Latest Updates
-
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು!
ಅಡುಗೆ ಆರೋಗ್ಯ: ಸವಿಯಿರಿ ನಿಂಬೆಕಾಯಿ ಸಾರು
ನಿಂಬೆಕಾಯಿ/ನಿಂಬೆ ಹಣ್ಣಿನ ಬಳಕೆ ದಿನನಿತ್ಯ ಅಡುಗೆ ಮನೆಯಲ್ಲಿ ಇದ್ದದ್ದೇ. ಆದರೆ ನಿಂಬೆಯ ಉಪಯೋಗವೂ ಅಷ್ಟೇ ಚೈತನ್ಯದಾಯಕ. ನಿಂಬೆಕಾಯಿ ಸಾರು, ಯಾವುದೇ ಸೂಪ್ ಗೂ ಕಮ್ಮಿಯಿಲ್ಲ. ಸೂಪ್ ಎಂದರೇನು ಎಂದು ತಿಳಿಯೋ ಮೊದಲು ನಾವೆಲ್ಲಾ, ನಿಂಬೆ ಸಾರು, ಹುಣಸೆ ಸಾರು ಮುಂತಾದ ತಿಳಿ ಸಾರುಗಳನ್ನು ಮಾಡಿ ಲೋಟಗಟ್ಟಲೇ ಹೀರಿದ್ದು ಉಂಟು.ದಿನೇ ಅದೇ ತಿಳಿಬೇಳೆ ಸಾರು ಎನ್ನುವವರು ಸುಲಭವಾಗಿ ನಿಂಬೆಸಾರು ಮಾಡಿ ಸವಿಯಬಹುದು.ನಾಲಗೆ ರುಚಿ ಕೆಟ್ಟವರಿಗೆ, ಕೆಮ್ಮು ದಮ್ಮು, ಶೀತ ,ಉಷ್ಣ ಎನ್ನುವವರಿಗೆಲ್ಲಾ ನಿಂಬೆ ಸಾರು ರಾಮಬಾಣ.
ಮನಸ್ವಿನಿ. ನಾರಾವಿ
ತಯಾರಿಸಲು ಬೇಕಾದ ಸಾಮಾಗ್ರಿ:
ನಿಂಬೆ ಹಣ್ಣು : 3 ದೊಡ್ಡ ಗಾತ್ರದ್ದು
ತೊಗರಿಬೇಳೆ:1 ಬಟ್ಟಲು
ಗೂದೆ ಹಣ್ಣು(Tomato):ಹಣ್ಣಾಗಿರೋದು 2
ಹಸಿಮೆನಸಿನಕಾಯಿ: 2
ಕೆಂಪು ಒಣಮೆಣಸಿನ ಕಾಯಿ :3
ಕಡಲೇಬೇಳೆ :1 ಚಮಚ
ಕೊತ್ತಂಬರಿಬೀಜ(ಧನಿಯ):1 ಚಮಚ
ಶುಂಠಿ ರಸ : 1 ಟೀ ಚಮಚ
ಕಡ್ಲೇಕಾಯಿ ಎಣ್ಣೆ ಒಗ್ಗರಣೆಗೆ
ಜೀರಿಗೆ :ಕಾಲು ಚಮಚ
ಮೆಣಸು: ಕಾಲು ಚಮಚ
ಅರಿಶಿನ: ಕಾಲು ಚಮಚ
ಸಾಸಿವೆ: ಕಾಲು ಚಮಚ
ಇಂಗು, ಉಪ್ಪು ರುಚಿಗೆ ತಕ್ಕಷ್ಟು
ಕರಿಬೇವು ಎಲೆ,
ಮಾಡುವ ವಿಧಾನ:
ಶುದ್ಧವಾದ ನೀರಿಗೆ ತೊಗರಿಬೇಳೆ ಯನ್ನು ಹಾಕಿ ಬೇಯಿಸಿ. ಬೇಯಿಸುವಾಗ ಚಿಟಿಕೆ ಅರಿಶಿನ ಹಾಕಿ,ಚೆನ್ನಾಗಿ ತಿರುವುತ್ತಾ ಇರಿ, ಬೇಳೆ ಕರಗಿದ ಮೇಲೆ ಒಲೆಯಿಂದ ಕೆಳಗಿಸಿ.
ಮಸಾಲೆ ಪುಡಿ ತಯಾರಿಕೆ : ಹುರಿದ ಕೆಂಪು ಮೆಣಸಿನಕಾಯಿ, ಕೊತ್ತಂಬರೀಬೀಜ, ಕಡಲೇ ಬೇಳೆ, ಮೆಣಸು, ಜೀರಿಗೆ, ಇಂಗುಗಳನ್ನು ಒಣಗಿಸಿ ಕುಟ್ಟಿ ಪುಡಿ ಮಾಡಿಕೊಳ್ಳಿ,
ಪಾತ್ರೆಯಲ್ಲಿ ಎರಡು ಬಟ್ಟಲು ನೀರು ಕುದಿಸಿ ಅದಕ್ಕೆ ಅರಿಶಿನ ,ಕತ್ತರಿಸಿದ ಟೊಮ್ಯಾಟೊ, ಕತ್ತರಿಸಿದ ಹಸಿಮೆಣಸಿನಕಾಯಿ ಸೇರಿಸಿ, ಕೆಲ ನಿಮಿಷಗಳ ಕಾಲ ಬೇಯಿಸಿ. ನಂತರ ಪುಡಿ ಮಾಡಿದ ಮಸಾಲೆ ಹಾಗೂ ಉಪ್ಪು ಸೇರಿಸಿ, ಸ್ವಲ್ಪ ಹೊತ್ತಿನ ಬಳಿಕ ಬೇಯಿಸಿಟ್ಟ ಬೇಳೆ ಸೇರಿಸಿ. ಬೇಕಿದ್ದರೆ ಸ್ವಲ್ಪ ಹೆಚ್ಚಿಗೆ ನೀರನ್ನು ಬೆರಸಿ.ಚೆನ್ನಾಗಿ ಕುದಿಸಿ.
ನಿಂಬೆರಸ ತೆಗೆದಿಟ್ಟುಕೊಂಡು ಅದಕ್ಕೆ ಸಾಸಿವೆ, ಕರಿಬೇವಿನ ಒಗ್ಗರಣೆ ಕೊಡಿ.ಮೇಲಿನ ಮಿಶ್ರಣಕ್ಕೆ ಒಗ್ಗರಣೆ ಜತೆ ಬೆರೆತ ನಿಂಬೆ ರಸವನ್ನು ಸೇರಿಸಿ ಚೆನ್ನಾಗಿ ಕದಡಿ, ಕುದಿಸಿರಿ. ನಿಂಬೆ ಸಾರು ತಯಾರಾಗುತ್ತದೆ. ಒಗ್ಗರಣೆ ಸಮಯದಲ್ಲಿ ಶುಂಠಿರಸವನ್ನು ಬೆರಸಿ ಹೆಚ್ಚಿನ ಸ್ವಾದವನ್ನು ಪಡೆಯಬಹುದು.
(ದಟ್ಸ್ ಕನ್ನಡ ಪಾಕಶಾಲೆ)



Click it and Unblock the Notifications