Latest Updates
-
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ!
ಅನ್ನದ ಜೊತೆ ನಿಂಬೆ ಸಾರಿದ್ದರೆ ತಿನ್ನಲು ಬಲುರುಚಿ

ಬೇಕಾಗುವ ಸಾಮಾಗ್ರಿಗಳು:
* 1/2 ಕಪ್ ಸಾರು ಬೇಳೆ
* 2 ಹಸಿಮೆಣಸು
* ಒಂದು ಬೆಳ್ಳುಳ್ಳಿ
* 1/2 ಇಂಚಿನ ಶುಂಠಿ
* ಕೊತ್ತಂಬರಿ ಸೊಪ್ಪು
* ಸ್ವಲ್ಪ ಕರಿಬೇವಿನ ಎಲೆ
* 1/2 ದೊಡ್ಡ ನಿಂಬೆಹಣ್ಣು
* 8-10 ಕರಿಮೆಣಸು ಬೀಜ
* 1/4 ಚಮಚ ಅರಿಶಿಣ
* 1/2 ಚಮಚ ಸಾಸಿವೆ
* 1/2 ಚಮಚ ಜೀರಿಗೆ
* 2-3 ಚಮಚ ಎಣ್ಣೆ ಅಥವಾ ತುಪ್ಪ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಬೇಳೆಯನ್ನು ಚೆನ್ನಾಗಿ ತೊಳೆದು ಸ್ವಲ್ಪ ಅರಿಶಿಣ ಹಾಕಿ 2-3 ಕಪ್ ನೀರು ಹಾಕಿ ಪ್ರೆಶರ್ ಕುಕ್ಕರ್ ನಲ್ಲಿ 3 ವಿಶಲ್ ಬರುವವರೆಗೆ ಬೇಯಿಸಬೇಕು.
2. ಈಗ ಬೆಂದ ಬೇಳೆಯನ್ನು ಸೌಟ್ ನಿಂದ ಜಜ್ಜಿ, ಒಂದು ಕಪ್ ನೀರು ಸೇರಿಸಿ 5-10 ನಿಮಿಷ ಹಾಗೇ ಬಿಡಬೇಕು.
3. ಈಗ ಸಾರಿನ ಪಾತ್ರೆಯನ್ನು ಉರಿಯಲ್ಲಿಟ್ಟು ಅದಕ್ಕೆ ಎಣ್ಣೆ ಅಥವಾ ತುಪ್ಪ ಹಾಕಬೇಕು. ಎಣ್ಣೆ ಬಿಸಿಯಾದಾಗ ಅದಕ್ಕೆ ಸಾಸಿವೆಯನ್ನು ಹಾಕಬೇಕು.
4. ಸಾಸಿವೆ ಚಟಾಪಟಾ ಶಬ್ದ ಬಂದ ನಂತರ ಜೀರಿಗೆ, ಜಜ್ಜಿದ ಬೆಳ್ಳುಳ್ಳಿ, ಚಿಕ್ಕದಾಗಿ ಕತ್ತರಿಸಿದ ಶುಂಠಿ, ಹಸಿಮೆಣಸಿನ ಕಾಯಿ, ಕರಿಬೇವಿನ ಎಲೆ, ಪುಡಿಮಾಡಿದ ಕರಿಮೆಣಸು ಮತ್ತು ಹಸಿಮೆಣಸಿನ ಕಾಯಿ ಹಾಕಬೇಕು. ಬೆಳ್ಳುಳ್ಳಿ ಕಂದು ಬಣ್ಣಕ್ಕೆ ತಿರುಗುವಾಗ ಸ್ವಲ್ಪ ಅರಿಶಿಣವನ್ನು ಸೇರಿಸಬೇಕು. ಅರಿಶಿಣ ಕರಿಯಲು ಬಿಡಬಾರದು.
5. ಈಗ ಬೇಯಿಸಿದ ಬೇಳೆಯನ್ನು ಈ ಮಿಶ್ರಣಕ್ಕೆ ಮೆಲ್ಲನೆ ಸುರಿಯಬೇಕು. ನಂತರ ಬೇಯಿಸಬೇಕು. ರಸ ಪಾತ್ರೆಯಿಂದ ಉಕ್ಕಿ ಹೊರಚೆಲ್ಲದಂತೆ ನೋಡಿಕೊಳ್ಳಬೇಕು. ಈಗ ರುಚಿಗೆ ತಕ್ಕ ಉಪ್ಪು ಹಾಕಿ ರಸವನ್ನು ಚೆನ್ನಾಗಿ ಕುದಿಸಬೇಕು. ಈಗ ಸಾರಿಗೆ ನಿಂಬೆರಸ ಹಿಂಡಿ, ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ರುಚಿಕರವಾದ ನಿಂಬೆ ಸಾರು ರೆಡಿ.



Click it and Unblock the Notifications