದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಮಳೆ ಆತಂಕದ ನಡುವೆ ಗೆಲ್ಲೋರು ಯಾರು?
ಮೊಳಕೆ ಹುರುಳಿಕಾಳು ಮತ್ತು ದಂಟಿನಸೊಪ್ಪಿನ ಬಸ್ಸಾರು

ಬೇಕಾಗುವ ಸಾಮಾಗ್ರಿಗಳು:
ಮೊಳಕೆ ಹುರುಳಿಕಾಳು - ಒಂದು ಬಟ್ಟಲು
ಹಸಿರು / ಕೆಂಪು ದಂಟಿನಸೊಪ್ಪು
ಈರುಳ್ಳಿ ಒಂದು
ಬೆಳ್ಳುಳ್ಳಿ
ಜೀರಿಗೆ ಒಂದು ದೊಡ್ಡ ಚಮಚ
ಮೆಣಸು ಏಳೆಂಟು ಕಾಳು
ಅರಿಶಿಣ
ಹುಣಸೆಹಣ್ಣು ಅಥವಾ ಹುಣಸೆರಸ
ಅಚ್ಚಖಾರದ ಪುಡಿ
ಸಾಂಬಾರ್/ಸಾರಿನ ಪುಡಿ - ಅರ್ಧ ಚಮಚ
ಕೊತ್ತಂಬರಿ ಸೊಪ್ಪು
ಕರಿಬೇವಿನ ಸೊಪ್ಪು
ಹಸಿಮೆಣಸಿನಕಾಯಿ
ಉಪ್ಪು
ಎಣ್ಣೆ
ತಯಾರಿಸುವ ವಿಧಾನ :
ಮೊದಲು ಸೊಪ್ಪನ್ನು ಚೆನ್ನಾಗಿ ಬಿಡಿಸಿಕೊಂಡು, ತೊಳೆದು, ಸಣ್ಣಗೆ ಹೆಚ್ಚಿಕೊಳ್ಳಿ. ಕುಕ್ಕರ್ ನಲ್ಲಿ ನೀರು ಹಾಕಿ, ಅದಕ್ಕೆ ಮೊಳಕೆ ಹುರುಳಿಕಾಳುಗಳನ್ನು ಹಾಕಿ ಚೆನ್ನಾಗಿ ಬೇಯಿಸಿ, ಚಿಟಿಕೆ ಅರಿಶಿಣ ಮತ್ತು ಒಂದು ಚಮಚ ಎಣ್ಣೆಯನ್ನು ಹಾಕಿ, ಕಾಳು ಬೇಯಲು ಬಿಡಿ. ಹುರುಳಿಕಾಳು ಬೇಯುವುದು ನಿಧಾನ. ಅದಕ್ಕೆ ಅದನ್ನು ಒಂದು ಕೂಗು ಕುಕ್ಕರ್ ನಲ್ಲಿ ಬೇಯಿಸಿಕೊಳ್ಳಿ, ಬೆಂದ ನಂತರ ಅದಕ್ಕೆ ಹೆಚ್ಚಿಟ್ಟುಕೊಂಡಿರುವ ಸೊಪ್ಪನ್ನು ಹಾಕಿ ಜೊತೆಯಲ್ಲಿ ಸ್ವಲ್ಪ ಉಪ್ಪನ್ನು ಹಾಕಿ, ಸೊಪ್ಪು ಬೇಯುವವರೆಗೂ ಬೇಯಿಸಿ, ಕಾಳು ಕರಗದಂತೆ ಬೇಯಿಸಿಕೊಳ್ಳಿ. ನಂತರ ಹುರುಳಿಕಾಳು ಮತ್ತು ಸೊಪ್ಪಿನ ಮಿಶ್ರಣವನ್ನು ಜಾಲರಿಯಲ್ಲಿ ಸೋಸಿಕೊಂಡು, ಸೊಪ್ಪು-ಕಾಳಿನ ಕಟ್ಟು ಮತ್ತು ಸೊಪ್ಪುಕಾಳನ್ನು ಬೇರೆಬೇರೆಯಾಗಿ ತೆಗೆದಿಟ್ಟುಕೊಳ್ಳಿ.
ಸಾರಿಗೆ ರುಬ್ಬಿಕೊಳ್ಳಲು :
ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಒಂದೆರಡು ನಿಮಿಷ ಹುರಿದುಕೊಂಡು, ಅದಕ್ಕೆ ಒಂದೆರಡು ಚಮಚ ಬೇಯಿಸಿದ ಕಾಳು ಮತ್ತು ಸೊಪ್ಪಿನ ಮಿಶ್ರಣವನ್ನು, ಎರಡು ಚಮಚ ಕಾಯಿತುರಿ/ಕೊಬ್ರಿ, ಜೀರಿಗೆ, ಅಚ್ಚಖಾರದಪುಡಿ, ಮೆಣಸು, ಸಾರಿನಪುಡಿ, ಹುಣಸೆಹಣ್ಣು, ಕೊತ್ತಂಬರಿ ಸೊಪ್ಪು ಎಲ್ಲವನ್ನೂ ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಿ.
ಸಾರಿನ ಒಗ್ಗರಣೆಗೆ :
ಒಂದೆರಡು ಚಮಚ ಎಣ್ಣೆ ಹಾಕಿ, ಸಾಸಿವೆ ಮತ್ತು ಜೀರಿಗೆ ಹಾಕಿ, ಕರಿಬೇವು, ಇಂಗು ಮತ್ತು ಜಜ್ಜಿದ ಬೆಳ್ಳುಳ್ಳಿಯನ್ನು ಹಾಕಿ ಅದರ ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಒಂದು ನಿಮಿಷ ಕುದಿಸಿ, ಬಸಿದಿಟ್ಟುಕೊಂಡ ಸೊಪ್ಪುಕಾಳಿನಕಟ್ಟನ್ನು ಹಾಕಿ, ಚೆನ್ನಾಗಿ ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದೇ ಒಂದು ಕುದಿ ಬರಿಸಿ ಇಳಿಸಿ. ಹುರುಳಿಕಾಳುಸೊಪ್ಪಿನ ಬಸ್ಸಾರು ತಯಾರು. [ಅಡುಗೆ ಸವಿರುಚಿ]



Click it and Unblock the Notifications