Latest Updates
-
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು!
ಇದು ಗುಜರಾತಿ ಶೈಲಿಯ ದಾಲ್ ಕರಿ

ಬೇಕಾಗುವ ಸಾಮಾಗ್ರಿಗಳು:
* 1 ಕಪ್ ಬೇಳೆ
* 1 ಚಮಚ ಸಾಸಿವೆ
* 1/2 ಚಮಚ ಜೀರಿಗೆ
* 1/2 ಚಮಚ ಅರಿಶಿಣ
* 2 ಚಮಚ ಕೊತ್ತಂಬರಿ ಪುಡಿ
* ಸ್ವಲ್ಪ ಕರಿ ಬೇವಿನ ಎಲೆ
* ಬೆಳ್ಳುಳ್ಳಿ 6-7 ಎಸಳು
* 1 ತುಂಡು ಡಾಲ್ಚಿನಿ (ಚಕ್ಕೆ)
* 1 ಚಿಟಿಕೆಯಷ್ಟು ಇಂಗು
* ರುಚಿಗೆ ತಕ್ಕ ಉಪ್ಪು
* 2 ಹಸಿ ಮೆಣಸಿನ ಕಾಯಿ
* ಸ್ವಲ್ಪ ಕೊತ್ತಂಬರಿ ಸೊಪ್ಪು
* 1/4 ಕಪ್ ಹುಣಸೆ ಹಣ್ಣಿನ ರಸ
* 1 ಚಮಚ ತುಪ್ಪ
ತಯಾರಿಸುವ ವಿಧಾನ:
1. ಬೇಳೆಯನ್ನು 1/2 ಗಂಟೆ ನೀರಿನಲ್ಲಿ ನೆನೆ ಹಾಕಬೇಕು.
2. ನಂತರ ಅದಕ್ಕೆ ಉಪ್ಪು ಮತ್ತು ಅರಿಶಿಣ, ನೀರು ಹಾಕಿ ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಬೇಕು.
3. ಚಕ್ಕೆ ಮತ್ತು ಬೆಳ್ಳುಳ್ಳಿಯನ್ನು ಜಜ್ಜ ಬೇಕು.
4. ಹಸಿಮೆಣಸಿನ ಕಾಯಿ ಮತ್ತು ಕೊತ್ತಂಬರಿ ಸೊಪ್ಪನ್ನು ಕತ್ತರಿಸಬೇಕು.
5. ಸಾರು ಪಾತ್ರೆಯನ್ನು ಬಿಸಿಮಾಡಿ ತುಪ್ಪ ಹಾಕಿ ಅದಕ್ಕೆ ಇಂಗು, ಜೀರಿಗೆ ಮತ್ತು ಸಾಸಿವೆಯನ್ನು ಹಾಕಬೇಕು.
6. ಸಾಸಿವೆ ಚಿಟಪಟ ಶಬ್ದ ಮಾಡುವಾಗ ಕರಿಬೇವಿನ ಎಲೆಯನ್ನು ಹಾಕಬೇಕು.
7. ಅದಕ್ಕೆ ಹಸಿಮೆಣಸಿನಕಾಯಿ ಮತ್ತು ಕೊತ್ತಂಬರಿ ಪುಡಿ ಹಾಕಿ ಮಿಶ್ರ ಮಾಡಿ.
8. ಈಗ ಜಜ್ಜಿದ ಬೆಳ್ಳುಳ್ಳಿ, ಚಕ್ಕೆಮತ್ತು ಬೇಯಿಸಿದ ಬೇಳೆಯನ್ನು ಸೇರಿಸಿ.
9. ಸ್ವಲ್ಪ ಹೊತ್ತು (5 ನಿಮಿಷ) ಕುದಿಸಿದ ನಂತರ ಹುಣಸೆ ಹಣ್ಣಿನ ರಸ ಹಾಗೂ ಸ್ವಲ್ಪ ಸಕ್ಕರೆ ಸೇರಿಸಿ 5 ನಿಮಿಷ ಕುದಿಸಿ. (ಉಪ್ಪು ಸಾಲದಿದ್ದರೆ ಇನ್ನೂ ಸ್ವಲ್ಪ ಹಾಕಿ).
10. ಈಗ ಕುದಿಯುತ್ತಿರುವ ಬೇಳೆ ಸಾರಿಗೆ ಕೊತ್ತಂಬರಿ ಸೊಪ್ಪು ಹಾಕಿದರೆ ಗುಜರಾತಿ ಶೈಲಿಯ ದಾಲ್ ಕರಿ ರೆಡಿ.



Click it and Unblock the Notifications











