Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಇದು ಗುಜರಾತಿ ಶೈಲಿಯ ದಾಲ್ ಕರಿ

ಬೇಕಾಗುವ ಸಾಮಾಗ್ರಿಗಳು:
* 1 ಕಪ್ ಬೇಳೆ
* 1 ಚಮಚ ಸಾಸಿವೆ
* 1/2 ಚಮಚ ಜೀರಿಗೆ
* 1/2 ಚಮಚ ಅರಿಶಿಣ
* 2 ಚಮಚ ಕೊತ್ತಂಬರಿ ಪುಡಿ
* ಸ್ವಲ್ಪ ಕರಿ ಬೇವಿನ ಎಲೆ
* ಬೆಳ್ಳುಳ್ಳಿ 6-7 ಎಸಳು
* 1 ತುಂಡು ಡಾಲ್ಚಿನಿ (ಚಕ್ಕೆ)
* 1 ಚಿಟಿಕೆಯಷ್ಟು ಇಂಗು
* ರುಚಿಗೆ ತಕ್ಕ ಉಪ್ಪು
* 2 ಹಸಿ ಮೆಣಸಿನ ಕಾಯಿ
* ಸ್ವಲ್ಪ ಕೊತ್ತಂಬರಿ ಸೊಪ್ಪು
* 1/4 ಕಪ್ ಹುಣಸೆ ಹಣ್ಣಿನ ರಸ
* 1 ಚಮಚ ತುಪ್ಪ
ತಯಾರಿಸುವ ವಿಧಾನ:
1. ಬೇಳೆಯನ್ನು 1/2 ಗಂಟೆ ನೀರಿನಲ್ಲಿ ನೆನೆ ಹಾಕಬೇಕು.
2. ನಂತರ ಅದಕ್ಕೆ ಉಪ್ಪು ಮತ್ತು ಅರಿಶಿಣ, ನೀರು ಹಾಕಿ ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಬೇಕು.
3. ಚಕ್ಕೆ ಮತ್ತು ಬೆಳ್ಳುಳ್ಳಿಯನ್ನು ಜಜ್ಜ ಬೇಕು.
4. ಹಸಿಮೆಣಸಿನ ಕಾಯಿ ಮತ್ತು ಕೊತ್ತಂಬರಿ ಸೊಪ್ಪನ್ನು ಕತ್ತರಿಸಬೇಕು.
5. ಸಾರು ಪಾತ್ರೆಯನ್ನು ಬಿಸಿಮಾಡಿ ತುಪ್ಪ ಹಾಕಿ ಅದಕ್ಕೆ ಇಂಗು, ಜೀರಿಗೆ ಮತ್ತು ಸಾಸಿವೆಯನ್ನು ಹಾಕಬೇಕು.
6. ಸಾಸಿವೆ ಚಿಟಪಟ ಶಬ್ದ ಮಾಡುವಾಗ ಕರಿಬೇವಿನ ಎಲೆಯನ್ನು ಹಾಕಬೇಕು.
7. ಅದಕ್ಕೆ ಹಸಿಮೆಣಸಿನಕಾಯಿ ಮತ್ತು ಕೊತ್ತಂಬರಿ ಪುಡಿ ಹಾಕಿ ಮಿಶ್ರ ಮಾಡಿ.
8. ಈಗ ಜಜ್ಜಿದ ಬೆಳ್ಳುಳ್ಳಿ, ಚಕ್ಕೆಮತ್ತು ಬೇಯಿಸಿದ ಬೇಳೆಯನ್ನು ಸೇರಿಸಿ.
9. ಸ್ವಲ್ಪ ಹೊತ್ತು (5 ನಿಮಿಷ) ಕುದಿಸಿದ ನಂತರ ಹುಣಸೆ ಹಣ್ಣಿನ ರಸ ಹಾಗೂ ಸ್ವಲ್ಪ ಸಕ್ಕರೆ ಸೇರಿಸಿ 5 ನಿಮಿಷ ಕುದಿಸಿ. (ಉಪ್ಪು ಸಾಲದಿದ್ದರೆ ಇನ್ನೂ ಸ್ವಲ್ಪ ಹಾಕಿ).
10. ಈಗ ಕುದಿಯುತ್ತಿರುವ ಬೇಳೆ ಸಾರಿಗೆ ಕೊತ್ತಂಬರಿ ಸೊಪ್ಪು ಹಾಕಿದರೆ ಗುಜರಾತಿ ಶೈಲಿಯ ದಾಲ್ ಕರಿ ರೆಡಿ.



Click it and Unblock the Notifications











