Latest Updates
-
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ!
ಅನ್ನದ ಜೊತೆ ನಿಂಬೆ ಸಾರಿದ್ದರೆ ತಿನ್ನಲು ಬಲುರುಚಿ

ಬೇಕಾಗುವ ಸಾಮಾಗ್ರಿಗಳು:
* 1/2 ಕಪ್ ಸಾರು ಬೇಳೆ
* 2 ಹಸಿಮೆಣಸು
* ಒಂದು ಬೆಳ್ಳುಳ್ಳಿ
* 1/2 ಇಂಚಿನ ಶುಂಠಿ
* ಕೊತ್ತಂಬರಿ ಸೊಪ್ಪು
* ಸ್ವಲ್ಪ ಕರಿಬೇವಿನ ಎಲೆ
* 1/2 ದೊಡ್ಡ ನಿಂಬೆಹಣ್ಣು
* 8-10 ಕರಿಮೆಣಸು ಬೀಜ
* 1/4 ಚಮಚ ಅರಿಶಿಣ
* 1/2 ಚಮಚ ಸಾಸಿವೆ
* 1/2 ಚಮಚ ಜೀರಿಗೆ
* 2-3 ಚಮಚ ಎಣ್ಣೆ ಅಥವಾ ತುಪ್ಪ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಬೇಳೆಯನ್ನು ಚೆನ್ನಾಗಿ ತೊಳೆದು ಸ್ವಲ್ಪ ಅರಿಶಿಣ ಹಾಕಿ 2-3 ಕಪ್ ನೀರು ಹಾಕಿ ಪ್ರೆಶರ್ ಕುಕ್ಕರ್ ನಲ್ಲಿ 3 ವಿಶಲ್ ಬರುವವರೆಗೆ ಬೇಯಿಸಬೇಕು.
2. ಈಗ ಬೆಂದ ಬೇಳೆಯನ್ನು ಸೌಟ್ ನಿಂದ ಜಜ್ಜಿ, ಒಂದು ಕಪ್ ನೀರು ಸೇರಿಸಿ 5-10 ನಿಮಿಷ ಹಾಗೇ ಬಿಡಬೇಕು.
3. ಈಗ ಸಾರಿನ ಪಾತ್ರೆಯನ್ನು ಉರಿಯಲ್ಲಿಟ್ಟು ಅದಕ್ಕೆ ಎಣ್ಣೆ ಅಥವಾ ತುಪ್ಪ ಹಾಕಬೇಕು. ಎಣ್ಣೆ ಬಿಸಿಯಾದಾಗ ಅದಕ್ಕೆ ಸಾಸಿವೆಯನ್ನು ಹಾಕಬೇಕು.
4. ಸಾಸಿವೆ ಚಟಾಪಟಾ ಶಬ್ದ ಬಂದ ನಂತರ ಜೀರಿಗೆ, ಜಜ್ಜಿದ ಬೆಳ್ಳುಳ್ಳಿ, ಚಿಕ್ಕದಾಗಿ ಕತ್ತರಿಸಿದ ಶುಂಠಿ, ಹಸಿಮೆಣಸಿನ ಕಾಯಿ, ಕರಿಬೇವಿನ ಎಲೆ, ಪುಡಿಮಾಡಿದ ಕರಿಮೆಣಸು ಮತ್ತು ಹಸಿಮೆಣಸಿನ ಕಾಯಿ ಹಾಕಬೇಕು. ಬೆಳ್ಳುಳ್ಳಿ ಕಂದು ಬಣ್ಣಕ್ಕೆ ತಿರುಗುವಾಗ ಸ್ವಲ್ಪ ಅರಿಶಿಣವನ್ನು ಸೇರಿಸಬೇಕು. ಅರಿಶಿಣ ಕರಿಯಲು ಬಿಡಬಾರದು.
5. ಈಗ ಬೇಯಿಸಿದ ಬೇಳೆಯನ್ನು ಈ ಮಿಶ್ರಣಕ್ಕೆ ಮೆಲ್ಲನೆ ಸುರಿಯಬೇಕು. ನಂತರ ಬೇಯಿಸಬೇಕು. ರಸ ಪಾತ್ರೆಯಿಂದ ಉಕ್ಕಿ ಹೊರಚೆಲ್ಲದಂತೆ ನೋಡಿಕೊಳ್ಳಬೇಕು. ಈಗ ರುಚಿಗೆ ತಕ್ಕ ಉಪ್ಪು ಹಾಕಿ ರಸವನ್ನು ಚೆನ್ನಾಗಿ ಕುದಿಸಬೇಕು. ಈಗ ಸಾರಿಗೆ ನಿಂಬೆರಸ ಹಿಂಡಿ, ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ರುಚಿಕರವಾದ ನಿಂಬೆ ಸಾರು ರೆಡಿ.



Click it and Unblock the Notifications