Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಮೊಳಕೆ ಹುರುಳಿಕಾಳು ಮತ್ತು ದಂಟಿನಸೊಪ್ಪಿನ ಬಸ್ಸಾರು

ಬೇಕಾಗುವ ಸಾಮಾಗ್ರಿಗಳು:
ಮೊಳಕೆ ಹುರುಳಿಕಾಳು - ಒಂದು ಬಟ್ಟಲು
ಹಸಿರು / ಕೆಂಪು ದಂಟಿನಸೊಪ್ಪು
ಈರುಳ್ಳಿ ಒಂದು
ಬೆಳ್ಳುಳ್ಳಿ
ಜೀರಿಗೆ ಒಂದು ದೊಡ್ಡ ಚಮಚ
ಮೆಣಸು ಏಳೆಂಟು ಕಾಳು
ಅರಿಶಿಣ
ಹುಣಸೆಹಣ್ಣು ಅಥವಾ ಹುಣಸೆರಸ
ಅಚ್ಚಖಾರದ ಪುಡಿ
ಸಾಂಬಾರ್/ಸಾರಿನ ಪುಡಿ - ಅರ್ಧ ಚಮಚ
ಕೊತ್ತಂಬರಿ ಸೊಪ್ಪು
ಕರಿಬೇವಿನ ಸೊಪ್ಪು
ಹಸಿಮೆಣಸಿನಕಾಯಿ
ಉಪ್ಪು
ಎಣ್ಣೆ
ತಯಾರಿಸುವ ವಿಧಾನ :
ಮೊದಲು ಸೊಪ್ಪನ್ನು ಚೆನ್ನಾಗಿ ಬಿಡಿಸಿಕೊಂಡು, ತೊಳೆದು, ಸಣ್ಣಗೆ ಹೆಚ್ಚಿಕೊಳ್ಳಿ. ಕುಕ್ಕರ್ ನಲ್ಲಿ ನೀರು ಹಾಕಿ, ಅದಕ್ಕೆ ಮೊಳಕೆ ಹುರುಳಿಕಾಳುಗಳನ್ನು ಹಾಕಿ ಚೆನ್ನಾಗಿ ಬೇಯಿಸಿ, ಚಿಟಿಕೆ ಅರಿಶಿಣ ಮತ್ತು ಒಂದು ಚಮಚ ಎಣ್ಣೆಯನ್ನು ಹಾಕಿ, ಕಾಳು ಬೇಯಲು ಬಿಡಿ. ಹುರುಳಿಕಾಳು ಬೇಯುವುದು ನಿಧಾನ. ಅದಕ್ಕೆ ಅದನ್ನು ಒಂದು ಕೂಗು ಕುಕ್ಕರ್ ನಲ್ಲಿ ಬೇಯಿಸಿಕೊಳ್ಳಿ, ಬೆಂದ ನಂತರ ಅದಕ್ಕೆ ಹೆಚ್ಚಿಟ್ಟುಕೊಂಡಿರುವ ಸೊಪ್ಪನ್ನು ಹಾಕಿ ಜೊತೆಯಲ್ಲಿ ಸ್ವಲ್ಪ ಉಪ್ಪನ್ನು ಹಾಕಿ, ಸೊಪ್ಪು ಬೇಯುವವರೆಗೂ ಬೇಯಿಸಿ, ಕಾಳು ಕರಗದಂತೆ ಬೇಯಿಸಿಕೊಳ್ಳಿ. ನಂತರ ಹುರುಳಿಕಾಳು ಮತ್ತು ಸೊಪ್ಪಿನ ಮಿಶ್ರಣವನ್ನು ಜಾಲರಿಯಲ್ಲಿ ಸೋಸಿಕೊಂಡು, ಸೊಪ್ಪು-ಕಾಳಿನ ಕಟ್ಟು ಮತ್ತು ಸೊಪ್ಪುಕಾಳನ್ನು ಬೇರೆಬೇರೆಯಾಗಿ ತೆಗೆದಿಟ್ಟುಕೊಳ್ಳಿ.
ಸಾರಿಗೆ ರುಬ್ಬಿಕೊಳ್ಳಲು :
ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಒಂದೆರಡು ನಿಮಿಷ ಹುರಿದುಕೊಂಡು, ಅದಕ್ಕೆ ಒಂದೆರಡು ಚಮಚ ಬೇಯಿಸಿದ ಕಾಳು ಮತ್ತು ಸೊಪ್ಪಿನ ಮಿಶ್ರಣವನ್ನು, ಎರಡು ಚಮಚ ಕಾಯಿತುರಿ/ಕೊಬ್ರಿ, ಜೀರಿಗೆ, ಅಚ್ಚಖಾರದಪುಡಿ, ಮೆಣಸು, ಸಾರಿನಪುಡಿ, ಹುಣಸೆಹಣ್ಣು, ಕೊತ್ತಂಬರಿ ಸೊಪ್ಪು ಎಲ್ಲವನ್ನೂ ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಿ.
ಸಾರಿನ ಒಗ್ಗರಣೆಗೆ :
ಒಂದೆರಡು ಚಮಚ ಎಣ್ಣೆ ಹಾಕಿ, ಸಾಸಿವೆ ಮತ್ತು ಜೀರಿಗೆ ಹಾಕಿ, ಕರಿಬೇವು, ಇಂಗು ಮತ್ತು ಜಜ್ಜಿದ ಬೆಳ್ಳುಳ್ಳಿಯನ್ನು ಹಾಕಿ ಅದರ ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಒಂದು ನಿಮಿಷ ಕುದಿಸಿ, ಬಸಿದಿಟ್ಟುಕೊಂಡ ಸೊಪ್ಪುಕಾಳಿನಕಟ್ಟನ್ನು ಹಾಕಿ, ಚೆನ್ನಾಗಿ ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಒಂದೇ ಒಂದು ಕುದಿ ಬರಿಸಿ ಇಳಿಸಿ. ಹುರುಳಿಕಾಳುಸೊಪ್ಪಿನ ಬಸ್ಸಾರು ತಯಾರು. [ಅಡುಗೆ ಸವಿರುಚಿ]



Click it and Unblock the Notifications











